Homeಮುಖಪುಟಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

ಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

- Advertisement -
- Advertisement -

ಪೀಪಲ್ಸ್ ಕಫ್ರ್ಯೂ ಕಾನ್ಸೆಪ್ಟನ್ನು ಮೊಟ್ಟಮೊದಲ ಬಾರಿಗೆ ಕೊಟ್ಟವರು ಅಸ್ಸಾಮಿನ ವಿದ್ಯಾರ್ಥಿ ಗಣಪರಿಷತ್ ನಾಯಕರು. ಅಸ್ಸಾಮಿಗಳಿಗೆ ವಂಚನೆ ಮಾಡಿ ಬೆಂಗಾಳಿ ಬಾಬುಗಳಿಗೆ ಅಸ್ಸಾಂ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟುದುದರ ವಿರುದ್ಧ ಮೊದಲ ಬಾರಿಗೆ ಸೆಟೆದು ನಿಂತದ್ದು ಅಸ್ಸಾಂ ವಿದ್ಯಾರ್ಥಿ ಗಣಪರಿಷತ್. ಆ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ಬಂತು. ಯಾವ ಅಸ್ಸಾಮಿ ಪ್ರಜೆಯೂ ಈ ಚುನಾವಣೆಯಲ್ಲಿ ಮತಹಾಕಲು ಮತಗಟ್ಟೆಗೆ ಹೋಗಬಾರದೆಂದು ಕರೆನೀಡಿ Peoples Curfew ಘೋಷಿಸಿತು.

Peoples Curfew ಒಂದು ಹೊಸ ಪ್ರಯೋಗ. ಸರ್ಕಾರ ಕಫ್ರ್ಯೂ ಹಾಕುವುದು ಬ್ರಿಟಿಷರ ಕಾಲದಿಂದ ಜಾರಿಯಲ್ಲಿರುವ ಕರಾಳ ಶಾಸನ. ಹೋರಾಟಗಾರರು ಐದು ಜನ ಒಟ್ಟಿಗೆ ಸೇರಿದರೆ ಅವರ ಮೇಲೆ ಗುಂಡು ಹಾರಿಸಲು ಪೊಲೀಸರಿಗೆ ಅನುಮತಿ ನೀಡುವ ಶಾಸನ ಅದು.

ಅಸ್ಸಾಂ ವಿದ್ಯಾರ್ಥಿ ಗಣಪರಿಷತ್ತಿನ Peoples curgfew ಸರ್ಕಾರ ಹಾಕುವ ಕಫ್ರ್ಯೂ ಅಲ್ಲ. ಜನತೆ ಹಾಕುವ ಕಫ್ರ್ಯೂ. ಆಶ್ಚರ್ಯವೆಂದರೆ ಜನತೆ, ತಮ್ಮ ಮೇಲೆ ತಾವೇ ಹಾಕಿಕೊಳ್ಳುವ ಪ್ರತಿಬಂಧಕ. ಆ ಆಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ ಜನ ಮನೆಬಿಟ್ಟು ಹೊರಬೀಳಲೇ ಇಲ್ಲ. ಚುನಾವಣೆ ಪ್ರಕ್ರಿಯೆಯಲ್ಲಿ ಅಸ್ಸಾಮಿನ ಜನ ಭಾಗವಹಿಸಲಿಲ್ಲ. ಶೇ.10ರಷ್ಟು ಮಾತ್ರ ಮತದಾನ ನಡೆಯಿತು. ಆದರೂ ಆಡಳಿತ ಪಕ್ಷ ಆ ಚುನಾವಣೆಯ ಫಲಿತಾಂಶವನ್ನು ಘೋಷಿಸಿತು.

ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದುಬಂದಿದ್ದು, ಕಾಂಗ್ರೆಸ್ ಪಕ್ಷ ಸರ್ಕಾರವನ್ನು ರಚಿಸಿತು. ಆದರೆ ಆ ಸರ್ಕಾರ ಬಹಳ ದಿನ ಉಳಿಯಲಿಲ್ಲ. ರಾಷ್ಟ್ರಾಧ್ಯಕ್ಷರ ಆಳ್ವಿಕೆಯನ್ನು ಅಸ್ಸಾಮಿನ ಮೇಲೆ ಹೇರಲಾಯಿತು. ಆರು ತಿಂಗಳೊಳಗೆ ಮತ್ತೆ ಚುನಾವಣೆ ನಡೆದು ವಿದ್ಯಾರ್ಥಿ ಗಣಪರಿಷತ್ ಅಭೂತಪೂರ್ವ ಜಯಗಳಿಸಿ ಆಡಳಿತಕ್ಕೆ ಬಂತು. ಜನ ಮನಸ್ಸು ಮಾಡಿದರೆ ಜನರೇ ಕಫ್ರ್ಯೂ ಹಾಕುವುದು ಸಾಧ್ಯ. ಅದು ಯಶಸ್ವಿಯಾಗಿ ಜಾರಿಗೆ ಬರುವುದೂ ಸಾಧ್ಯ.

ಆದರೆ ಇಂದು ಜನತಾ ಕಫ್ರ್ಯೂ ಹೇರಿರುವುದು ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರ! ಇದೊಂದು ವಿರೋಧಾಭಾಸವೇ ಸರಿ. ಮೋದಿಗೆ ಶಾಸನಾನುಸಾರ ಸರ್ಕಾರದಿಂದ ಜಾರಿಯಾಗುವ ಕಫ್ರ್ಯೂ ಹಾಕುವ ಅಧಿಕಾರವಿದೆ. ಜನತಾ ಕಫ್ರ್ಯೂ ಹಾಕುವ ಅಧಿಕಾರವಿಲ್ಲ. ಅದು ಇರುವುದು ಜನರಿಗೆ ಮತ್ತು ಜನರನ್ನು ಪ್ರತಿನಿಧಿಸುವ ಪ್ರಭುತ್ವೇತರ ವೇದಿಕೆಗೆ. ಸರ್ಕಾರಿ ಕಾಯಿದೆ ಪ್ರಕಾರ ಕಫ್ರ್ಯೂ ಹೇರಿದರೆ ಜನ ಎದುರುಬಿದ್ದಾರೆಂದು ಮೋದಿಯವರು ಜನತಾ ಕಫ್ರ್ಯೂ ಹೇರಿದ್ದಾರೆ.

ಅಸ್ಸಾಂನಲ್ಲಿ ವಿದ್ಯಾರ್ಥಿ ಗಣಪರಿಷತ್ ಕಫ್ರ್ಯೂವನ್ನು ಜನತೆ ಮಾತ್ರ ಪಾಲನೆ ಮಾಡಿತು. ಸರ್ಕಾರ ಜನತಾ ಕಫ್ರ್ಯೂವನ್ನು ಮನ್ನಣೆ ಮಾಡಲಿಲ್ಲ. ಈಗ ಮೋದಿ ಸರ್ಕಾರ ಜನತಾ ಕಫ್ರ್ಯೂ ಹೇರಿ ಈ ಜನತಾ ಕಫ್ರ್ಯೂವನ್ನು ಸರ್ಕಾರವೂ ಪಾಲಿಸಬೇಕು, ಪ್ರಜೆಗಳೂ ಪಾಲಿಸಬೇಕು ಎಂದು ಫರ್ಮಾನ್ ನೀಡಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ?

ಏಕೆಂದರೆ ಸರ್ಕಾರಕ್ಕೆ ಜನತಾ ಕಫ್ರ್ಯೂ ಹಾಕಲು ಬರುವುದಿಲ್ಲ. ಅದು ಜನತೆಯ ಹಕ್ಕು. ಜನತೆಯ ಹಕ್ಕನ್ನು ಸರ್ಕಾರ ಕಿತ್ತುಕೊಂಡು ಆ ಹಕ್ಕನ್ನು ಸರ್ಕಾರ ಚಲಾಯಿಸುವುದು ವಿಪರ್ಯಾಸ.

ಕೊರೊನಾ ಭೂತ ನಮ್ಮನ್ನು ಕಾಡುತ್ತಿರುವಾಗ, ಜನರು ಯಾರೂ ಒಂದು ಭಾನುವಾರ ದಯವಿಟ್ಟು ಮನೆಬಿಟ್ಟು ಬರಬೇಡಿ ಎಂದು ಹೇಳುವ ಮತ್ತು ಅದಕ್ಕಾಗಿ ಸರ್ಕಾರಿ ಕಫ್ರ್ಯೂ ಹೇರುವ ಅಧಿಕಾರ ಮೋದಿ ಸರ್ಕಾರಕ್ಕೆ ಇದೆ. ಇದರ ಅವಶ್ಯಕತೆಯನ್ನು ಅರಿತು ಸರ್ಕಾರದೊಡನೆ ಜನ ಸಹಕರಿಸುವುದೂ ಅಗತ್ಯ. ಆದರೆ ಜನತೆಯ ಕಫ್ರ್ಯೂವನ್ನು ಮೋದಿ ಸರ್ಕಾರ ಜಾರಿ ಮಾಡಲು ಹೊರಟಿರುವುದು ವಿರೋಧಾಭಾಸ ಎಂದು ಹೇಳಬೇಕಾಗುತ್ತದೆ. ಇದರ ಬಗೆಗೆ ಮೋದಿಯವರು ಒಂದು ವಿವರಣೆ ನೀಡಬೇಕೆಂದು ಕೇಳಬಯಸುತ್ತೇನೆ. ಸರ್ಕಾರ ತನಗಿಲ್ಲದ ಅಧಿಕಾರ ಬಳಸಿಕೊಂಡು ಜನತಾ ಕಫ್ರ್ಯೂ ಹಾಕಿತು. ಜನ ಇದಕ್ಕೆ ಚೆನ್ನಾಗಿ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಕಾರಣ ಜನಕ್ಕಿರುವ ಪ್ರಾಣಭಯ. ಜನತಾ ಕಫ್ರ್ಯೂವನ್ನು ಒಳ್ಳೇಕಾರಣಕ್ಕೆ ಈಗ ಮೋದಿ ಬಳಸಿದ್ದಾರೆ. ಜನ ಚೆನ್ನಾಗಿಯೂ ಸ್ಪಂದಿಸಿದ್ದಾರೆ. ಮೋದಿಯವರ ಸರ್ಕಾರ ಮುಂದೆ ಜನತಾ ಕಫ್ರ್ಯೂವನ್ನು ಸ್ವಾರ್ಥಕ್ಕೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಅದರ ಬಗೆಗೆ ಜನ ಎಚ್ಚರಿಕೆಯಿಂದಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...