Homeಮುಖಪುಟವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

ವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

- Advertisement -
- Advertisement -

ದಲಿತ ಯುವ ನಾಯಕ, ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಫಲಿತಾಂಶ ಪ್ರಕಟಣೆಗೂ ಮುನ್ನವೇ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದರೂ ಜಿಗ್ನೇಶ್‌ ಮೇವಾನಿ ಗೆಲುವಿನ ನಗೆ ಬೀರಿದ್ದಾರೆ. 2017ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಮೇವಾನಿ, ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಆರಂಭಿಕ ಹಿನ್ನಡೆಯನ್ನು ಅನುಭವಿಸಿದರೂ ಸವಾಲುಗಳ ನಡುವೆ ಗೆಲುವಿನ ನಗೆಬೀರಿದ್ದಾರೆ. ಕೊನೆಯ ಹಂತದ ಮತ ಎಣಿಕೆಯವರೆಗೂ ಸೋಲು ಗೆಲುವಿನ ಹಾವು ಏಣಿ ನಡೆದಿತ್ತು.

ವಡ್ಗಾಮ್ ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಕ್ಷೇತ್ರವಾಗಿದ್ದು, ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಮುಸ್ಲಿಂ ಮತದಾರರು ಸುಮಾರು 90,000 ಇದ್ದಾರೆಂದು ಅಂದಾಜಿಸಲಾಗಿದೆ. ವಡ್ಗಾಮ್‌ನ 2.94 ಲಕ್ಷ ಮತದಾರರಲ್ಲಿ ಮೂರನೇ ಒಂದು ಭಾಗದಷ್ಟು ಮುಸ್ಲಿಮರಿದ್ದಾರೆ. ಸುಮಾರು 44,000 ದಲಿತ ಮತದಾರರು ಮತ್ತು 15,000 ರಜಪೂತರು ಇದ್ದಾರೆ. ಉಳಿದಂತೆ ಒಬಿಸಿ ಸಮುದಾಯವಿದೆ.

ಶೇ.48 ಮತ ಹಂಚಿಕೆಯೊಂದಿಗೆ ಒಟ್ಟು 94,765 ಮತಗಳನ್ನು ಗಳಿಸುವಲ್ಲಿ ಜಿಗ್ನೇಶ್‌ ಯಶಸ್ವಿಯಾಗಿದ್ದಾರೆ. 89,837 ಮತಗಳನ್ನು ಗಳಿಸಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮಣಿಭಾಯ್ ಜೇತಾಭಾಯಿ ವಘೇಲಾ ಅವರನ್ನು ಸೋಲಿಸಿ 4,922 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಎಎಪಿ ಅಭ್ಯರ್ಥಿ ದಲ್ಪತ್ ಭಾಟಿಯಾ ಕೂಡ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

ವಡ್ಗಾಮ್ ಕ್ಷೇತ್ರದ ಫಲಿತಾಂಶದ ವಿಚಾರದಲ್ಲಿ ಕೆಲವು ಮಾಧ್ಯಮಗಳು ಮಾಡಿದ ಸುಳ್ಳು ಸುದ್ದಿಗಳು ಗಮನ ಸೆಳೆದಿವೆ. ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಅಂತಿಮ ಫಲಿತಾಂಶ ಹೊರಬೀಳುವ ಮೊದಲೇ ಸುಳ್ಳು ಸುದ್ದಿಗಳನ್ನು ಪ್ರಕಟಿಸಿರುವುದು ಅನುಮಾನಗಳಿಗೆ ಆಸ್ಪದ ನೀಡಿದೆ. ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿದ ಬಳಿಕ ಸುದ್ದಿಯನ್ನು ತಿದ್ದಿವೆ ಅಥವಾ ಡಿಲೀಟ್ ಮಾಡಿವೆ. ಆ ಮೂಲಕ ಅಪಹಾಸ್ಯಕ್ಕೆ ಈಡಾಗಿವೆ. ಕನ್ನಡದ ಜನಪ್ರಿಯ ಮಾಧ್ಯಮವಾದ ‘ವಿಜಯಕರ್ನಾಟಕ’, ಇಂಗ್ಲಿಷ್‌ನ ‘ಹಿಂದೂಸ್ತಾನ್ ಟೈಮ್ಸ್‌’, ‘ದಿ ವೀಕ್‌’ ಸಂಸ್ಥೆಯ ಜಾಲತಾಣಗಳಲ್ಲಿ ಜಿಗ್ನೇಶ್ ಸೋತಿರುವುದಾಗಿ ವರದಿ ಪ್ರಕಟಿಸಲಾಗಿತ್ತು.

May be an image of 1 person and text that says "23C ndia World HT Hindustan Times Cities Entertainment Cricket Congress's. Jignesh Mevani loses Vadgam; BJP's Vaghela wins seat Lifestyle Astrology Gujarat Assembly Election Updated on Dec 08, 2022 02:13 PM IST The 42-year-old Dalit leader Jigneshkumar Natvarlal Mevani ost to Congress turncoat and Bharatiya Janata Party candidate Manibhai Vaghela bya marginof 1,525 votes."
ಹಿಂದೂಸ್ತಾನ್ ಟೈಮ್ಸ್‌ ವರದಿ
‘ವಿಜಯ ಕರ್ನಾಟಕ’ ಪತ್ರಿಕೆ ಮಾಡಿದ್ದ ಟ್ವೀಟ್
‘ದಿ ವೀಕ್‌’ ಪ್ರಕಟಿಸಿದ್ದ ಸುದ್ದಿ ಲಿಂಕ್‌

ಸುಳ್ಳು ಸುದ್ದಿ ವರದಿ ಮಾಡಿದ ಬಳಿಕ ಮಾಧ್ಯಮಗಳು ಮಾಹಿತಿಯನ್ನು ತಿದ್ದಿವೆ. ಆದರೆ ವರದಿಗಳನ್ನು ಸರಿಪಡಿಸುವ ಮೊದಲೇ ಓದುಗರು ಹಂಚಿಕೊಂಡಿರುವ ಸುದ್ದಿಯ ಸ್ಕ್ರೀನ್‌ ಶಾಟ್‌ಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಂಬಿಕಾರ್ಹ ಸುದ್ದಿ ಜಾಲತಾಣಗಳೇ ಸುಳ್ಳು ಸುದ್ದಿಪ್ರಕಟಿಸಿರುವುದು ಏತಕ್ಕೆಂಬ ಪ್ರಶ್ನೆ ಉಳಿದಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಯುವ ಹೋರಾಟಗಾರ ಸರೋವರ್‌ ಬೆಂಕಿಕೆರೆ, “ಕೆಲವು ಮಾಧ್ಯಮಗಳಲ್ಲಿ ಬಂದ ವರದಿಯನ್ನು ನಿಜವೆಂದೇ ಭಾವಿಸಿದ್ದೆವು. ಜಿಗ್ನೇಶ್ ಸೋತಿದ್ದಾರೆಂದು ನಿರಾಶೆಯಾಗಿತ್ತು. ಊನಾ ಚಳವಳಿಯ ಮೂಲಕ ಮುಂಚೂಣಿಗೆ ಬಂದ ಮೇವಾನಿ ಅವರನ್ನು ಸೋಲಿಸಲು ಬಿಜೆಪಿ ಶತಪ್ರಯತ್ನ ಮಾಡಿರುವುದನ್ನು ಗಮನಿಸಿದ್ದೆವು. ಆದರೆ ಮಾಧ್ಯಮಗಳಿಗೂ ಈ ಧಾವಂತವಿದೆ ಎಂಬ ಭಾವನೆಯನ್ನು ಅವುಗಳು ಪ್ರಕಟಿಸಿದ ಸುದ್ದಿಗಳು ಧ್ವನಿಸಿದವು. ಅಂತಿಮವಾಗಿ ಜಿಗ್ನೇಶ್ ಗೆಲುವು ಸಾಧಿಸಿದ್ದಾರೆಂದು ವರದಿಗಳು ಬಂದಾಗ, ಗೊಂದಲ ಉಂಟಾಯಿತು. ಜಿಗ್ನೇಶ್ ಸೋತಿದ್ದಾರೋ, ಗೆದ್ದಿದ್ದಾರೋ ಎಂದು ಮತ್ತೆ ಮತ್ತೆ ಹಲವು ಸುದ್ದಿವಾಹಿನಿಗಳ ವರದಿಗಳನ್ನು ಪರಿಶೀಲಿಸಬೇಕಾಯಿತು. ಮಾಧ್ಯಮಗಳು ಪಕ್ಷಪಾತಿಯಾಗಿ ವರದಿಯನ್ನು ಪ್ರಕಟಿಸಿವೆಯೇ ಎಂಬ ಅನುಮಾನ ಕಾಡಿತು. ವರದಿ ಬರೆಯುವ ಮುನ್ನ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಮುಗ್ದ ಓದುಗರನ್ನು ದಿಕ್ಕುತಪ್ಪಿಸಬಾರದು” ಎಂದು ಆಶಿಸಿದರು.

“ಜಿಗ್ನೇಶ್ ಮೇವಾನಿಯವರನ್ನು ಹೇಗಾದರೂ ಸರಿ (ಕಳ್ಳ ದಾರಿಯಿಂದ) ಸೋಲಿಸಿಯೇ ಸೋಲಿಸುತ್ತೇವೆ ಎಂಬ ಮಾಹಿತಿಯನ್ನು ಬಿಜೆಪಿಯವರು ಮಾಧ್ಯಮಗಳಿಗೆ ಮೊದಲೇ ತಿಳಿಸಿರುವ ಸಾಧ್ಯತೆಯೂ ಇರಬಹುದು, ಅದಕ್ಕಾಗಿಯೇ ಮಾಧ್ಯಮಗಳು ಹೀಗೆ ಸುದ್ದಿ ಮಾಡಿರಲು ಸಾಧ್ಯವಿದೆ” ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...