Homeಮುಖಪುಟಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

- Advertisement -
- Advertisement -

ಸೆಪ್ಟಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುವ ಸಂದರ್ಭದಲ್ಲಿ ಆಂಬುಲೆನ್ಸ್ ಬಂದಾಗ ಅದಕ್ಕೆ ದಾರಿ ಮಾಡಿಕೊಟ್ಟಿದ್ದರು. ನವೆಂಬರ್ 09ರಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮೂರು ದಿನ ಬಾಕಿ ಇರುವಾಗ ಕಾಂಗ್ರಾದಲ್ಲಿ ಮೋದಿಯವರು ಚುನಾವಣಾ ಪ್ರಚಾರ ನಡೆಸುತ್ತಿದ್ದಾಗಲೂ ಆಂಬುಲೆನ್ಸ್ ಒಂದು ಎದುರಾಗಿತ್ತು. ಆಗಲೂ ಪ್ರಧಾನಿಗಳು ಕಾದು ದಾರಿ ಬಿಟ್ಟು ಕೊಟ್ಟಿದ್ದರು. ನಿನ್ನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿಯವರು ರೋಡ್ ಶೋ ನಡೆಸುವ ವೇಲೆ ಆಂಬುಲೆನ್ಸ್ ಒಂದೇ ಅದೇ ರಸ್ತೆಯಲ್ಲಿ ಬಂದಿದೆ. ಮತ್ತೆ ಮೋದಿಯವರು ಅದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುವ ರಸ್ತೆಯಲ್ಲಿ ಅವರ ಬೆಂಗಾವಲು ವಾಹನಗಳನ್ನು ಬಿಟ್ಟರೆ ಬೇರೆ ಯಾವುದೇ ವಾಹನಗಳಿಗೆ ಪ್ರವೇಶ ನೀಡದೇ ಬದಲಿ ಮಾರ್ಗವನ್ನು ಸೂಚಿಸಲಾಗಿತ್ತು. ಆ ರಸ್ತೆಯಲ್ಲಿ ನೂರಾರು ಪೊಲೀಸರ ಕಣ್ತಪ್ಪಿಸಿ ಆಂಬುಲೆನ್ಸ್ ಬರಲು ಹೇಗೆ ಸಾಧ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಎದ್ದಿದೆ.

ಪ್ರಧಾನಿ ಮೋದಿಯವರ ರೋಡ್ ಶೋಗಳಲ್ಲಿ ಆಂಬುಲೆನ್ಸ್‌ಗಳು ಬರುವುದು, ಅದಕ್ಕೆ ಪ್ರಧಾನಿಗಳು ದಾರಿ ಬಿಟ್ಟುಕೊಡುವುದು ಪೂರ್ವನಿಯೋಜಿತ ನಾಟಕ ಎಂದು ಆರೋಪಿಸಿರುವ ಕಾಂಗ್ರೆಸ್, ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದು ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಎರಡು ಬೇಡಿಕೆಗಳನ್ನಿಟ್ಟಿದ್ದಾರೆ. ಮೊದಲನೇಯದಾಗಿ “ಪ್ರತಿಬಾರಿಯೂ ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಮಾಡುವಾಗ ಅಲ್ಲಿ ಆಂಬುಲೆನ್ಸ್ ಬರುತ್ತದೆ ಮತ್ತು ಅವರು ದಾರಿ ಬಿಟ್ಟುಕೊಡುವ ವರದಿಯಾಗುತ್ತಿದೆ. ಇದು ಕಾಕತಾಳೀಯವಲ್ಲ. ಬದಲಿಗೆ ಪ್ರಧಾನಿಯವರ ಗಂಭೀರ ಭದ್ರತಾ ಲೋಪವಾಗಿದೆ. ಈ ಕುರಿತು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಎರಡನೇಯದಾಗಿ ಪದೇ ಪದೇ ಬರುವ ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಕನಿಷ್ಟ 5 ಬಾರಿ ಪ್ರಧಾನಿಯವರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಂಬುಲೆನ್ಸ್ ಕಾಣಿಸಿಕೊಂಡಿದ್ದಾಗಿ ಮಾಧ್ಯಮಗಳು ವರದಿ ಮಾಡಿದ ಪತ್ರಿಕಾ ತುಣುಕುಗಳಲ್ಲಿನ ದಿನಾಂಕಗಳನ್ನು ಮಾರ್ಕ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿ ಚುನಾವಣಾ ರ್ಯಾಲಿಯಲ್ಲಿ, ಯಾವುದೇ ಭದ್ರತಾ ತಪಾಸಣೆಯಿಲ್ಲದೆ ಆಂಬ್ಯುಲೆನ್ಸ್‌ ಪ್ರಧಾನಿಯವರ ಅತ್ಯಂತ ಸಮೀಪಕ್ಕೆ ಬರುವುದು, ಅವರ ವಾಹನವನ್ನು ಹಿಂದಿಕ್ಕುವುದು ಅವರ ಭದ್ರತೆಯಲ್ಲಿ ಆಳವಾದ ಲೋಪವಾಗಿದೆ. ನಿಮ್ಮ ಅಭಿಪ್ರಾಯ ಏನು?” ಎಂದು ಅವರು ಪ್ರಶ್ನಿಸಿದ್ದಾರೆ.

ನವೆಂಬರ್ 09ರಂದು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಪ್ರಧಾನಿಗಳು ಆಂಬುಲೆನ್ಸ್‌ಗೆ ದಾರಿ ಬಿಟ್ಟಿಕೊಟ್ಟಿದ್ದನ್ನು ದೊಡ್ಡ ನಾಟಕ ಎಂದು ಟಿಆರ್‌ಎಸ್ ಪಕ್ಷದ ಸಾಮಾಜಿಕ ಜಾಲತಾಣ ಜವಾಬ್ದಾರಿ ಹೊತ್ತಿರುವ ವೈ.ಸತೀಶ್ ರೆಡ್ಡಿ ಆರೋಪಿಸಿದ್ದರು.

“ಆಂಬ್ಯುಲೆನ್ಸ್‌ ಹಾದುಹೋಗುವಿಕೆಯನ್ನು ಸೆರೆಹಿಡಿಯಲು ಮತ್ತು ಅದೇ ದೃಶ್ಯವನ್ನು ವಿವಿಧ ಕೋನಗಳಲ್ಲಿ ಚಿತ್ರೀಕರಿಸಲು ಕ್ಯಾಮರ ಸಿಬ್ಬಂದಿಗೆ ತಕ್ಷಣವೇ ತಿಳಿಸಲಾಗುತ್ತದೆ. ಅಲ್ಲದೆ, ಬೆಂಗಾವಲು ಪಡೆಯನ್ನು ಅದಕ್ಕೆ ತಕ್ಕಂತೆ ಹೊಂದಿಸಲಾಗಿರುತ್ತದೆ. ಆದ್ದರಿಂದ ಆಂಬ್ಯುಲೆನ್ಸ್ ಮೋದಿಯವರ ಕಾರಿನಿಂದ ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಟ್ವೀಟ್ ಮಾಡುವ ಮೂಲಕ ಇದೊಂದು ಪ್ರಹಸನ ಎಂದು ಕರೆದಿದ್ದರು.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...