Homeಮುಖಪುಟಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

- Advertisement -
- Advertisement -

ಸೆಪ್ಟಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುವ ಸಂದರ್ಭದಲ್ಲಿ ಆಂಬುಲೆನ್ಸ್ ಬಂದಾಗ ಅದಕ್ಕೆ ದಾರಿ ಮಾಡಿಕೊಟ್ಟಿದ್ದರು. ನವೆಂಬರ್ 09ರಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮೂರು ದಿನ ಬಾಕಿ ಇರುವಾಗ ಕಾಂಗ್ರಾದಲ್ಲಿ ಮೋದಿಯವರು ಚುನಾವಣಾ ಪ್ರಚಾರ ನಡೆಸುತ್ತಿದ್ದಾಗಲೂ ಆಂಬುಲೆನ್ಸ್ ಒಂದು ಎದುರಾಗಿತ್ತು. ಆಗಲೂ ಪ್ರಧಾನಿಗಳು ಕಾದು ದಾರಿ ಬಿಟ್ಟು ಕೊಟ್ಟಿದ್ದರು. ನಿನ್ನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿಯವರು ರೋಡ್ ಶೋ ನಡೆಸುವ ವೇಲೆ ಆಂಬುಲೆನ್ಸ್ ಒಂದೇ ಅದೇ ರಸ್ತೆಯಲ್ಲಿ ಬಂದಿದೆ. ಮತ್ತೆ ಮೋದಿಯವರು ಅದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುವ ರಸ್ತೆಯಲ್ಲಿ ಅವರ ಬೆಂಗಾವಲು ವಾಹನಗಳನ್ನು ಬಿಟ್ಟರೆ ಬೇರೆ ಯಾವುದೇ ವಾಹನಗಳಿಗೆ ಪ್ರವೇಶ ನೀಡದೇ ಬದಲಿ ಮಾರ್ಗವನ್ನು ಸೂಚಿಸಲಾಗಿತ್ತು. ಆ ರಸ್ತೆಯಲ್ಲಿ ನೂರಾರು ಪೊಲೀಸರ ಕಣ್ತಪ್ಪಿಸಿ ಆಂಬುಲೆನ್ಸ್ ಬರಲು ಹೇಗೆ ಸಾಧ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಎದ್ದಿದೆ.

ಪ್ರಧಾನಿ ಮೋದಿಯವರ ರೋಡ್ ಶೋಗಳಲ್ಲಿ ಆಂಬುಲೆನ್ಸ್‌ಗಳು ಬರುವುದು, ಅದಕ್ಕೆ ಪ್ರಧಾನಿಗಳು ದಾರಿ ಬಿಟ್ಟುಕೊಡುವುದು ಪೂರ್ವನಿಯೋಜಿತ ನಾಟಕ ಎಂದು ಆರೋಪಿಸಿರುವ ಕಾಂಗ್ರೆಸ್, ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದು ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಎರಡು ಬೇಡಿಕೆಗಳನ್ನಿಟ್ಟಿದ್ದಾರೆ. ಮೊದಲನೇಯದಾಗಿ “ಪ್ರತಿಬಾರಿಯೂ ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಮಾಡುವಾಗ ಅಲ್ಲಿ ಆಂಬುಲೆನ್ಸ್ ಬರುತ್ತದೆ ಮತ್ತು ಅವರು ದಾರಿ ಬಿಟ್ಟುಕೊಡುವ ವರದಿಯಾಗುತ್ತಿದೆ. ಇದು ಕಾಕತಾಳೀಯವಲ್ಲ. ಬದಲಿಗೆ ಪ್ರಧಾನಿಯವರ ಗಂಭೀರ ಭದ್ರತಾ ಲೋಪವಾಗಿದೆ. ಈ ಕುರಿತು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಎರಡನೇಯದಾಗಿ ಪದೇ ಪದೇ ಬರುವ ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಕನಿಷ್ಟ 5 ಬಾರಿ ಪ್ರಧಾನಿಯವರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಂಬುಲೆನ್ಸ್ ಕಾಣಿಸಿಕೊಂಡಿದ್ದಾಗಿ ಮಾಧ್ಯಮಗಳು ವರದಿ ಮಾಡಿದ ಪತ್ರಿಕಾ ತುಣುಕುಗಳಲ್ಲಿನ ದಿನಾಂಕಗಳನ್ನು ಮಾರ್ಕ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿ ಚುನಾವಣಾ ರ್ಯಾಲಿಯಲ್ಲಿ, ಯಾವುದೇ ಭದ್ರತಾ ತಪಾಸಣೆಯಿಲ್ಲದೆ ಆಂಬ್ಯುಲೆನ್ಸ್‌ ಪ್ರಧಾನಿಯವರ ಅತ್ಯಂತ ಸಮೀಪಕ್ಕೆ ಬರುವುದು, ಅವರ ವಾಹನವನ್ನು ಹಿಂದಿಕ್ಕುವುದು ಅವರ ಭದ್ರತೆಯಲ್ಲಿ ಆಳವಾದ ಲೋಪವಾಗಿದೆ. ನಿಮ್ಮ ಅಭಿಪ್ರಾಯ ಏನು?” ಎಂದು ಅವರು ಪ್ರಶ್ನಿಸಿದ್ದಾರೆ.

ನವೆಂಬರ್ 09ರಂದು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಪ್ರಧಾನಿಗಳು ಆಂಬುಲೆನ್ಸ್‌ಗೆ ದಾರಿ ಬಿಟ್ಟಿಕೊಟ್ಟಿದ್ದನ್ನು ದೊಡ್ಡ ನಾಟಕ ಎಂದು ಟಿಆರ್‌ಎಸ್ ಪಕ್ಷದ ಸಾಮಾಜಿಕ ಜಾಲತಾಣ ಜವಾಬ್ದಾರಿ ಹೊತ್ತಿರುವ ವೈ.ಸತೀಶ್ ರೆಡ್ಡಿ ಆರೋಪಿಸಿದ್ದರು.

“ಆಂಬ್ಯುಲೆನ್ಸ್‌ ಹಾದುಹೋಗುವಿಕೆಯನ್ನು ಸೆರೆಹಿಡಿಯಲು ಮತ್ತು ಅದೇ ದೃಶ್ಯವನ್ನು ವಿವಿಧ ಕೋನಗಳಲ್ಲಿ ಚಿತ್ರೀಕರಿಸಲು ಕ್ಯಾಮರ ಸಿಬ್ಬಂದಿಗೆ ತಕ್ಷಣವೇ ತಿಳಿಸಲಾಗುತ್ತದೆ. ಅಲ್ಲದೆ, ಬೆಂಗಾವಲು ಪಡೆಯನ್ನು ಅದಕ್ಕೆ ತಕ್ಕಂತೆ ಹೊಂದಿಸಲಾಗಿರುತ್ತದೆ. ಆದ್ದರಿಂದ ಆಂಬ್ಯುಲೆನ್ಸ್ ಮೋದಿಯವರ ಕಾರಿನಿಂದ ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಟ್ವೀಟ್ ಮಾಡುವ ಮೂಲಕ ಇದೊಂದು ಪ್ರಹಸನ ಎಂದು ಕರೆದಿದ್ದರು.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...