Homeಮುಖಪುಟಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

- Advertisement -
- Advertisement -

ತಮ್ಮ ಪಕ್ಷದ ಮತ್ತು ಪ್ರತಿಪಕ್ಷದ ನಾಯಕರಿಗೆ ಶುಭಾಶಯಗಳ ಟ್ವೀಟ್‍ ಮಾಡುವುದನ್ನು ಎಂದೂ ಮರೆಯದ ಪ್ರಧಾನಿ ನರೇಂದ್ರ ಮೋದಿಯವರು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಶುಭಾಶಯದ ಟ್ವೀಟ್‍ ಮಾಡದಿರುವುದು ಆಶ್ಚರ್ಯಕ್ಕೆ, ಗೊಂದಲಗಳಿಗೆ ಕಾರಣವಾಗಿದೆ.

ಉತ್ತರಪ್ರದೇಶ ಸರ್ಕಾರದ ವಿರುದ್ಧ ಮೂಡಿರುವ ಜನಾಕ್ರೋಶವೇ ಇದಕ್ಕೆ ಕಾರಣ ಇರಬಹುದೇ? ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಪ್ರಧಾನಿ ಮೋದಿಯವರಿಗೂ ಅಸಮಾಧಾನವಾಗಿದ್ದು ಆ ಕಾರಣಕ್ಕೇ ಅವರು ಟ್ವೀಟ್‍ ಮಾಡಿ ಶುಭಾಶಯ ಹೇಳಿಲ್ಲ ಎಂಬ ವದಂತಿಗಳು ಹರಡಿವೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು  ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಆದರೆ, ಪ್ರಧಾನಿ ಮೋದಿ ಅವರು ಶನಿವಾರ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಪ್ರಧಾನಿ ಯಾರ ಜನ್ಮದಿನಕ್ಕೂ ಟ್ವೀಟ್ ಮಾಡಿಲ್ಲ ಎಂದಿರುವ ಪಿಎಂಒ ಮೂಲಗಳು, ಪ್ರತಿಪಕ್ಷದವರು ಸೇರಿದಂತೆ ಉನ್ನತ ನಾಯಕರ ಪಟ್ಟಿಯನ್ನು ಸಹ ನೀಡಿದ್ದು, ಇವರ್ಯಾರಿಗೂ ಮೋದಿ ಶುಭಾಶಯ ತಿಳಿಸಿಲ್ಲ ಎಂದು ಹೇಳಿವೆ. ಕಳೆದ ಕೆಲವು ವಾರಗಳಿಂದ ಅವರು ಟ್ವಿಟರ್ ಶುಭಾಶಯಗಳನ್ನು ಕೈ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಂಒ ನೀಡಿದ ಪಟ್ಟಿಯಲ್ಲಿ ಕೇರಳ, ರಾಜಸ್ಥಾನ, ಹರಿಯಾಣ ಮತ್ತು ಗೋವಾ ಮುಖ್ಯಮಂತ್ರಿಗಳು ಸೇರಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರವು ಕೋವಿಡ್ ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂಬ ಟೀಕೆಗಳ ಬಗ್ಗೆ ಬಿಜೆಪಿಯ ಉನ್ನತ ನಾಯಕರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ  ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಕಳೆದ ವಾರ, ಪಕ್ಷದ  ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್,  ಕೇಂದ್ರದ ಮಾಜಿ ಸಚಿವ ರಾಧಾ ಮೋಹನ್ ಸಿಂಗ್ ಎರಡು ದಿನಗಳ ಕಾಲ ವಿಶೇಷ ಸಭೆಗಳನ್ನು ನಡೆಸಿ ಯೋಗಿ ಸೇರಿದಂತೆ ಇತರ ಸಚಿವರು ಮತ್ತು ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.

ಯೋಗಿ ಆದಿತ್ಯನಾಥ್ ಸಾಂಕ್ರಾಮಿಕ ರೋಗವನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಮಂಗಳವಾರ ಬಿ.ಎಲ್ ಸಂತೋಷ್‍ ಟ್ವೀಟ್‍ ಮಾಡಿದ್ದರು.

ಶುಕ್ರವಾರ ಬಿಜೆಪಿ ಮೂಲಗಳು ಯೋಗಿ ಆದಿತ್ಯನಾಥ್ ಅವರನ್ನು ತೆಗೆದುಹಾಕುವುದನ್ನು ತಳ್ಳಿಹಾಕಿದವು. ಆದರೆ ಕ್ಯಾಬಿನೆಟ್ ವಿಸ್ತರಣೆಯ ಸಾಧ್ಯತೆಯಿದೆ ಎಂದು ಸೂಚಿಸಿದವು. ಪ್ರಧಾನಿ ಮೋದಿಯವರ ಆಪ್ತರಲ್ಲಿ ಒಬ್ಬರು ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ಯುಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಪ್ರಮುಖ ಸ್ಥಾನ ನೀಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ತಿಂಗಳಲ್ಲೇ ವಿಸ್ತರಣೆ ನಡೆಯಬಹುದು ಮತ್ತು ಜಾತಿ, ಪ್ರಾದೇಶಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಂತ್ರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬಿ.ಎಲ್ ಸಂತೋಷ್ ಮತ್ತು ರಾಧಾ ಮೋಹನ್ ಸಿಂಗ್  ನಡೆಸಿದ ಸಮಾಲೋಚನೆಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣಗಳನ್ನು ಅವರು ಪರಿಶೀಲಿಸಿದ್ದಾರೆ. ಬಿಜೆಪಿ ತನ್ನ ಭದ್ರಕೋಟೆಗಳಲ್ಲಿ ದೊಡ್ಡ ನಷ್ಟವನ್ನು ಅನುಭವಿಸಿದೆ.

ಎರಡನೇ ಕೋವಿಡ್ ಅಲೆಯ ನಿರ್ವಹಣೆಯಲ್ಲಿ ಯುಪಿ ಸರ್ಕಾರದ ವಿಫಲತೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ ಎಂದು ಪ್ರತಿಪಕ್ಷಗಳು ಮತ್ತು ತಜ್ಞರು ಆರೋಪಿಸಿದ್ದಾರೆ.

ಗಂಗಾದಲ್ಲಿ ತೇಲುತ್ತಿರುವ ದೇಹಗಳ ಚಿತ್ರಗಳು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾದ ನಂತರ ಯೋಗಿ ಸರ್ಕಾದದ ಕಾರ್ಯಶೈಲಿಯ ಕುರಿತು ವ್ಯಾಪಕ ಟೀಕೆಗಳು ಕೇಳಿ ಬಂದಿವೆ. ನಂತರ ಯೋಗಿ ಅವರೇ ಕೋವಿಡ್‍ ನಿರ್ವಹಣೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಈಗ ಪ್ರಕರಣಗಳ ಸಂಖ್ಯೆಯಲ್ಲಿ ಸಣ್ಣ ಇಳಿಮುಖ ಕಂಡು ಬಂದಿದೆ.

ಶನಿವಾರ ಬೆಳಿಗ್ಗೆ 24 ಗಂಟೆಗಳಲ್ಲಿ 1,013 ಹೊಸ ಪ್ರಕರಣಗಳನ್ನು ರಾಜ್ಯ ವರದಿ ಮಾಡಿದೆ. ಸಕ್ರಿಯ ಪ್ರಕರಣಗಳು ಸುಮಾರು 23 ಸಾವಿರಕ್ಕೆ ಇಳಿದಿವೆ.


ಇದನ್ನೂ ಓದಿ: ಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...