Homeಮುಖಪುಟಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? - ಸಂಸದೆ ಮಹುವ ಮೊಯಿತ್ರ ಪ್ರಶ್ನೆ

ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? – ಸಂಸದೆ ಮಹುವ ಮೊಯಿತ್ರ ಪ್ರಶ್ನೆ

- Advertisement -
- Advertisement -

ಖ್ಯಾತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೆಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ ಎಂದು ಟಿಎಂಸಿ ಸಂಸದೆ ಮಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

“ದೆಹಲಿ ಪೊಲೀಸರು ಜಾಮೀನನ್ನು ವಿರೋಧಿಸಲಿಲ್ಲ. ಲೈಂಗಿಕ ಕಿರುಕುಳ ಮತ್ತು ಹಲ್ಲೆಗಾಗಿ ಜಾಮೀನು ಪಡೆದ ನಂತರ ವಿಜಯೋತ್ಸವ ಮತ್ತು ಸಂಭ್ರಮದಿಂದ ಆರೋಪಿ ಬಿಜೆಪಿ ಸಂಸದ ನಿನ್ನೆ ಸಂಸತ್ತಿಗೆ ಪ್ರವೇಶಿಸಿದ್ದು ಹೀಗೆ.. ಮೌನ ಗುರು ಗೌರವಾನ್ವಿತ ಪ್ರಧಾನಮಂತ್ರಿಗಳೆ, ದಯವಿಟ್ಟು ಈ ಚಿತ್ರವನ್ನು ನೋಡಿ ಕುಸ್ತಿಪಟುಗಳಿಗೆ ಹೇಗೆ ಅನಿಸುತ್ತದೆ ಎಂದು ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ” ಎಂದು ಬ್ರಿಜ್ ಭೂಷಣ್ ಮಾನ್ಸೂನ್ ಅಧಿವೇಶನಕ್ಕಾಗಿ ಸಂಸತ್ತಿಗೆ ಬಂದ ಫೋಟೊವನ್ನು ಮೊಯಿತ್ರ ಟ್ವೀಟ್ ಮಾಡಿದ್ದಾರೆ.

ಗುರುವಾರ ಜಾಮೀನು ಪಡೆಯುತ್ತಲೇ ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ಹಾಜರಾಗಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ನಗುತ್ತಲೇ ಕಾರು ಹತ್ತಿ ಹೋಗಿದ್ದರು. ಆ ಫೋಟೊವನ್ನು ಹಂಚಿಕೊಂಡಿರುವ ಮಹುವ ಮೊಯಿತ್ರ ಈ ಫೋಟೊ ನೋಡಿದ ಸಂತ್ರಸ್ತ ಕುಸ್ತಿಪಟುಗಳಿಗೆ ಎಷ್ಟು ನೋವಾಗಿರಬೇಡ ಎಂದಿದ್ದಾರೆ.

ಆಲ್ಟ್‌ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ಸಹ ದೆಹಲಿ ಪೊಲೀಸರ ನಡೆಯನ್ನು ವಿರೋಧಿಸಿದ್ದಾರೆ. “ಮೊಹಮ್ಮದ್ ಜುಬೇರ್ ಪ್ರಕರಣದಲ್ಲಿ ಅದು ಸಹ 1983ರ ಸಿನಿಮಾದಲ್ಲಿನ ದೃಶ್ಯವೊಂದನ್ನು ರಾಜಕೀಯ ವಿಡಂಬನೆಯ ಕಾರಣಕ್ಕೆ ಟ್ವೀಟ್ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು. ದೆಹಲಿ ಪೊಲೀಸರು ಅವರ ಜಾಮೀನು ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದ್ದರು. ಆದರೆ ಬ್ರಿಜ್ ಭೂಷಣ್ ಪ್ರಕರಣದಲ್ಲಿ ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪವಿದ್ದರೂ ಸಹ ಅವರಿಗೆ ಕೋರ್ಟ್ ಜಾಮೀನು ನೀಡುವಂತಹ ಸುಲಭ ಮಾರ್ಗವನ್ನು ಆಯ್ದುಕೊಂಡರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರ ನಿರ್ದೇಶನದ ಮೇರೆಗೆ ಅವರು ಬ್ರಿಜ್ ಭೂಷಣ್‌ರವರ ಜಾಮೀನು ಅರ್ಜಿಯನ್ನು ವಿರೋಧಿಸಲಿಲ್ಲ ಎಂದು ಹಲವರು ದೂರಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ಭೂಷಣ್ ಸಿಂಗ್‌ಗೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...