Homeಮುಖಪುಟಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

- Advertisement -
- Advertisement -

ಸೆಪ್ಟಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುವ ಸಂದರ್ಭದಲ್ಲಿ ಆಂಬುಲೆನ್ಸ್ ಬಂದಾಗ ಅದಕ್ಕೆ ದಾರಿ ಮಾಡಿಕೊಟ್ಟಿದ್ದರು. ನವೆಂಬರ್ 09ರಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮೂರು ದಿನ ಬಾಕಿ ಇರುವಾಗ ಕಾಂಗ್ರಾದಲ್ಲಿ ಮೋದಿಯವರು ಚುನಾವಣಾ ಪ್ರಚಾರ ನಡೆಸುತ್ತಿದ್ದಾಗಲೂ ಆಂಬುಲೆನ್ಸ್ ಒಂದು ಎದುರಾಗಿತ್ತು. ಆಗಲೂ ಪ್ರಧಾನಿಗಳು ಕಾದು ದಾರಿ ಬಿಟ್ಟು ಕೊಟ್ಟಿದ್ದರು. ನಿನ್ನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿಯವರು ರೋಡ್ ಶೋ ನಡೆಸುವ ವೇಲೆ ಆಂಬುಲೆನ್ಸ್ ಒಂದೇ ಅದೇ ರಸ್ತೆಯಲ್ಲಿ ಬಂದಿದೆ. ಮತ್ತೆ ಮೋದಿಯವರು ಅದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುವ ರಸ್ತೆಯಲ್ಲಿ ಅವರ ಬೆಂಗಾವಲು ವಾಹನಗಳನ್ನು ಬಿಟ್ಟರೆ ಬೇರೆ ಯಾವುದೇ ವಾಹನಗಳಿಗೆ ಪ್ರವೇಶ ನೀಡದೇ ಬದಲಿ ಮಾರ್ಗವನ್ನು ಸೂಚಿಸಲಾಗಿತ್ತು. ಆ ರಸ್ತೆಯಲ್ಲಿ ನೂರಾರು ಪೊಲೀಸರ ಕಣ್ತಪ್ಪಿಸಿ ಆಂಬುಲೆನ್ಸ್ ಬರಲು ಹೇಗೆ ಸಾಧ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಎದ್ದಿದೆ.

ಪ್ರಧಾನಿ ಮೋದಿಯವರ ರೋಡ್ ಶೋಗಳಲ್ಲಿ ಆಂಬುಲೆನ್ಸ್‌ಗಳು ಬರುವುದು, ಅದಕ್ಕೆ ಪ್ರಧಾನಿಗಳು ದಾರಿ ಬಿಟ್ಟುಕೊಡುವುದು ಪೂರ್ವನಿಯೋಜಿತ ನಾಟಕ ಎಂದು ಆರೋಪಿಸಿರುವ ಕಾಂಗ್ರೆಸ್, ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದು ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಎರಡು ಬೇಡಿಕೆಗಳನ್ನಿಟ್ಟಿದ್ದಾರೆ. ಮೊದಲನೇಯದಾಗಿ “ಪ್ರತಿಬಾರಿಯೂ ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಮಾಡುವಾಗ ಅಲ್ಲಿ ಆಂಬುಲೆನ್ಸ್ ಬರುತ್ತದೆ ಮತ್ತು ಅವರು ದಾರಿ ಬಿಟ್ಟುಕೊಡುವ ವರದಿಯಾಗುತ್ತಿದೆ. ಇದು ಕಾಕತಾಳೀಯವಲ್ಲ. ಬದಲಿಗೆ ಪ್ರಧಾನಿಯವರ ಗಂಭೀರ ಭದ್ರತಾ ಲೋಪವಾಗಿದೆ. ಈ ಕುರಿತು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಎರಡನೇಯದಾಗಿ ಪದೇ ಪದೇ ಬರುವ ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಕನಿಷ್ಟ 5 ಬಾರಿ ಪ್ರಧಾನಿಯವರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಂಬುಲೆನ್ಸ್ ಕಾಣಿಸಿಕೊಂಡಿದ್ದಾಗಿ ಮಾಧ್ಯಮಗಳು ವರದಿ ಮಾಡಿದ ಪತ್ರಿಕಾ ತುಣುಕುಗಳಲ್ಲಿನ ದಿನಾಂಕಗಳನ್ನು ಮಾರ್ಕ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿ ಚುನಾವಣಾ ರ್ಯಾಲಿಯಲ್ಲಿ, ಯಾವುದೇ ಭದ್ರತಾ ತಪಾಸಣೆಯಿಲ್ಲದೆ ಆಂಬ್ಯುಲೆನ್ಸ್‌ ಪ್ರಧಾನಿಯವರ ಅತ್ಯಂತ ಸಮೀಪಕ್ಕೆ ಬರುವುದು, ಅವರ ವಾಹನವನ್ನು ಹಿಂದಿಕ್ಕುವುದು ಅವರ ಭದ್ರತೆಯಲ್ಲಿ ಆಳವಾದ ಲೋಪವಾಗಿದೆ. ನಿಮ್ಮ ಅಭಿಪ್ರಾಯ ಏನು?” ಎಂದು ಅವರು ಪ್ರಶ್ನಿಸಿದ್ದಾರೆ.

ನವೆಂಬರ್ 09ರಂದು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಪ್ರಧಾನಿಗಳು ಆಂಬುಲೆನ್ಸ್‌ಗೆ ದಾರಿ ಬಿಟ್ಟಿಕೊಟ್ಟಿದ್ದನ್ನು ದೊಡ್ಡ ನಾಟಕ ಎಂದು ಟಿಆರ್‌ಎಸ್ ಪಕ್ಷದ ಸಾಮಾಜಿಕ ಜಾಲತಾಣ ಜವಾಬ್ದಾರಿ ಹೊತ್ತಿರುವ ವೈ.ಸತೀಶ್ ರೆಡ್ಡಿ ಆರೋಪಿಸಿದ್ದರು.

“ಆಂಬ್ಯುಲೆನ್ಸ್‌ ಹಾದುಹೋಗುವಿಕೆಯನ್ನು ಸೆರೆಹಿಡಿಯಲು ಮತ್ತು ಅದೇ ದೃಶ್ಯವನ್ನು ವಿವಿಧ ಕೋನಗಳಲ್ಲಿ ಚಿತ್ರೀಕರಿಸಲು ಕ್ಯಾಮರ ಸಿಬ್ಬಂದಿಗೆ ತಕ್ಷಣವೇ ತಿಳಿಸಲಾಗುತ್ತದೆ. ಅಲ್ಲದೆ, ಬೆಂಗಾವಲು ಪಡೆಯನ್ನು ಅದಕ್ಕೆ ತಕ್ಕಂತೆ ಹೊಂದಿಸಲಾಗಿರುತ್ತದೆ. ಆದ್ದರಿಂದ ಆಂಬ್ಯುಲೆನ್ಸ್ ಮೋದಿಯವರ ಕಾರಿನಿಂದ ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಟ್ವೀಟ್ ಮಾಡುವ ಮೂಲಕ ಇದೊಂದು ಪ್ರಹಸನ ಎಂದು ಕರೆದಿದ್ದರು.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...