Homeಮುಖಪುಟನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ?: ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಶ್ನಿಸಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

ನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ?: ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಶ್ನಿಸಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಭಾರತ -ಪಾಕಿಸ್ತಾನ ವಿಭಜನೆಯ ವೇಳೆ ನಿಮ್ಮ ಕುಟುಂಬ ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ? ಎಂದು ಶಾಲಾ ಶಿಕ್ಷಕಿ ಪ್ರಶ್ನಿಸಿರುವುದಾಗಿ ಆರೋಪಿಸಿ ನಾಲ್ವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ದೆಹಲಿಯ ಶಾಲಾ ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲಾ ಶಿಕ್ಷಕಿಯ ವಿಡಿಯೋ ವೈರಲ್ ಆಗಿರುವ  ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ಬಯಲಾಗಿದೆ. 9ನೇ ತರಗತಿ ವಿದ್ಯಾರ್ಥಿಗಳ ಕುಟುಂಬದವರು ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಗಾಂಧಿನಗರದ ಸರ್ಕಾರಿ ಸರ್ವೋದಯ ಬಾಲ ವಿದ್ಯಾಲಯದ ಶಿಕ್ಷಕಿ ಹೇಮಾ ಗುಲಾಟಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಓರ್ವ ವಿದ್ಯಾರ್ಥಿ ನೀಡಿದ ದೂರಿನ ಪ್ರಕಾರ, ಶಿಕ್ಷಕಿ ಹೇಮಾ ಗುಲಾಟಿ ಅವರು ಬುಧವಾರ  ಪವಿತ್ರ ಮೆಕ್ಕಾದಲ್ಲಿನ ಕಾಬಾ ಬಗ್ಗೆ ಮತ್ತು ಕುರಾನ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ವಿಭಜನೆಯ ಸಮಯದಲ್ಲಿ ನೀವು ಪಾಕಿಸ್ತಾನಕ್ಕೆ ಹೋಗಲಿಲ್ಲ, ನೀವು ಭಾರತದಲ್ಲಿಯೇ ಇದ್ದೀರಿ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನಿಮ್ಮ ಕೊಡುಗೆ ಇಲ್ಲ ಎಂದು ಶಿಕ್ಷಕರು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿರುವ ಬಗ್ಗೆ ಎನ್ ಡಿಟಿವಿ ವರದಿ ಮಾಡಿದೆ.

ಇಂತಹ ಹೇಳಿಕೆಗಳು ಶಾಲೆಯಲ್ಲಿ ವೈಷಮ್ಯಕ್ಕೆ ಕಾರಣವಾಗುತ್ತವೆ ಮತ್ತು ಶಿಕ್ಷಕರನ್ನು ವಜಾಗೊಳಿಸಬೇಕೆಂದು ವಿದ್ಯಾರ್ಥಿಗಳ ಕುಟುಂಬಗಳು ಒತ್ತಾಯಿಸಿವೆ.

ಶಾಲಾ ವಿದ್ಯಾರ್ಥಿಯ ಪೋಷಕರೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಶಿಕ್ಷಕಿಗೆ ಶಿಕ್ಷಿಸದೆ ಹೋದರೆ, ಇತರರು ಇದೇ ರೀತಿ ಮಾತನಾಡಲು ಧೈರ್ಯ ಮಾಡಿಕೊಳ್ಳುತ್ತಾರೆ. ಅವರು ಮಕ್ಕಳಿಗೆ  ಪಾಠ ಮಾತ್ರ ಮಾಡಬೇಕು ಹೊರತು ಅವರಿಗೆ ತಿಳಿಯದ ವಿಷಯದ ಬಗ್ಗೆ ಮಾತನಾಡಬಾರದು. ವಿದ್ಯಾರ್ಥಿಗಳಲ್ಲಿ ಭಿನ್ನಾಭಿಪ್ರಾಯ ಮೂಡಿಸುವ ಶಿಕ್ಷಕರ ಅಗತ್ಯ ಇಲ್ಲ. ಶಿಕ್ಷಕಿಯನ್ನು ಶಾಲೆಯಿಂದ ತೆಗೆದು ಹಾಕಬೇಕು, ಅವರಿಗೆ ಯಾವುದೇ ಶಾಲೆಯಲ್ಲಿ ಪಾಠ ಮಾಡಲು ಅವಕಾಶ ನೀಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸ್ಥಳೀಯ ಶಾಸಕ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಅನಿಲ್ ಕುಮಾರ್ ಬಾಜಪೇಯಿ ಶಿಕ್ಷಕಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಸಂಪೂರ್ಣವಾಗಿ ತಪ್ಪು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರು ಯಾವುದೇ ಧಾರ್ಮಿಕ ಅಥವಾ ಪವಿತ್ರ ಸ್ಥಳದ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಬಾರದು. ಅಂತಹವರನ್ನು ಬಂಧಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಸಂಘಪರಿವಾರ ಮುಸ್ಲಿಮರು, ದಲಿತರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ: ಪಿಣರಾಯಿ ವಿಜಯನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...