Homeಮುಖಪುಟವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

ವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

- Advertisement -
- Advertisement -

ದಲಿತ ಯುವ ನಾಯಕ, ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಫಲಿತಾಂಶ ಪ್ರಕಟಣೆಗೂ ಮುನ್ನವೇ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದರೂ ಜಿಗ್ನೇಶ್‌ ಮೇವಾನಿ ಗೆಲುವಿನ ನಗೆ ಬೀರಿದ್ದಾರೆ. 2017ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಮೇವಾನಿ, ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಆರಂಭಿಕ ಹಿನ್ನಡೆಯನ್ನು ಅನುಭವಿಸಿದರೂ ಸವಾಲುಗಳ ನಡುವೆ ಗೆಲುವಿನ ನಗೆಬೀರಿದ್ದಾರೆ. ಕೊನೆಯ ಹಂತದ ಮತ ಎಣಿಕೆಯವರೆಗೂ ಸೋಲು ಗೆಲುವಿನ ಹಾವು ಏಣಿ ನಡೆದಿತ್ತು.

ವಡ್ಗಾಮ್ ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಕ್ಷೇತ್ರವಾಗಿದ್ದು, ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಮುಸ್ಲಿಂ ಮತದಾರರು ಸುಮಾರು 90,000 ಇದ್ದಾರೆಂದು ಅಂದಾಜಿಸಲಾಗಿದೆ. ವಡ್ಗಾಮ್‌ನ 2.94 ಲಕ್ಷ ಮತದಾರರಲ್ಲಿ ಮೂರನೇ ಒಂದು ಭಾಗದಷ್ಟು ಮುಸ್ಲಿಮರಿದ್ದಾರೆ. ಸುಮಾರು 44,000 ದಲಿತ ಮತದಾರರು ಮತ್ತು 15,000 ರಜಪೂತರು ಇದ್ದಾರೆ. ಉಳಿದಂತೆ ಒಬಿಸಿ ಸಮುದಾಯವಿದೆ.

ಶೇ.48 ಮತ ಹಂಚಿಕೆಯೊಂದಿಗೆ ಒಟ್ಟು 94,765 ಮತಗಳನ್ನು ಗಳಿಸುವಲ್ಲಿ ಜಿಗ್ನೇಶ್‌ ಯಶಸ್ವಿಯಾಗಿದ್ದಾರೆ. 89,837 ಮತಗಳನ್ನು ಗಳಿಸಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮಣಿಭಾಯ್ ಜೇತಾಭಾಯಿ ವಘೇಲಾ ಅವರನ್ನು ಸೋಲಿಸಿ 4,922 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಎಎಪಿ ಅಭ್ಯರ್ಥಿ ದಲ್ಪತ್ ಭಾಟಿಯಾ ಕೂಡ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

ವಡ್ಗಾಮ್ ಕ್ಷೇತ್ರದ ಫಲಿತಾಂಶದ ವಿಚಾರದಲ್ಲಿ ಕೆಲವು ಮಾಧ್ಯಮಗಳು ಮಾಡಿದ ಸುಳ್ಳು ಸುದ್ದಿಗಳು ಗಮನ ಸೆಳೆದಿವೆ. ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಅಂತಿಮ ಫಲಿತಾಂಶ ಹೊರಬೀಳುವ ಮೊದಲೇ ಸುಳ್ಳು ಸುದ್ದಿಗಳನ್ನು ಪ್ರಕಟಿಸಿರುವುದು ಅನುಮಾನಗಳಿಗೆ ಆಸ್ಪದ ನೀಡಿದೆ. ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿದ ಬಳಿಕ ಸುದ್ದಿಯನ್ನು ತಿದ್ದಿವೆ ಅಥವಾ ಡಿಲೀಟ್ ಮಾಡಿವೆ. ಆ ಮೂಲಕ ಅಪಹಾಸ್ಯಕ್ಕೆ ಈಡಾಗಿವೆ. ಕನ್ನಡದ ಜನಪ್ರಿಯ ಮಾಧ್ಯಮವಾದ ‘ವಿಜಯಕರ್ನಾಟಕ’, ಇಂಗ್ಲಿಷ್‌ನ ‘ಹಿಂದೂಸ್ತಾನ್ ಟೈಮ್ಸ್‌’, ‘ದಿ ವೀಕ್‌’ ಸಂಸ್ಥೆಯ ಜಾಲತಾಣಗಳಲ್ಲಿ ಜಿಗ್ನೇಶ್ ಸೋತಿರುವುದಾಗಿ ವರದಿ ಪ್ರಕಟಿಸಲಾಗಿತ್ತು.

May be an image of 1 person and text that says "23C ndia World HT Hindustan Times Cities Entertainment Cricket Congress's. Jignesh Mevani loses Vadgam; BJP's Vaghela wins seat Lifestyle Astrology Gujarat Assembly Election Updated on Dec 08, 2022 02:13 PM IST The 42-year-old Dalit leader Jigneshkumar Natvarlal Mevani ost to Congress turncoat and Bharatiya Janata Party candidate Manibhai Vaghela bya marginof 1,525 votes."
ಹಿಂದೂಸ್ತಾನ್ ಟೈಮ್ಸ್‌ ವರದಿ
‘ವಿಜಯ ಕರ್ನಾಟಕ’ ಪತ್ರಿಕೆ ಮಾಡಿದ್ದ ಟ್ವೀಟ್
‘ದಿ ವೀಕ್‌’ ಪ್ರಕಟಿಸಿದ್ದ ಸುದ್ದಿ ಲಿಂಕ್‌

ಸುಳ್ಳು ಸುದ್ದಿ ವರದಿ ಮಾಡಿದ ಬಳಿಕ ಮಾಧ್ಯಮಗಳು ಮಾಹಿತಿಯನ್ನು ತಿದ್ದಿವೆ. ಆದರೆ ವರದಿಗಳನ್ನು ಸರಿಪಡಿಸುವ ಮೊದಲೇ ಓದುಗರು ಹಂಚಿಕೊಂಡಿರುವ ಸುದ್ದಿಯ ಸ್ಕ್ರೀನ್‌ ಶಾಟ್‌ಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಂಬಿಕಾರ್ಹ ಸುದ್ದಿ ಜಾಲತಾಣಗಳೇ ಸುಳ್ಳು ಸುದ್ದಿಪ್ರಕಟಿಸಿರುವುದು ಏತಕ್ಕೆಂಬ ಪ್ರಶ್ನೆ ಉಳಿದಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಯುವ ಹೋರಾಟಗಾರ ಸರೋವರ್‌ ಬೆಂಕಿಕೆರೆ, “ಕೆಲವು ಮಾಧ್ಯಮಗಳಲ್ಲಿ ಬಂದ ವರದಿಯನ್ನು ನಿಜವೆಂದೇ ಭಾವಿಸಿದ್ದೆವು. ಜಿಗ್ನೇಶ್ ಸೋತಿದ್ದಾರೆಂದು ನಿರಾಶೆಯಾಗಿತ್ತು. ಊನಾ ಚಳವಳಿಯ ಮೂಲಕ ಮುಂಚೂಣಿಗೆ ಬಂದ ಮೇವಾನಿ ಅವರನ್ನು ಸೋಲಿಸಲು ಬಿಜೆಪಿ ಶತಪ್ರಯತ್ನ ಮಾಡಿರುವುದನ್ನು ಗಮನಿಸಿದ್ದೆವು. ಆದರೆ ಮಾಧ್ಯಮಗಳಿಗೂ ಈ ಧಾವಂತವಿದೆ ಎಂಬ ಭಾವನೆಯನ್ನು ಅವುಗಳು ಪ್ರಕಟಿಸಿದ ಸುದ್ದಿಗಳು ಧ್ವನಿಸಿದವು. ಅಂತಿಮವಾಗಿ ಜಿಗ್ನೇಶ್ ಗೆಲುವು ಸಾಧಿಸಿದ್ದಾರೆಂದು ವರದಿಗಳು ಬಂದಾಗ, ಗೊಂದಲ ಉಂಟಾಯಿತು. ಜಿಗ್ನೇಶ್ ಸೋತಿದ್ದಾರೋ, ಗೆದ್ದಿದ್ದಾರೋ ಎಂದು ಮತ್ತೆ ಮತ್ತೆ ಹಲವು ಸುದ್ದಿವಾಹಿನಿಗಳ ವರದಿಗಳನ್ನು ಪರಿಶೀಲಿಸಬೇಕಾಯಿತು. ಮಾಧ್ಯಮಗಳು ಪಕ್ಷಪಾತಿಯಾಗಿ ವರದಿಯನ್ನು ಪ್ರಕಟಿಸಿವೆಯೇ ಎಂಬ ಅನುಮಾನ ಕಾಡಿತು. ವರದಿ ಬರೆಯುವ ಮುನ್ನ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಮುಗ್ದ ಓದುಗರನ್ನು ದಿಕ್ಕುತಪ್ಪಿಸಬಾರದು” ಎಂದು ಆಶಿಸಿದರು.

“ಜಿಗ್ನೇಶ್ ಮೇವಾನಿಯವರನ್ನು ಹೇಗಾದರೂ ಸರಿ (ಕಳ್ಳ ದಾರಿಯಿಂದ) ಸೋಲಿಸಿಯೇ ಸೋಲಿಸುತ್ತೇವೆ ಎಂಬ ಮಾಹಿತಿಯನ್ನು ಬಿಜೆಪಿಯವರು ಮಾಧ್ಯಮಗಳಿಗೆ ಮೊದಲೇ ತಿಳಿಸಿರುವ ಸಾಧ್ಯತೆಯೂ ಇರಬಹುದು, ಅದಕ್ಕಾಗಿಯೇ ಮಾಧ್ಯಮಗಳು ಹೀಗೆ ಸುದ್ದಿ ಮಾಡಿರಲು ಸಾಧ್ಯವಿದೆ” ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...