Homeಕರ್ನಾಟಕಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ರಷ್ಯಾ-ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದೆ. ‌ಉಕ್ರೇನ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯರು ಆತಂಕದಲ್ಲಿದ್ದಾರೆ. ಇದರ ಜೊತೆಗೆ ಉಕ್ರೇನ್‌ಗೆ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯರು ಹೋಗುವುದೇಕೆ ಎಂಬ ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಈ ಸಂಘರ್ಷದ ಸಮಯದಲ್ಲಿ ಪೂರ್ವ ಉಕ್ರೇನ್‌ನಲ್ಲಿ ಹಲವಾರು ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ, ತಮ್ಮನ್ನು ಸುರಕ್ಷಿತ ನೆರೆಯ ದೇಶಗಳಾದ ರೊಮೇನಿಯಾ ಮತ್ತು ಹಂಗೇರಿಯಂತಹ ಇತರ ದೇಶಗಳಿಗೆ ಸ್ಥಳಾಂತರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರಲ್ಲಿ ಹೆಚ್ಚಿನವರು ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಇವಾನೊ-ಫ್ರಾನ್ ಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ ಮುಂತಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ತರಬೇತಿ ಪಡೆಯುತ್ತಿದ್ದಾರೆ.

ಉಕ್ರೇನ್ ದೇಶವು ಗುಣಮಟ್ಟದ ಶಿಕ್ಷಣವನ್ನು ನೀಡುವ ಅನೇಕ ಜಾಗತಿಕ ಮಟ್ಟದ ವಿಶ್ವವಿದ್ಯಾನಿಲಯಗಳನ್ನು ಹೊಂದಿದೆ. ಅಲ್ಲಿನ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗಳು ಪಾಕೆಟ್ (ಶಿಕ್ಷಣ ವೆಚ್ಚ) ಸ್ನೇಹಿಯಾಗಿರುವುದರಿಂದ ಭಾರತದ ವಿದ್ಯಾರ್ಥಿಗಳು ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‌ಗೆ ತೆರಳುತ್ತಾರೆ.

ಕರ್ನಾಟಕ ಮೂಲದ ಹಲವಾರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದಾರೆ. ಅವರಲ್ಲಿ ಉಡುಪಿ ಮೂಲದ ಗ್ಲೆನ್ವಿಲ್ ಫೆರ್ನಾಂಡಿಸ್ ಕೂಡ ಒಬ್ಬರು. ಅವರು ಉಕ್ರೇನ್‌ನ ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ, ಉಕ್ರೇನ್‌ನಲ್ಲಿ ಸಂಘರ್ಷ ಏರ್ಪಟ್ಟಿರುವುದರಿಂದ ಉಡುಪಿಯಲ್ಲಿರುವ ಅವರ ತಂದೆ ಮೆಲ್ವಿನ್ ಫೆರ್ನಾಂಡಿಸ್ ಅವರು ಭಯಭೀತರಾಗಿದ್ದಾರೆ.

“ಕರ್ನಾಟಕ ಸರ್ಕಾರವು ದೀರ್ಘಾವಧಿಯಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಸುಧಾರಿಸಬೇಕು. ಕರ್ನಾಟಕದಲ್ಲಿ ಶ್ರೀಮಂತರು ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿದೆ. ಆದರೆ, ಮಧ್ಯಮ ವರ್ಗದ ಕುಟುಂಬಗಳು ಇಲ್ಲಿನ ಭಾರೀ ವೆಚ್ಚವನ್ನು ಭರಿಸಲಾಗದೇ, ತಮ್ಮ ಮಕ್ಕಳನ್ನು ಕಡಿಮೆ ವೆಚ್ಚವಿರುವ ವಿದೇಶಿ ವಿವಿಗಳಿಗೆ ಕಳುಹಿಸಿ ಶಿಕ್ಷಣ ಕೊಡಿಸುವಂತಾಗಿದೆ. ಇದೇ ಕಾರಣದಿಂದಾಗಿ, ನಾವು ನಮ್ಮ ಮಗನನ್ನು ಉಕ್ರೇನ್‌ಗೆ ಕಳಿಸಬೇಕಾಯಿತು” ಎಂದು ಮೆಲ್ಟಿನ್ ಫೆರ್ನಾಂಡಿಸ್ ಹೇಳಿದ್ದಾರೆ.

“ಕರ್ನಾಟಕದಲ್ಲಿ ನೀಟ್ ಮೂಲಕ ಸೀಟು ಸಿಗದಿದ್ದರೆ ವೈದ್ಯಕೀಯ ಶಿಕ್ಷಣದ ವೆಚ್ಚ ಐದೂವರೆ ವರ್ಷಗಳ ಕೋರ್ಸ್‌ಗೆ 60 ಲಕ್ಷ ರೂ. ಆಗುತ್ತದೆ. ಆದರೆ ಉಕ್ರೇನ್‌ನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗೆ 35 ಲಕ್ಷದಿಂದ 40 ಲಕ್ಷ ರೂ. ಖರ್ಚಾಗುತ್ತದೆ. ನಾನು ದುಬೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ, ನನ್ನ ಮಗನಿಗೆ ಉಕ್ರೇನ್ ಉತ್ತಮ ಆಯ್ಕೆಯಾಗುತ್ತದೆ ಎಂದು ನಾನು ನಿರ್ಧರಿಸಿ, ಅಲ್ಲಿಗೆ ಕಳುಹಿಸಿದೆ” ಎಂದು ಅವರು ಹೇಳುತ್ತಾರೆ.

ವಿದೇಶಗಳಲ್ಲಿ ಸಾಕಷ್ಟು ಸುತ್ತಾಡಿರುವ ಉಡುಪಿಯ ಶಿಕ್ಷಣ ತಜ್ಞ ವಿಜಯ್ ಪಿ.ರಾವ್ ಅವರು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದು, “ಭಾರತದ ಶಿಕ್ಷಣ ವ್ಯವಸ್ಥೆಯು ಸಾಕಷ್ಟು ಅಸ್ತವ್ಯಸ್ತವಾಗಿದೆ. ಭಾರತದಲ್ಲಿ ಸಮಂಜಸವಾದ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಸಿಗದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು USSR ಮತ್ತು ಸುತ್ತಲಿನ ದೇಶಗಳಿಗೆ ಹೋಗುವುದು ಸ್ವಲ್ಪ ಬೇಸರವನ್ನುಂಟು ಮಾಡುತ್ತದೆ. ಭಾರತದಂತಹ ಬೃಹತ್ ದೇಶವು ವೈದ್ಯಕೀಯ ಶಿಕ್ಷಣವನ್ನು ಸಮಂಜಸವಾದ ವೆಚ್ಚದಲ್ಲಿ ಒದಗಿಸಲು ಸಾಧ್ಯವಾಗದೇ ಇರುವುದು ಆಶ್ಚರ್ಯಕರವಾಗಿದೆ” ಎಂದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆದಿದ್ದು, ದಾಳಿಗೊಳಗಾಗುತ್ತಿರುವ ಪ್ರದೇಶದಲ್ಲಿರುವ ಜನರನ್ನು ಮಿಲಿಟರಿ ಬಂಕರ್‌ಗಳಿಗೆ ಸ್ಥಳಾಂತರಿಸಿ, ರಕ್ಷಿಸಲಾಗುತ್ತಿದೆ. ಇದುವರೆಗೆ ನೂರಾರು ಜನರು ಸಾವನ್ನಪ್ಪಿದ್ದಾರೆ. ಯುದ್ಧ ಪೀಡಿತ ದೇಶದಲ್ಲಿರುವ ಭಾರತೀಯರು, ಮತ್ತೆ ತವರಿಗೆ ಮರಳಲು ಯತ್ನಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.


ಇದನ್ನೂ ಓದಿರಿ: ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...