Homeಮುಖಪುಟಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

ಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

- Advertisement -
- Advertisement -

ಪೀಪಲ್ಸ್ ಕಫ್ರ್ಯೂ ಕಾನ್ಸೆಪ್ಟನ್ನು ಮೊಟ್ಟಮೊದಲ ಬಾರಿಗೆ ಕೊಟ್ಟವರು ಅಸ್ಸಾಮಿನ ವಿದ್ಯಾರ್ಥಿ ಗಣಪರಿಷತ್ ನಾಯಕರು. ಅಸ್ಸಾಮಿಗಳಿಗೆ ವಂಚನೆ ಮಾಡಿ ಬೆಂಗಾಳಿ ಬಾಬುಗಳಿಗೆ ಅಸ್ಸಾಂ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟುದುದರ ವಿರುದ್ಧ ಮೊದಲ ಬಾರಿಗೆ ಸೆಟೆದು ನಿಂತದ್ದು ಅಸ್ಸಾಂ ವಿದ್ಯಾರ್ಥಿ ಗಣಪರಿಷತ್. ಆ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ಬಂತು. ಯಾವ ಅಸ್ಸಾಮಿ ಪ್ರಜೆಯೂ ಈ ಚುನಾವಣೆಯಲ್ಲಿ ಮತಹಾಕಲು ಮತಗಟ್ಟೆಗೆ ಹೋಗಬಾರದೆಂದು ಕರೆನೀಡಿ Peoples Curfew ಘೋಷಿಸಿತು.

Peoples Curfew ಒಂದು ಹೊಸ ಪ್ರಯೋಗ. ಸರ್ಕಾರ ಕಫ್ರ್ಯೂ ಹಾಕುವುದು ಬ್ರಿಟಿಷರ ಕಾಲದಿಂದ ಜಾರಿಯಲ್ಲಿರುವ ಕರಾಳ ಶಾಸನ. ಹೋರಾಟಗಾರರು ಐದು ಜನ ಒಟ್ಟಿಗೆ ಸೇರಿದರೆ ಅವರ ಮೇಲೆ ಗುಂಡು ಹಾರಿಸಲು ಪೊಲೀಸರಿಗೆ ಅನುಮತಿ ನೀಡುವ ಶಾಸನ ಅದು.

ಅಸ್ಸಾಂ ವಿದ್ಯಾರ್ಥಿ ಗಣಪರಿಷತ್ತಿನ Peoples curgfew ಸರ್ಕಾರ ಹಾಕುವ ಕಫ್ರ್ಯೂ ಅಲ್ಲ. ಜನತೆ ಹಾಕುವ ಕಫ್ರ್ಯೂ. ಆಶ್ಚರ್ಯವೆಂದರೆ ಜನತೆ, ತಮ್ಮ ಮೇಲೆ ತಾವೇ ಹಾಕಿಕೊಳ್ಳುವ ಪ್ರತಿಬಂಧಕ. ಆ ಆಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ ಜನ ಮನೆಬಿಟ್ಟು ಹೊರಬೀಳಲೇ ಇಲ್ಲ. ಚುನಾವಣೆ ಪ್ರಕ್ರಿಯೆಯಲ್ಲಿ ಅಸ್ಸಾಮಿನ ಜನ ಭಾಗವಹಿಸಲಿಲ್ಲ. ಶೇ.10ರಷ್ಟು ಮಾತ್ರ ಮತದಾನ ನಡೆಯಿತು. ಆದರೂ ಆಡಳಿತ ಪಕ್ಷ ಆ ಚುನಾವಣೆಯ ಫಲಿತಾಂಶವನ್ನು ಘೋಷಿಸಿತು.

ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದುಬಂದಿದ್ದು, ಕಾಂಗ್ರೆಸ್ ಪಕ್ಷ ಸರ್ಕಾರವನ್ನು ರಚಿಸಿತು. ಆದರೆ ಆ ಸರ್ಕಾರ ಬಹಳ ದಿನ ಉಳಿಯಲಿಲ್ಲ. ರಾಷ್ಟ್ರಾಧ್ಯಕ್ಷರ ಆಳ್ವಿಕೆಯನ್ನು ಅಸ್ಸಾಮಿನ ಮೇಲೆ ಹೇರಲಾಯಿತು. ಆರು ತಿಂಗಳೊಳಗೆ ಮತ್ತೆ ಚುನಾವಣೆ ನಡೆದು ವಿದ್ಯಾರ್ಥಿ ಗಣಪರಿಷತ್ ಅಭೂತಪೂರ್ವ ಜಯಗಳಿಸಿ ಆಡಳಿತಕ್ಕೆ ಬಂತು. ಜನ ಮನಸ್ಸು ಮಾಡಿದರೆ ಜನರೇ ಕಫ್ರ್ಯೂ ಹಾಕುವುದು ಸಾಧ್ಯ. ಅದು ಯಶಸ್ವಿಯಾಗಿ ಜಾರಿಗೆ ಬರುವುದೂ ಸಾಧ್ಯ.

ಆದರೆ ಇಂದು ಜನತಾ ಕಫ್ರ್ಯೂ ಹೇರಿರುವುದು ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರ! ಇದೊಂದು ವಿರೋಧಾಭಾಸವೇ ಸರಿ. ಮೋದಿಗೆ ಶಾಸನಾನುಸಾರ ಸರ್ಕಾರದಿಂದ ಜಾರಿಯಾಗುವ ಕಫ್ರ್ಯೂ ಹಾಕುವ ಅಧಿಕಾರವಿದೆ. ಜನತಾ ಕಫ್ರ್ಯೂ ಹಾಕುವ ಅಧಿಕಾರವಿಲ್ಲ. ಅದು ಇರುವುದು ಜನರಿಗೆ ಮತ್ತು ಜನರನ್ನು ಪ್ರತಿನಿಧಿಸುವ ಪ್ರಭುತ್ವೇತರ ವೇದಿಕೆಗೆ. ಸರ್ಕಾರಿ ಕಾಯಿದೆ ಪ್ರಕಾರ ಕಫ್ರ್ಯೂ ಹೇರಿದರೆ ಜನ ಎದುರುಬಿದ್ದಾರೆಂದು ಮೋದಿಯವರು ಜನತಾ ಕಫ್ರ್ಯೂ ಹೇರಿದ್ದಾರೆ.

ಅಸ್ಸಾಂನಲ್ಲಿ ವಿದ್ಯಾರ್ಥಿ ಗಣಪರಿಷತ್ ಕಫ್ರ್ಯೂವನ್ನು ಜನತೆ ಮಾತ್ರ ಪಾಲನೆ ಮಾಡಿತು. ಸರ್ಕಾರ ಜನತಾ ಕಫ್ರ್ಯೂವನ್ನು ಮನ್ನಣೆ ಮಾಡಲಿಲ್ಲ. ಈಗ ಮೋದಿ ಸರ್ಕಾರ ಜನತಾ ಕಫ್ರ್ಯೂ ಹೇರಿ ಈ ಜನತಾ ಕಫ್ರ್ಯೂವನ್ನು ಸರ್ಕಾರವೂ ಪಾಲಿಸಬೇಕು, ಪ್ರಜೆಗಳೂ ಪಾಲಿಸಬೇಕು ಎಂದು ಫರ್ಮಾನ್ ನೀಡಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ?

ಏಕೆಂದರೆ ಸರ್ಕಾರಕ್ಕೆ ಜನತಾ ಕಫ್ರ್ಯೂ ಹಾಕಲು ಬರುವುದಿಲ್ಲ. ಅದು ಜನತೆಯ ಹಕ್ಕು. ಜನತೆಯ ಹಕ್ಕನ್ನು ಸರ್ಕಾರ ಕಿತ್ತುಕೊಂಡು ಆ ಹಕ್ಕನ್ನು ಸರ್ಕಾರ ಚಲಾಯಿಸುವುದು ವಿಪರ್ಯಾಸ.

ಕೊರೊನಾ ಭೂತ ನಮ್ಮನ್ನು ಕಾಡುತ್ತಿರುವಾಗ, ಜನರು ಯಾರೂ ಒಂದು ಭಾನುವಾರ ದಯವಿಟ್ಟು ಮನೆಬಿಟ್ಟು ಬರಬೇಡಿ ಎಂದು ಹೇಳುವ ಮತ್ತು ಅದಕ್ಕಾಗಿ ಸರ್ಕಾರಿ ಕಫ್ರ್ಯೂ ಹೇರುವ ಅಧಿಕಾರ ಮೋದಿ ಸರ್ಕಾರಕ್ಕೆ ಇದೆ. ಇದರ ಅವಶ್ಯಕತೆಯನ್ನು ಅರಿತು ಸರ್ಕಾರದೊಡನೆ ಜನ ಸಹಕರಿಸುವುದೂ ಅಗತ್ಯ. ಆದರೆ ಜನತೆಯ ಕಫ್ರ್ಯೂವನ್ನು ಮೋದಿ ಸರ್ಕಾರ ಜಾರಿ ಮಾಡಲು ಹೊರಟಿರುವುದು ವಿರೋಧಾಭಾಸ ಎಂದು ಹೇಳಬೇಕಾಗುತ್ತದೆ. ಇದರ ಬಗೆಗೆ ಮೋದಿಯವರು ಒಂದು ವಿವರಣೆ ನೀಡಬೇಕೆಂದು ಕೇಳಬಯಸುತ್ತೇನೆ. ಸರ್ಕಾರ ತನಗಿಲ್ಲದ ಅಧಿಕಾರ ಬಳಸಿಕೊಂಡು ಜನತಾ ಕಫ್ರ್ಯೂ ಹಾಕಿತು. ಜನ ಇದಕ್ಕೆ ಚೆನ್ನಾಗಿ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಕಾರಣ ಜನಕ್ಕಿರುವ ಪ್ರಾಣಭಯ. ಜನತಾ ಕಫ್ರ್ಯೂವನ್ನು ಒಳ್ಳೇಕಾರಣಕ್ಕೆ ಈಗ ಮೋದಿ ಬಳಸಿದ್ದಾರೆ. ಜನ ಚೆನ್ನಾಗಿಯೂ ಸ್ಪಂದಿಸಿದ್ದಾರೆ. ಮೋದಿಯವರ ಸರ್ಕಾರ ಮುಂದೆ ಜನತಾ ಕಫ್ರ್ಯೂವನ್ನು ಸ್ವಾರ್ಥಕ್ಕೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಅದರ ಬಗೆಗೆ ಜನ ಎಚ್ಚರಿಕೆಯಿಂದಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...