Homeಮುಖಪುಟ‘ನಾನೇಕೆ ಗಾಂಧಿ ಕೊಂದೆ’ ಸಿನಿಮಾ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

‘ನಾನೇಕೆ ಗಾಂಧಿ ಕೊಂದೆ’ ಸಿನಿಮಾ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಲೈಮ್‌ಲೈಟ್‌ ಒಟಿಟಿಯಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್ ಗಾಂಧಿ) ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೋಮವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸಿನಿಮಾ ಬಿಡುಗಡೆಯಿಂದ ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಚ್ಯುತಿಯಾಗಿಲ್ಲ. ಹೀಗಾಗಿ, ಈ ವಿಧಿಯಡಿ ಸಲ್ಲಿಸಲಾಗಿರುವ ಮನವಿಯನ್ನು ಪರಿಗಣಿಸಲಾಗದು ಎಂದು ನ್ಯಾ.ಇಂದಿರಾ ಬ್ಯಾನರ್ಜಿ ನೇತೃತ್ವದ ಪೀಠವು ಹೇಳಿದ್ದು, ಇತರ ದೂರುಗಳಿದ್ದಲ್ಲಿ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯ ಕಲ್ಪಿಸಿದೆ.

ಮೂಲಭೂತ ಹಕ್ಕುಗಳ ಉಲ್ಲಂಘನೆಯ ಪ್ರಶ್ನೆಯಿದ್ದಾಗ ಮಾತ್ರ ಕಲಂ 32ರಡಿ ರಿಟ್‌ ಅರ್ಜಿ ಸಲ್ಲಿಸಬಹುದು. ಇಲ್ಲಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ತೋರುತ್ತಿಲ್ಲ. ಹೀಗಾಗಿ ಮನವಿ ಪರಿಗಣಿಸಲಾಗುವುದಿಲ್ಲ. ಆದರೆ ಅರ್ಜಿದಾರರಿಗೆ ಗಂಭೀರ ಕಳವಳ ಇದ್ದಲ್ಲಿ 226ರ ಅಡಿ ಹೈಕೋರ್ಟ್ ಮೊರೆ ಹೋಗಬಹುದು ಎಂದು ನ್ಯಾಯಾಲಯ ಹೇಳಿದೆ.

“ಈ ಚಲನಚಿತ್ರವು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವರ್ಚಸ್ಸಿಗೆ ಕಳಂಕ ತರಲು, ಹಂತಕ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಲು ಮತ್ತು ಮಹಾತ್ಮಾ ಗಾಂಧಿ ಹತ್ಯೆಯ ಸಂಭ್ರಮಾಚಣೆ ಮಾಡಲು ಉದ್ದೇಶಿಸಿದೆ” ಎಂದು ಅರ್ಜಿ ಸಲ್ಲಿಕೆಯಾಗಿತ್ತು.

ಕೋಮು ಸಾಮರಸ್ಯ ಕದಡುವುದು, ದ್ವೇಷ ಹರಡುವುದು, ಅಶಾಂತಿ ನಿರ್ಮಿಸುವ ಗುರಿಯನ್ನು ಈ ಚಲನಚಿತ್ರ ಹೊಂದಿದೆ. ಸೆನ್ಸಾರ್ ಮಂಡಳಿ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡದೆ ಇರುವುದರಿಂದ ಜನವರಿ 30 ರಂದು ಒಟಿಟಿ ಪ್ಲಾಟ್ ಫಾರ್ಮ್ ‘ಲೈಮ್ ಲೈಟ್’ ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಸ್ತುತ ಸೆನ್ಸಾರ್ ಮಂಡಳಿಯ ವ್ಯಾಪ್ತಿಯಿಂದ ಹೊರಗುಳಿದ ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸುವುದು, ಮತ್ತು ವಿವಿಧ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿಅನಿಯಂತ್ರಿತ, ಸೆನ್ಸಾರ್ ಮಾಡದ ವಿಷಯವನ್ನು ಪ್ರಕಟಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಕೋರಿದ್ದರು.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದರು.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಲಾಗಿದೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧಿ ಹಂತಕ ಗೋಡ್ಸೆ

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ. ಈ ಕುರಿತ ಲೇಖನವನ್ನು ಇಲ್ಲಿ ಓದಬಹುದು.


ಇದನ್ನೂ ಓದಿರಿ: ‘gandhi’s assassin’: ಇತಿಹಾಸದ ತಾಯಿ ಸತ್ಯದ ಶೋಧನೆಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....