Homeಮುಖಪುಟಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

ಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

- Advertisement -
- Advertisement -

ಪೀಪಲ್ಸ್ ಕಫ್ರ್ಯೂ ಕಾನ್ಸೆಪ್ಟನ್ನು ಮೊಟ್ಟಮೊದಲ ಬಾರಿಗೆ ಕೊಟ್ಟವರು ಅಸ್ಸಾಮಿನ ವಿದ್ಯಾರ್ಥಿ ಗಣಪರಿಷತ್ ನಾಯಕರು. ಅಸ್ಸಾಮಿಗಳಿಗೆ ವಂಚನೆ ಮಾಡಿ ಬೆಂಗಾಳಿ ಬಾಬುಗಳಿಗೆ ಅಸ್ಸಾಂ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟುದುದರ ವಿರುದ್ಧ ಮೊದಲ ಬಾರಿಗೆ ಸೆಟೆದು ನಿಂತದ್ದು ಅಸ್ಸಾಂ ವಿದ್ಯಾರ್ಥಿ ಗಣಪರಿಷತ್. ಆ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ಬಂತು. ಯಾವ ಅಸ್ಸಾಮಿ ಪ್ರಜೆಯೂ ಈ ಚುನಾವಣೆಯಲ್ಲಿ ಮತಹಾಕಲು ಮತಗಟ್ಟೆಗೆ ಹೋಗಬಾರದೆಂದು ಕರೆನೀಡಿ Peoples Curfew ಘೋಷಿಸಿತು.

Peoples Curfew ಒಂದು ಹೊಸ ಪ್ರಯೋಗ. ಸರ್ಕಾರ ಕಫ್ರ್ಯೂ ಹಾಕುವುದು ಬ್ರಿಟಿಷರ ಕಾಲದಿಂದ ಜಾರಿಯಲ್ಲಿರುವ ಕರಾಳ ಶಾಸನ. ಹೋರಾಟಗಾರರು ಐದು ಜನ ಒಟ್ಟಿಗೆ ಸೇರಿದರೆ ಅವರ ಮೇಲೆ ಗುಂಡು ಹಾರಿಸಲು ಪೊಲೀಸರಿಗೆ ಅನುಮತಿ ನೀಡುವ ಶಾಸನ ಅದು.

ಅಸ್ಸಾಂ ವಿದ್ಯಾರ್ಥಿ ಗಣಪರಿಷತ್ತಿನ Peoples curgfew ಸರ್ಕಾರ ಹಾಕುವ ಕಫ್ರ್ಯೂ ಅಲ್ಲ. ಜನತೆ ಹಾಕುವ ಕಫ್ರ್ಯೂ. ಆಶ್ಚರ್ಯವೆಂದರೆ ಜನತೆ, ತಮ್ಮ ಮೇಲೆ ತಾವೇ ಹಾಕಿಕೊಳ್ಳುವ ಪ್ರತಿಬಂಧಕ. ಆ ಆಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ ಜನ ಮನೆಬಿಟ್ಟು ಹೊರಬೀಳಲೇ ಇಲ್ಲ. ಚುನಾವಣೆ ಪ್ರಕ್ರಿಯೆಯಲ್ಲಿ ಅಸ್ಸಾಮಿನ ಜನ ಭಾಗವಹಿಸಲಿಲ್ಲ. ಶೇ.10ರಷ್ಟು ಮಾತ್ರ ಮತದಾನ ನಡೆಯಿತು. ಆದರೂ ಆಡಳಿತ ಪಕ್ಷ ಆ ಚುನಾವಣೆಯ ಫಲಿತಾಂಶವನ್ನು ಘೋಷಿಸಿತು.

ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದುಬಂದಿದ್ದು, ಕಾಂಗ್ರೆಸ್ ಪಕ್ಷ ಸರ್ಕಾರವನ್ನು ರಚಿಸಿತು. ಆದರೆ ಆ ಸರ್ಕಾರ ಬಹಳ ದಿನ ಉಳಿಯಲಿಲ್ಲ. ರಾಷ್ಟ್ರಾಧ್ಯಕ್ಷರ ಆಳ್ವಿಕೆಯನ್ನು ಅಸ್ಸಾಮಿನ ಮೇಲೆ ಹೇರಲಾಯಿತು. ಆರು ತಿಂಗಳೊಳಗೆ ಮತ್ತೆ ಚುನಾವಣೆ ನಡೆದು ವಿದ್ಯಾರ್ಥಿ ಗಣಪರಿಷತ್ ಅಭೂತಪೂರ್ವ ಜಯಗಳಿಸಿ ಆಡಳಿತಕ್ಕೆ ಬಂತು. ಜನ ಮನಸ್ಸು ಮಾಡಿದರೆ ಜನರೇ ಕಫ್ರ್ಯೂ ಹಾಕುವುದು ಸಾಧ್ಯ. ಅದು ಯಶಸ್ವಿಯಾಗಿ ಜಾರಿಗೆ ಬರುವುದೂ ಸಾಧ್ಯ.

ಆದರೆ ಇಂದು ಜನತಾ ಕಫ್ರ್ಯೂ ಹೇರಿರುವುದು ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರ! ಇದೊಂದು ವಿರೋಧಾಭಾಸವೇ ಸರಿ. ಮೋದಿಗೆ ಶಾಸನಾನುಸಾರ ಸರ್ಕಾರದಿಂದ ಜಾರಿಯಾಗುವ ಕಫ್ರ್ಯೂ ಹಾಕುವ ಅಧಿಕಾರವಿದೆ. ಜನತಾ ಕಫ್ರ್ಯೂ ಹಾಕುವ ಅಧಿಕಾರವಿಲ್ಲ. ಅದು ಇರುವುದು ಜನರಿಗೆ ಮತ್ತು ಜನರನ್ನು ಪ್ರತಿನಿಧಿಸುವ ಪ್ರಭುತ್ವೇತರ ವೇದಿಕೆಗೆ. ಸರ್ಕಾರಿ ಕಾಯಿದೆ ಪ್ರಕಾರ ಕಫ್ರ್ಯೂ ಹೇರಿದರೆ ಜನ ಎದುರುಬಿದ್ದಾರೆಂದು ಮೋದಿಯವರು ಜನತಾ ಕಫ್ರ್ಯೂ ಹೇರಿದ್ದಾರೆ.

ಅಸ್ಸಾಂನಲ್ಲಿ ವಿದ್ಯಾರ್ಥಿ ಗಣಪರಿಷತ್ ಕಫ್ರ್ಯೂವನ್ನು ಜನತೆ ಮಾತ್ರ ಪಾಲನೆ ಮಾಡಿತು. ಸರ್ಕಾರ ಜನತಾ ಕಫ್ರ್ಯೂವನ್ನು ಮನ್ನಣೆ ಮಾಡಲಿಲ್ಲ. ಈಗ ಮೋದಿ ಸರ್ಕಾರ ಜನತಾ ಕಫ್ರ್ಯೂ ಹೇರಿ ಈ ಜನತಾ ಕಫ್ರ್ಯೂವನ್ನು ಸರ್ಕಾರವೂ ಪಾಲಿಸಬೇಕು, ಪ್ರಜೆಗಳೂ ಪಾಲಿಸಬೇಕು ಎಂದು ಫರ್ಮಾನ್ ನೀಡಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ?

ಏಕೆಂದರೆ ಸರ್ಕಾರಕ್ಕೆ ಜನತಾ ಕಫ್ರ್ಯೂ ಹಾಕಲು ಬರುವುದಿಲ್ಲ. ಅದು ಜನತೆಯ ಹಕ್ಕು. ಜನತೆಯ ಹಕ್ಕನ್ನು ಸರ್ಕಾರ ಕಿತ್ತುಕೊಂಡು ಆ ಹಕ್ಕನ್ನು ಸರ್ಕಾರ ಚಲಾಯಿಸುವುದು ವಿಪರ್ಯಾಸ.

ಕೊರೊನಾ ಭೂತ ನಮ್ಮನ್ನು ಕಾಡುತ್ತಿರುವಾಗ, ಜನರು ಯಾರೂ ಒಂದು ಭಾನುವಾರ ದಯವಿಟ್ಟು ಮನೆಬಿಟ್ಟು ಬರಬೇಡಿ ಎಂದು ಹೇಳುವ ಮತ್ತು ಅದಕ್ಕಾಗಿ ಸರ್ಕಾರಿ ಕಫ್ರ್ಯೂ ಹೇರುವ ಅಧಿಕಾರ ಮೋದಿ ಸರ್ಕಾರಕ್ಕೆ ಇದೆ. ಇದರ ಅವಶ್ಯಕತೆಯನ್ನು ಅರಿತು ಸರ್ಕಾರದೊಡನೆ ಜನ ಸಹಕರಿಸುವುದೂ ಅಗತ್ಯ. ಆದರೆ ಜನತೆಯ ಕಫ್ರ್ಯೂವನ್ನು ಮೋದಿ ಸರ್ಕಾರ ಜಾರಿ ಮಾಡಲು ಹೊರಟಿರುವುದು ವಿರೋಧಾಭಾಸ ಎಂದು ಹೇಳಬೇಕಾಗುತ್ತದೆ. ಇದರ ಬಗೆಗೆ ಮೋದಿಯವರು ಒಂದು ವಿವರಣೆ ನೀಡಬೇಕೆಂದು ಕೇಳಬಯಸುತ್ತೇನೆ. ಸರ್ಕಾರ ತನಗಿಲ್ಲದ ಅಧಿಕಾರ ಬಳಸಿಕೊಂಡು ಜನತಾ ಕಫ್ರ್ಯೂ ಹಾಕಿತು. ಜನ ಇದಕ್ಕೆ ಚೆನ್ನಾಗಿ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಕಾರಣ ಜನಕ್ಕಿರುವ ಪ್ರಾಣಭಯ. ಜನತಾ ಕಫ್ರ್ಯೂವನ್ನು ಒಳ್ಳೇಕಾರಣಕ್ಕೆ ಈಗ ಮೋದಿ ಬಳಸಿದ್ದಾರೆ. ಜನ ಚೆನ್ನಾಗಿಯೂ ಸ್ಪಂದಿಸಿದ್ದಾರೆ. ಮೋದಿಯವರ ಸರ್ಕಾರ ಮುಂದೆ ಜನತಾ ಕಫ್ರ್ಯೂವನ್ನು ಸ್ವಾರ್ಥಕ್ಕೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಅದರ ಬಗೆಗೆ ಜನ ಎಚ್ಚರಿಕೆಯಿಂದಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...