Homeಮುಖಪುಟಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? - ಸಂಸದೆ ಮಹುವ ಮೊಯಿತ್ರ ಪ್ರಶ್ನೆ

ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? – ಸಂಸದೆ ಮಹುವ ಮೊಯಿತ್ರ ಪ್ರಶ್ನೆ

- Advertisement -
- Advertisement -

ಖ್ಯಾತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೆಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ ಎಂದು ಟಿಎಂಸಿ ಸಂಸದೆ ಮಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

“ದೆಹಲಿ ಪೊಲೀಸರು ಜಾಮೀನನ್ನು ವಿರೋಧಿಸಲಿಲ್ಲ. ಲೈಂಗಿಕ ಕಿರುಕುಳ ಮತ್ತು ಹಲ್ಲೆಗಾಗಿ ಜಾಮೀನು ಪಡೆದ ನಂತರ ವಿಜಯೋತ್ಸವ ಮತ್ತು ಸಂಭ್ರಮದಿಂದ ಆರೋಪಿ ಬಿಜೆಪಿ ಸಂಸದ ನಿನ್ನೆ ಸಂಸತ್ತಿಗೆ ಪ್ರವೇಶಿಸಿದ್ದು ಹೀಗೆ.. ಮೌನ ಗುರು ಗೌರವಾನ್ವಿತ ಪ್ರಧಾನಮಂತ್ರಿಗಳೆ, ದಯವಿಟ್ಟು ಈ ಚಿತ್ರವನ್ನು ನೋಡಿ ಕುಸ್ತಿಪಟುಗಳಿಗೆ ಹೇಗೆ ಅನಿಸುತ್ತದೆ ಎಂದು ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ” ಎಂದು ಬ್ರಿಜ್ ಭೂಷಣ್ ಮಾನ್ಸೂನ್ ಅಧಿವೇಶನಕ್ಕಾಗಿ ಸಂಸತ್ತಿಗೆ ಬಂದ ಫೋಟೊವನ್ನು ಮೊಯಿತ್ರ ಟ್ವೀಟ್ ಮಾಡಿದ್ದಾರೆ.

ಗುರುವಾರ ಜಾಮೀನು ಪಡೆಯುತ್ತಲೇ ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ಹಾಜರಾಗಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ನಗುತ್ತಲೇ ಕಾರು ಹತ್ತಿ ಹೋಗಿದ್ದರು. ಆ ಫೋಟೊವನ್ನು ಹಂಚಿಕೊಂಡಿರುವ ಮಹುವ ಮೊಯಿತ್ರ ಈ ಫೋಟೊ ನೋಡಿದ ಸಂತ್ರಸ್ತ ಕುಸ್ತಿಪಟುಗಳಿಗೆ ಎಷ್ಟು ನೋವಾಗಿರಬೇಡ ಎಂದಿದ್ದಾರೆ.

ಆಲ್ಟ್‌ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ಸಹ ದೆಹಲಿ ಪೊಲೀಸರ ನಡೆಯನ್ನು ವಿರೋಧಿಸಿದ್ದಾರೆ. “ಮೊಹಮ್ಮದ್ ಜುಬೇರ್ ಪ್ರಕರಣದಲ್ಲಿ ಅದು ಸಹ 1983ರ ಸಿನಿಮಾದಲ್ಲಿನ ದೃಶ್ಯವೊಂದನ್ನು ರಾಜಕೀಯ ವಿಡಂಬನೆಯ ಕಾರಣಕ್ಕೆ ಟ್ವೀಟ್ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು. ದೆಹಲಿ ಪೊಲೀಸರು ಅವರ ಜಾಮೀನು ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದ್ದರು. ಆದರೆ ಬ್ರಿಜ್ ಭೂಷಣ್ ಪ್ರಕರಣದಲ್ಲಿ ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪವಿದ್ದರೂ ಸಹ ಅವರಿಗೆ ಕೋರ್ಟ್ ಜಾಮೀನು ನೀಡುವಂತಹ ಸುಲಭ ಮಾರ್ಗವನ್ನು ಆಯ್ದುಕೊಂಡರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರ ನಿರ್ದೇಶನದ ಮೇರೆಗೆ ಅವರು ಬ್ರಿಜ್ ಭೂಷಣ್‌ರವರ ಜಾಮೀನು ಅರ್ಜಿಯನ್ನು ವಿರೋಧಿಸಲಿಲ್ಲ ಎಂದು ಹಲವರು ದೂರಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ಭೂಷಣ್ ಸಿಂಗ್‌ಗೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...