Homeಕರ್ನಾಟಕಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ರಷ್ಯಾ-ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದೆ. ‌ಉಕ್ರೇನ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯರು ಆತಂಕದಲ್ಲಿದ್ದಾರೆ. ಇದರ ಜೊತೆಗೆ ಉಕ್ರೇನ್‌ಗೆ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯರು ಹೋಗುವುದೇಕೆ ಎಂಬ ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಈ ಸಂಘರ್ಷದ ಸಮಯದಲ್ಲಿ ಪೂರ್ವ ಉಕ್ರೇನ್‌ನಲ್ಲಿ ಹಲವಾರು ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ, ತಮ್ಮನ್ನು ಸುರಕ್ಷಿತ ನೆರೆಯ ದೇಶಗಳಾದ ರೊಮೇನಿಯಾ ಮತ್ತು ಹಂಗೇರಿಯಂತಹ ಇತರ ದೇಶಗಳಿಗೆ ಸ್ಥಳಾಂತರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರಲ್ಲಿ ಹೆಚ್ಚಿನವರು ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಇವಾನೊ-ಫ್ರಾನ್ ಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ ಮುಂತಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ತರಬೇತಿ ಪಡೆಯುತ್ತಿದ್ದಾರೆ.

ಉಕ್ರೇನ್ ದೇಶವು ಗುಣಮಟ್ಟದ ಶಿಕ್ಷಣವನ್ನು ನೀಡುವ ಅನೇಕ ಜಾಗತಿಕ ಮಟ್ಟದ ವಿಶ್ವವಿದ್ಯಾನಿಲಯಗಳನ್ನು ಹೊಂದಿದೆ. ಅಲ್ಲಿನ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗಳು ಪಾಕೆಟ್ (ಶಿಕ್ಷಣ ವೆಚ್ಚ) ಸ್ನೇಹಿಯಾಗಿರುವುದರಿಂದ ಭಾರತದ ವಿದ್ಯಾರ್ಥಿಗಳು ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‌ಗೆ ತೆರಳುತ್ತಾರೆ.

ಕರ್ನಾಟಕ ಮೂಲದ ಹಲವಾರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದಾರೆ. ಅವರಲ್ಲಿ ಉಡುಪಿ ಮೂಲದ ಗ್ಲೆನ್ವಿಲ್ ಫೆರ್ನಾಂಡಿಸ್ ಕೂಡ ಒಬ್ಬರು. ಅವರು ಉಕ್ರೇನ್‌ನ ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ, ಉಕ್ರೇನ್‌ನಲ್ಲಿ ಸಂಘರ್ಷ ಏರ್ಪಟ್ಟಿರುವುದರಿಂದ ಉಡುಪಿಯಲ್ಲಿರುವ ಅವರ ತಂದೆ ಮೆಲ್ವಿನ್ ಫೆರ್ನಾಂಡಿಸ್ ಅವರು ಭಯಭೀತರಾಗಿದ್ದಾರೆ.

“ಕರ್ನಾಟಕ ಸರ್ಕಾರವು ದೀರ್ಘಾವಧಿಯಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಸುಧಾರಿಸಬೇಕು. ಕರ್ನಾಟಕದಲ್ಲಿ ಶ್ರೀಮಂತರು ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿದೆ. ಆದರೆ, ಮಧ್ಯಮ ವರ್ಗದ ಕುಟುಂಬಗಳು ಇಲ್ಲಿನ ಭಾರೀ ವೆಚ್ಚವನ್ನು ಭರಿಸಲಾಗದೇ, ತಮ್ಮ ಮಕ್ಕಳನ್ನು ಕಡಿಮೆ ವೆಚ್ಚವಿರುವ ವಿದೇಶಿ ವಿವಿಗಳಿಗೆ ಕಳುಹಿಸಿ ಶಿಕ್ಷಣ ಕೊಡಿಸುವಂತಾಗಿದೆ. ಇದೇ ಕಾರಣದಿಂದಾಗಿ, ನಾವು ನಮ್ಮ ಮಗನನ್ನು ಉಕ್ರೇನ್‌ಗೆ ಕಳಿಸಬೇಕಾಯಿತು” ಎಂದು ಮೆಲ್ಟಿನ್ ಫೆರ್ನಾಂಡಿಸ್ ಹೇಳಿದ್ದಾರೆ.

“ಕರ್ನಾಟಕದಲ್ಲಿ ನೀಟ್ ಮೂಲಕ ಸೀಟು ಸಿಗದಿದ್ದರೆ ವೈದ್ಯಕೀಯ ಶಿಕ್ಷಣದ ವೆಚ್ಚ ಐದೂವರೆ ವರ್ಷಗಳ ಕೋರ್ಸ್‌ಗೆ 60 ಲಕ್ಷ ರೂ. ಆಗುತ್ತದೆ. ಆದರೆ ಉಕ್ರೇನ್‌ನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗೆ 35 ಲಕ್ಷದಿಂದ 40 ಲಕ್ಷ ರೂ. ಖರ್ಚಾಗುತ್ತದೆ. ನಾನು ದುಬೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ, ನನ್ನ ಮಗನಿಗೆ ಉಕ್ರೇನ್ ಉತ್ತಮ ಆಯ್ಕೆಯಾಗುತ್ತದೆ ಎಂದು ನಾನು ನಿರ್ಧರಿಸಿ, ಅಲ್ಲಿಗೆ ಕಳುಹಿಸಿದೆ” ಎಂದು ಅವರು ಹೇಳುತ್ತಾರೆ.

ವಿದೇಶಗಳಲ್ಲಿ ಸಾಕಷ್ಟು ಸುತ್ತಾಡಿರುವ ಉಡುಪಿಯ ಶಿಕ್ಷಣ ತಜ್ಞ ವಿಜಯ್ ಪಿ.ರಾವ್ ಅವರು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದು, “ಭಾರತದ ಶಿಕ್ಷಣ ವ್ಯವಸ್ಥೆಯು ಸಾಕಷ್ಟು ಅಸ್ತವ್ಯಸ್ತವಾಗಿದೆ. ಭಾರತದಲ್ಲಿ ಸಮಂಜಸವಾದ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಸಿಗದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು USSR ಮತ್ತು ಸುತ್ತಲಿನ ದೇಶಗಳಿಗೆ ಹೋಗುವುದು ಸ್ವಲ್ಪ ಬೇಸರವನ್ನುಂಟು ಮಾಡುತ್ತದೆ. ಭಾರತದಂತಹ ಬೃಹತ್ ದೇಶವು ವೈದ್ಯಕೀಯ ಶಿಕ್ಷಣವನ್ನು ಸಮಂಜಸವಾದ ವೆಚ್ಚದಲ್ಲಿ ಒದಗಿಸಲು ಸಾಧ್ಯವಾಗದೇ ಇರುವುದು ಆಶ್ಚರ್ಯಕರವಾಗಿದೆ” ಎಂದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆದಿದ್ದು, ದಾಳಿಗೊಳಗಾಗುತ್ತಿರುವ ಪ್ರದೇಶದಲ್ಲಿರುವ ಜನರನ್ನು ಮಿಲಿಟರಿ ಬಂಕರ್‌ಗಳಿಗೆ ಸ್ಥಳಾಂತರಿಸಿ, ರಕ್ಷಿಸಲಾಗುತ್ತಿದೆ. ಇದುವರೆಗೆ ನೂರಾರು ಜನರು ಸಾವನ್ನಪ್ಪಿದ್ದಾರೆ. ಯುದ್ಧ ಪೀಡಿತ ದೇಶದಲ್ಲಿರುವ ಭಾರತೀಯರು, ಮತ್ತೆ ತವರಿಗೆ ಮರಳಲು ಯತ್ನಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.


ಇದನ್ನೂ ಓದಿರಿ: ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...