Homeಮುಖಪುಟಜನರು ಸಂಕಟದಲ್ಲಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿ ನಗುತ್ತಿದ್ದಾರೆ: ಪ್ರಿಯಾಂಕ ಗಾಂಧಿ

ಜನರು ಸಂಕಟದಲ್ಲಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿ ನಗುತ್ತಿದ್ದಾರೆ: ಪ್ರಿಯಾಂಕ ಗಾಂಧಿ

- Advertisement -
- Advertisement -

ಕೋವಿಡ್ ಎರಡನೆ ಅಲೆಯಿಂದಾಗಿ ದೇಶಾದ್ಯಂತ ಜನರು ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೆ, ಆಕ್ಸಿಜನ್ ಮತ್ತು ಔಷಧಿ ಕೊರತೆಯಿಂದಾಗಿ ನೋವಿನಲ್ಲಿ ನರಳುತ್ತಿದ್ದಾರೆ. ಕೆಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದು ದುಃಖದ ಮಡುವಿನಲ್ಲಿದ್ದಾರೆ. ಆದರೆ ಬಿಜೆಪಿ ನಾಯಕರು ಮಾತ್ರ ಬೃಹತ್ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಾ ವೇದಿಕೆಯಲ್ಲಿ ಜೋಕ್ ಮಾಡಿಕೊಂಡು ನಗುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಏಪ್ರಿಲ್ 23 ರಂದು ಮುರ್ಷಿದಾಬಾದ್, ದಕ್ಷಿಣ ಕೋಲ್ಕತಾ, ಸಿಯುರಿ ಮತ್ತು ಮಾಲ್ಡಾದಲ್ಲಿ ಚುನಾವಣಾ ರ್ಯಾಲಿಗಳನ್ನು ನಡೆಸಲಿದ್ದಾರೆ. ಇದರ ಬದಲಿಗೆ ಮೋದಿ ಜನರೊಂದಿಗೆ ಕುಳಿತು ಪ್ರಸ್ತುತ ಬಿಕ್ಕಟ್ಟಿನ ಪರಿಹಾರದ ಬಗ್ಗೆ ಚರ್ಚಿಸಬೇಕಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಿರೋ ಸರ್ವೆಯ ಪ್ರಕಾರ ಸುಮಾರು 5 ಕೋಟಿ ಜನರಿಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಹೀಗದ್ದರೂ ಯೋಗಿ ಸರ್ಕಾರ ಅತ್ಯಂತ ಕಡಿಮೆ ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಅದರಲ್ಲಿ ಶೇ. 70 ರಷ್ಟು ಆಟಿಂಜನ್ ಟೆಸ್ಟ್ ನಡೆಸಿ, ಶೇ.30 ರಷ್ಟು ಮಾತ್ರ ಆರ್‌ಟಿಪಿಸಿಆರ್ ಟೆಸ್ಟ್ ನಡೆಸುತ್ತಿದೆ. ಖಾಸಗಿ ಲ್ಯಾಬ್‌ಗಳು ಪರೀಕ್ಷೆ ನಡೆಸದಂತೆ ಆದೇಶ ಹೊರಡಿಸಲಾಗಿದೆ. ಈ ಸರ್ಕಾರಕ್ಕೆ ಜನರ ಜೀವಕ್ಕಿಂತ ತಮ್ಮ ಸರ್ಕಾರದ ಪ್ರತಿಷ್ಠೆಯೇ ಮುಖ್ಯವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಂದು ದಿನಕ್ಕೆ 29,754 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕೆ ತಲುಪಿದೆ. 162 ಸಾವುಗಳೊಂದಿಗೆ ಸಾವಿನ ಸಂಖ್ಯೆ 10 ಸಾವಿರ ದಾಟಿದೆ ಎಂದು ಆರೋಗ್ಯ ಇಲಾಖೆ ವರದಿಗಳು ತಿಳಿಸಿವೆ.

ಆಕ್ಸಿಜನ್ ರಫ್ತು ಮಾಡಿದ್ದು ಏಕೆ?

ಭಾರತವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಆಮ್ಲಜನಕ ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೂ ನಮ್ಮ ದೇಶದ ಪ್ರಜೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಸಿಗುತ್ತಿಲ್ಲ ಏಕೆ ಎಂದು ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ. ಈ ಕುರಿಟು ಟ್ವೀಟ್ ಮಾಡಿರುವ ಅವರು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

ಭಾರತದ ಆಮ್ಲಜನಕ ರಫ್ತು

2019-20: 4502 ಮೆ.ಟನ್
2020-21: 9300 ಮೆ.ಟನ್

ನಮ್ಮಲ್ಲಿ ಆಮ್ಲಜನಕದ ಕೊರತೆ ಇರಲಿಲ್ಲ. ನಾವು ಆಮ್ಲಜನಕದ ಅತಿದೊಡ್ಡ ಉತ್ಪಾದಕರು. ಆದರೆ ಕೊರೊನಾದ ಬೆದರಿಕೆಯ ಹೊರತಾಗಿಯೂ, ಸರ್ಕಾರವು 2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? ಎಂದು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...