Homeಮುಖಪುಟವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

ವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

- Advertisement -
- Advertisement -

ದಲಿತ ಯುವ ನಾಯಕ, ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಫಲಿತಾಂಶ ಪ್ರಕಟಣೆಗೂ ಮುನ್ನವೇ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದರೂ ಜಿಗ್ನೇಶ್‌ ಮೇವಾನಿ ಗೆಲುವಿನ ನಗೆ ಬೀರಿದ್ದಾರೆ. 2017ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಮೇವಾನಿ, ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಆರಂಭಿಕ ಹಿನ್ನಡೆಯನ್ನು ಅನುಭವಿಸಿದರೂ ಸವಾಲುಗಳ ನಡುವೆ ಗೆಲುವಿನ ನಗೆಬೀರಿದ್ದಾರೆ. ಕೊನೆಯ ಹಂತದ ಮತ ಎಣಿಕೆಯವರೆಗೂ ಸೋಲು ಗೆಲುವಿನ ಹಾವು ಏಣಿ ನಡೆದಿತ್ತು.

ವಡ್ಗಾಮ್ ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಕ್ಷೇತ್ರವಾಗಿದ್ದು, ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಮುಸ್ಲಿಂ ಮತದಾರರು ಸುಮಾರು 90,000 ಇದ್ದಾರೆಂದು ಅಂದಾಜಿಸಲಾಗಿದೆ. ವಡ್ಗಾಮ್‌ನ 2.94 ಲಕ್ಷ ಮತದಾರರಲ್ಲಿ ಮೂರನೇ ಒಂದು ಭಾಗದಷ್ಟು ಮುಸ್ಲಿಮರಿದ್ದಾರೆ. ಸುಮಾರು 44,000 ದಲಿತ ಮತದಾರರು ಮತ್ತು 15,000 ರಜಪೂತರು ಇದ್ದಾರೆ. ಉಳಿದಂತೆ ಒಬಿಸಿ ಸಮುದಾಯವಿದೆ.

ಶೇ.48 ಮತ ಹಂಚಿಕೆಯೊಂದಿಗೆ ಒಟ್ಟು 94,765 ಮತಗಳನ್ನು ಗಳಿಸುವಲ್ಲಿ ಜಿಗ್ನೇಶ್‌ ಯಶಸ್ವಿಯಾಗಿದ್ದಾರೆ. 89,837 ಮತಗಳನ್ನು ಗಳಿಸಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮಣಿಭಾಯ್ ಜೇತಾಭಾಯಿ ವಘೇಲಾ ಅವರನ್ನು ಸೋಲಿಸಿ 4,922 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಎಎಪಿ ಅಭ್ಯರ್ಥಿ ದಲ್ಪತ್ ಭಾಟಿಯಾ ಕೂಡ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

ವಡ್ಗಾಮ್ ಕ್ಷೇತ್ರದ ಫಲಿತಾಂಶದ ವಿಚಾರದಲ್ಲಿ ಕೆಲವು ಮಾಧ್ಯಮಗಳು ಮಾಡಿದ ಸುಳ್ಳು ಸುದ್ದಿಗಳು ಗಮನ ಸೆಳೆದಿವೆ. ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಅಂತಿಮ ಫಲಿತಾಂಶ ಹೊರಬೀಳುವ ಮೊದಲೇ ಸುಳ್ಳು ಸುದ್ದಿಗಳನ್ನು ಪ್ರಕಟಿಸಿರುವುದು ಅನುಮಾನಗಳಿಗೆ ಆಸ್ಪದ ನೀಡಿದೆ. ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿದ ಬಳಿಕ ಸುದ್ದಿಯನ್ನು ತಿದ್ದಿವೆ ಅಥವಾ ಡಿಲೀಟ್ ಮಾಡಿವೆ. ಆ ಮೂಲಕ ಅಪಹಾಸ್ಯಕ್ಕೆ ಈಡಾಗಿವೆ. ಕನ್ನಡದ ಜನಪ್ರಿಯ ಮಾಧ್ಯಮವಾದ ‘ವಿಜಯಕರ್ನಾಟಕ’, ಇಂಗ್ಲಿಷ್‌ನ ‘ಹಿಂದೂಸ್ತಾನ್ ಟೈಮ್ಸ್‌’, ‘ದಿ ವೀಕ್‌’ ಸಂಸ್ಥೆಯ ಜಾಲತಾಣಗಳಲ್ಲಿ ಜಿಗ್ನೇಶ್ ಸೋತಿರುವುದಾಗಿ ವರದಿ ಪ್ರಕಟಿಸಲಾಗಿತ್ತು.

May be an image of 1 person and text that says "23C ndia World HT Hindustan Times Cities Entertainment Cricket Congress's. Jignesh Mevani loses Vadgam; BJP's Vaghela wins seat Lifestyle Astrology Gujarat Assembly Election Updated on Dec 08, 2022 02:13 PM IST The 42-year-old Dalit leader Jigneshkumar Natvarlal Mevani ost to Congress turncoat and Bharatiya Janata Party candidate Manibhai Vaghela bya marginof 1,525 votes."
ಹಿಂದೂಸ್ತಾನ್ ಟೈಮ್ಸ್‌ ವರದಿ
‘ವಿಜಯ ಕರ್ನಾಟಕ’ ಪತ್ರಿಕೆ ಮಾಡಿದ್ದ ಟ್ವೀಟ್
‘ದಿ ವೀಕ್‌’ ಪ್ರಕಟಿಸಿದ್ದ ಸುದ್ದಿ ಲಿಂಕ್‌

ಸುಳ್ಳು ಸುದ್ದಿ ವರದಿ ಮಾಡಿದ ಬಳಿಕ ಮಾಧ್ಯಮಗಳು ಮಾಹಿತಿಯನ್ನು ತಿದ್ದಿವೆ. ಆದರೆ ವರದಿಗಳನ್ನು ಸರಿಪಡಿಸುವ ಮೊದಲೇ ಓದುಗರು ಹಂಚಿಕೊಂಡಿರುವ ಸುದ್ದಿಯ ಸ್ಕ್ರೀನ್‌ ಶಾಟ್‌ಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಂಬಿಕಾರ್ಹ ಸುದ್ದಿ ಜಾಲತಾಣಗಳೇ ಸುಳ್ಳು ಸುದ್ದಿಪ್ರಕಟಿಸಿರುವುದು ಏತಕ್ಕೆಂಬ ಪ್ರಶ್ನೆ ಉಳಿದಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಯುವ ಹೋರಾಟಗಾರ ಸರೋವರ್‌ ಬೆಂಕಿಕೆರೆ, “ಕೆಲವು ಮಾಧ್ಯಮಗಳಲ್ಲಿ ಬಂದ ವರದಿಯನ್ನು ನಿಜವೆಂದೇ ಭಾವಿಸಿದ್ದೆವು. ಜಿಗ್ನೇಶ್ ಸೋತಿದ್ದಾರೆಂದು ನಿರಾಶೆಯಾಗಿತ್ತು. ಊನಾ ಚಳವಳಿಯ ಮೂಲಕ ಮುಂಚೂಣಿಗೆ ಬಂದ ಮೇವಾನಿ ಅವರನ್ನು ಸೋಲಿಸಲು ಬಿಜೆಪಿ ಶತಪ್ರಯತ್ನ ಮಾಡಿರುವುದನ್ನು ಗಮನಿಸಿದ್ದೆವು. ಆದರೆ ಮಾಧ್ಯಮಗಳಿಗೂ ಈ ಧಾವಂತವಿದೆ ಎಂಬ ಭಾವನೆಯನ್ನು ಅವುಗಳು ಪ್ರಕಟಿಸಿದ ಸುದ್ದಿಗಳು ಧ್ವನಿಸಿದವು. ಅಂತಿಮವಾಗಿ ಜಿಗ್ನೇಶ್ ಗೆಲುವು ಸಾಧಿಸಿದ್ದಾರೆಂದು ವರದಿಗಳು ಬಂದಾಗ, ಗೊಂದಲ ಉಂಟಾಯಿತು. ಜಿಗ್ನೇಶ್ ಸೋತಿದ್ದಾರೋ, ಗೆದ್ದಿದ್ದಾರೋ ಎಂದು ಮತ್ತೆ ಮತ್ತೆ ಹಲವು ಸುದ್ದಿವಾಹಿನಿಗಳ ವರದಿಗಳನ್ನು ಪರಿಶೀಲಿಸಬೇಕಾಯಿತು. ಮಾಧ್ಯಮಗಳು ಪಕ್ಷಪಾತಿಯಾಗಿ ವರದಿಯನ್ನು ಪ್ರಕಟಿಸಿವೆಯೇ ಎಂಬ ಅನುಮಾನ ಕಾಡಿತು. ವರದಿ ಬರೆಯುವ ಮುನ್ನ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಮುಗ್ದ ಓದುಗರನ್ನು ದಿಕ್ಕುತಪ್ಪಿಸಬಾರದು” ಎಂದು ಆಶಿಸಿದರು.

“ಜಿಗ್ನೇಶ್ ಮೇವಾನಿಯವರನ್ನು ಹೇಗಾದರೂ ಸರಿ (ಕಳ್ಳ ದಾರಿಯಿಂದ) ಸೋಲಿಸಿಯೇ ಸೋಲಿಸುತ್ತೇವೆ ಎಂಬ ಮಾಹಿತಿಯನ್ನು ಬಿಜೆಪಿಯವರು ಮಾಧ್ಯಮಗಳಿಗೆ ಮೊದಲೇ ತಿಳಿಸಿರುವ ಸಾಧ್ಯತೆಯೂ ಇರಬಹುದು, ಅದಕ್ಕಾಗಿಯೇ ಮಾಧ್ಯಮಗಳು ಹೀಗೆ ಸುದ್ದಿ ಮಾಡಿರಲು ಸಾಧ್ಯವಿದೆ” ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...