Homeಮುಖಪುಟಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

- Advertisement -
- Advertisement -

ತಮ್ಮ ಪಕ್ಷದ ಮತ್ತು ಪ್ರತಿಪಕ್ಷದ ನಾಯಕರಿಗೆ ಶುಭಾಶಯಗಳ ಟ್ವೀಟ್‍ ಮಾಡುವುದನ್ನು ಎಂದೂ ಮರೆಯದ ಪ್ರಧಾನಿ ನರೇಂದ್ರ ಮೋದಿಯವರು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಶುಭಾಶಯದ ಟ್ವೀಟ್‍ ಮಾಡದಿರುವುದು ಆಶ್ಚರ್ಯಕ್ಕೆ, ಗೊಂದಲಗಳಿಗೆ ಕಾರಣವಾಗಿದೆ.

ಉತ್ತರಪ್ರದೇಶ ಸರ್ಕಾರದ ವಿರುದ್ಧ ಮೂಡಿರುವ ಜನಾಕ್ರೋಶವೇ ಇದಕ್ಕೆ ಕಾರಣ ಇರಬಹುದೇ? ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಪ್ರಧಾನಿ ಮೋದಿಯವರಿಗೂ ಅಸಮಾಧಾನವಾಗಿದ್ದು ಆ ಕಾರಣಕ್ಕೇ ಅವರು ಟ್ವೀಟ್‍ ಮಾಡಿ ಶುಭಾಶಯ ಹೇಳಿಲ್ಲ ಎಂಬ ವದಂತಿಗಳು ಹರಡಿವೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು  ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಆದರೆ, ಪ್ರಧಾನಿ ಮೋದಿ ಅವರು ಶನಿವಾರ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಪ್ರಧಾನಿ ಯಾರ ಜನ್ಮದಿನಕ್ಕೂ ಟ್ವೀಟ್ ಮಾಡಿಲ್ಲ ಎಂದಿರುವ ಪಿಎಂಒ ಮೂಲಗಳು, ಪ್ರತಿಪಕ್ಷದವರು ಸೇರಿದಂತೆ ಉನ್ನತ ನಾಯಕರ ಪಟ್ಟಿಯನ್ನು ಸಹ ನೀಡಿದ್ದು, ಇವರ್ಯಾರಿಗೂ ಮೋದಿ ಶುಭಾಶಯ ತಿಳಿಸಿಲ್ಲ ಎಂದು ಹೇಳಿವೆ. ಕಳೆದ ಕೆಲವು ವಾರಗಳಿಂದ ಅವರು ಟ್ವಿಟರ್ ಶುಭಾಶಯಗಳನ್ನು ಕೈ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಂಒ ನೀಡಿದ ಪಟ್ಟಿಯಲ್ಲಿ ಕೇರಳ, ರಾಜಸ್ಥಾನ, ಹರಿಯಾಣ ಮತ್ತು ಗೋವಾ ಮುಖ್ಯಮಂತ್ರಿಗಳು ಸೇರಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರವು ಕೋವಿಡ್ ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂಬ ಟೀಕೆಗಳ ಬಗ್ಗೆ ಬಿಜೆಪಿಯ ಉನ್ನತ ನಾಯಕರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ  ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಕಳೆದ ವಾರ, ಪಕ್ಷದ  ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್,  ಕೇಂದ್ರದ ಮಾಜಿ ಸಚಿವ ರಾಧಾ ಮೋಹನ್ ಸಿಂಗ್ ಎರಡು ದಿನಗಳ ಕಾಲ ವಿಶೇಷ ಸಭೆಗಳನ್ನು ನಡೆಸಿ ಯೋಗಿ ಸೇರಿದಂತೆ ಇತರ ಸಚಿವರು ಮತ್ತು ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.

ಯೋಗಿ ಆದಿತ್ಯನಾಥ್ ಸಾಂಕ್ರಾಮಿಕ ರೋಗವನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಮಂಗಳವಾರ ಬಿ.ಎಲ್ ಸಂತೋಷ್‍ ಟ್ವೀಟ್‍ ಮಾಡಿದ್ದರು.

ಶುಕ್ರವಾರ ಬಿಜೆಪಿ ಮೂಲಗಳು ಯೋಗಿ ಆದಿತ್ಯನಾಥ್ ಅವರನ್ನು ತೆಗೆದುಹಾಕುವುದನ್ನು ತಳ್ಳಿಹಾಕಿದವು. ಆದರೆ ಕ್ಯಾಬಿನೆಟ್ ವಿಸ್ತರಣೆಯ ಸಾಧ್ಯತೆಯಿದೆ ಎಂದು ಸೂಚಿಸಿದವು. ಪ್ರಧಾನಿ ಮೋದಿಯವರ ಆಪ್ತರಲ್ಲಿ ಒಬ್ಬರು ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ಯುಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಪ್ರಮುಖ ಸ್ಥಾನ ನೀಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ತಿಂಗಳಲ್ಲೇ ವಿಸ್ತರಣೆ ನಡೆಯಬಹುದು ಮತ್ತು ಜಾತಿ, ಪ್ರಾದೇಶಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಂತ್ರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬಿ.ಎಲ್ ಸಂತೋಷ್ ಮತ್ತು ರಾಧಾ ಮೋಹನ್ ಸಿಂಗ್  ನಡೆಸಿದ ಸಮಾಲೋಚನೆಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣಗಳನ್ನು ಅವರು ಪರಿಶೀಲಿಸಿದ್ದಾರೆ. ಬಿಜೆಪಿ ತನ್ನ ಭದ್ರಕೋಟೆಗಳಲ್ಲಿ ದೊಡ್ಡ ನಷ್ಟವನ್ನು ಅನುಭವಿಸಿದೆ.

ಎರಡನೇ ಕೋವಿಡ್ ಅಲೆಯ ನಿರ್ವಹಣೆಯಲ್ಲಿ ಯುಪಿ ಸರ್ಕಾರದ ವಿಫಲತೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ ಎಂದು ಪ್ರತಿಪಕ್ಷಗಳು ಮತ್ತು ತಜ್ಞರು ಆರೋಪಿಸಿದ್ದಾರೆ.

ಗಂಗಾದಲ್ಲಿ ತೇಲುತ್ತಿರುವ ದೇಹಗಳ ಚಿತ್ರಗಳು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾದ ನಂತರ ಯೋಗಿ ಸರ್ಕಾದದ ಕಾರ್ಯಶೈಲಿಯ ಕುರಿತು ವ್ಯಾಪಕ ಟೀಕೆಗಳು ಕೇಳಿ ಬಂದಿವೆ. ನಂತರ ಯೋಗಿ ಅವರೇ ಕೋವಿಡ್‍ ನಿರ್ವಹಣೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಈಗ ಪ್ರಕರಣಗಳ ಸಂಖ್ಯೆಯಲ್ಲಿ ಸಣ್ಣ ಇಳಿಮುಖ ಕಂಡು ಬಂದಿದೆ.

ಶನಿವಾರ ಬೆಳಿಗ್ಗೆ 24 ಗಂಟೆಗಳಲ್ಲಿ 1,013 ಹೊಸ ಪ್ರಕರಣಗಳನ್ನು ರಾಜ್ಯ ವರದಿ ಮಾಡಿದೆ. ಸಕ್ರಿಯ ಪ್ರಕರಣಗಳು ಸುಮಾರು 23 ಸಾವಿರಕ್ಕೆ ಇಳಿದಿವೆ.


ಇದನ್ನೂ ಓದಿ: ಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...