Homeಮುಖಪುಟಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

- Advertisement -
- Advertisement -

ಸೆಪ್ಟಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುವ ಸಂದರ್ಭದಲ್ಲಿ ಆಂಬುಲೆನ್ಸ್ ಬಂದಾಗ ಅದಕ್ಕೆ ದಾರಿ ಮಾಡಿಕೊಟ್ಟಿದ್ದರು. ನವೆಂಬರ್ 09ರಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮೂರು ದಿನ ಬಾಕಿ ಇರುವಾಗ ಕಾಂಗ್ರಾದಲ್ಲಿ ಮೋದಿಯವರು ಚುನಾವಣಾ ಪ್ರಚಾರ ನಡೆಸುತ್ತಿದ್ದಾಗಲೂ ಆಂಬುಲೆನ್ಸ್ ಒಂದು ಎದುರಾಗಿತ್ತು. ಆಗಲೂ ಪ್ರಧಾನಿಗಳು ಕಾದು ದಾರಿ ಬಿಟ್ಟು ಕೊಟ್ಟಿದ್ದರು. ನಿನ್ನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿಯವರು ರೋಡ್ ಶೋ ನಡೆಸುವ ವೇಲೆ ಆಂಬುಲೆನ್ಸ್ ಒಂದೇ ಅದೇ ರಸ್ತೆಯಲ್ಲಿ ಬಂದಿದೆ. ಮತ್ತೆ ಮೋದಿಯವರು ಅದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುವ ರಸ್ತೆಯಲ್ಲಿ ಅವರ ಬೆಂಗಾವಲು ವಾಹನಗಳನ್ನು ಬಿಟ್ಟರೆ ಬೇರೆ ಯಾವುದೇ ವಾಹನಗಳಿಗೆ ಪ್ರವೇಶ ನೀಡದೇ ಬದಲಿ ಮಾರ್ಗವನ್ನು ಸೂಚಿಸಲಾಗಿತ್ತು. ಆ ರಸ್ತೆಯಲ್ಲಿ ನೂರಾರು ಪೊಲೀಸರ ಕಣ್ತಪ್ಪಿಸಿ ಆಂಬುಲೆನ್ಸ್ ಬರಲು ಹೇಗೆ ಸಾಧ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಎದ್ದಿದೆ.

ಪ್ರಧಾನಿ ಮೋದಿಯವರ ರೋಡ್ ಶೋಗಳಲ್ಲಿ ಆಂಬುಲೆನ್ಸ್‌ಗಳು ಬರುವುದು, ಅದಕ್ಕೆ ಪ್ರಧಾನಿಗಳು ದಾರಿ ಬಿಟ್ಟುಕೊಡುವುದು ಪೂರ್ವನಿಯೋಜಿತ ನಾಟಕ ಎಂದು ಆರೋಪಿಸಿರುವ ಕಾಂಗ್ರೆಸ್, ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದು ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಎರಡು ಬೇಡಿಕೆಗಳನ್ನಿಟ್ಟಿದ್ದಾರೆ. ಮೊದಲನೇಯದಾಗಿ “ಪ್ರತಿಬಾರಿಯೂ ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಮಾಡುವಾಗ ಅಲ್ಲಿ ಆಂಬುಲೆನ್ಸ್ ಬರುತ್ತದೆ ಮತ್ತು ಅವರು ದಾರಿ ಬಿಟ್ಟುಕೊಡುವ ವರದಿಯಾಗುತ್ತಿದೆ. ಇದು ಕಾಕತಾಳೀಯವಲ್ಲ. ಬದಲಿಗೆ ಪ್ರಧಾನಿಯವರ ಗಂಭೀರ ಭದ್ರತಾ ಲೋಪವಾಗಿದೆ. ಈ ಕುರಿತು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಎರಡನೇಯದಾಗಿ ಪದೇ ಪದೇ ಬರುವ ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಕನಿಷ್ಟ 5 ಬಾರಿ ಪ್ರಧಾನಿಯವರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಂಬುಲೆನ್ಸ್ ಕಾಣಿಸಿಕೊಂಡಿದ್ದಾಗಿ ಮಾಧ್ಯಮಗಳು ವರದಿ ಮಾಡಿದ ಪತ್ರಿಕಾ ತುಣುಕುಗಳಲ್ಲಿನ ದಿನಾಂಕಗಳನ್ನು ಮಾರ್ಕ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿ ಚುನಾವಣಾ ರ್ಯಾಲಿಯಲ್ಲಿ, ಯಾವುದೇ ಭದ್ರತಾ ತಪಾಸಣೆಯಿಲ್ಲದೆ ಆಂಬ್ಯುಲೆನ್ಸ್‌ ಪ್ರಧಾನಿಯವರ ಅತ್ಯಂತ ಸಮೀಪಕ್ಕೆ ಬರುವುದು, ಅವರ ವಾಹನವನ್ನು ಹಿಂದಿಕ್ಕುವುದು ಅವರ ಭದ್ರತೆಯಲ್ಲಿ ಆಳವಾದ ಲೋಪವಾಗಿದೆ. ನಿಮ್ಮ ಅಭಿಪ್ರಾಯ ಏನು?” ಎಂದು ಅವರು ಪ್ರಶ್ನಿಸಿದ್ದಾರೆ.

ನವೆಂಬರ್ 09ರಂದು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಪ್ರಧಾನಿಗಳು ಆಂಬುಲೆನ್ಸ್‌ಗೆ ದಾರಿ ಬಿಟ್ಟಿಕೊಟ್ಟಿದ್ದನ್ನು ದೊಡ್ಡ ನಾಟಕ ಎಂದು ಟಿಆರ್‌ಎಸ್ ಪಕ್ಷದ ಸಾಮಾಜಿಕ ಜಾಲತಾಣ ಜವಾಬ್ದಾರಿ ಹೊತ್ತಿರುವ ವೈ.ಸತೀಶ್ ರೆಡ್ಡಿ ಆರೋಪಿಸಿದ್ದರು.

“ಆಂಬ್ಯುಲೆನ್ಸ್‌ ಹಾದುಹೋಗುವಿಕೆಯನ್ನು ಸೆರೆಹಿಡಿಯಲು ಮತ್ತು ಅದೇ ದೃಶ್ಯವನ್ನು ವಿವಿಧ ಕೋನಗಳಲ್ಲಿ ಚಿತ್ರೀಕರಿಸಲು ಕ್ಯಾಮರ ಸಿಬ್ಬಂದಿಗೆ ತಕ್ಷಣವೇ ತಿಳಿಸಲಾಗುತ್ತದೆ. ಅಲ್ಲದೆ, ಬೆಂಗಾವಲು ಪಡೆಯನ್ನು ಅದಕ್ಕೆ ತಕ್ಕಂತೆ ಹೊಂದಿಸಲಾಗಿರುತ್ತದೆ. ಆದ್ದರಿಂದ ಆಂಬ್ಯುಲೆನ್ಸ್ ಮೋದಿಯವರ ಕಾರಿನಿಂದ ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಟ್ವೀಟ್ ಮಾಡುವ ಮೂಲಕ ಇದೊಂದು ಪ್ರಹಸನ ಎಂದು ಕರೆದಿದ್ದರು.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...