Homeಕರ್ನಾಟಕ‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

- Advertisement -
- Advertisement -

“ಶರಣ್ ಪಂಪ್‌ವೆಲ್‌ ಮಾಡಿರುವ ಭಾಷಣ ಸಂಬಂಧ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ?”- ಹೀಗೆ ಕೇಳಿದ್ದು ತುಮಕೂರು ತಿಲಕ್ ಪಾರ್ಕ್ ಸರ್ಕಲ್ ಪೊಲೀಸ್‌ ಇನ್‌ಸ್ಪೆಕ್ಟರ್‌ (ಸಿಪಿಐ) ನವೀನ್ ಕುಮಾರ್.

ತುಮಕೂರು ನಗರದಲ್ಲಿ ಭಜರಂಗದಳ ಹಮ್ಮಿಕೊಂಡಿದ್ದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ್ದ ವಿಎಚ್‌ಪಿ, ಬಿಜೆಪಿ ಮುಖಂಡ ಶರಣ್‌ ಪಂಪ್‌ವೆಲ್‌, ಅಮಾಯಕನಾದ ಫಾಸಿಲ್ ಕೊಲೆಯನ್ನು ಸಮರ್ಥಿಸಿ ಮಾತನಾಡಿದ್ದರಲ್ಲಿ ಸಿಪಿಐಗೆ ಯಾವುದೇ ತಪ್ಪುಗಳು ಕಂಡು ಬಂದಂತೆ ತೋರುತ್ತಿಲ್ಲ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನೂ ನೀಡಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆಯೇ ಎಂದು ತಿಳಿಯಲು ಸಿಪಿಐ ಅವರಿಗೆ ಕರೆ ಮಾಡಿದಾಗ, “ಅವರೇನೂ ಮಾತನಾಡಿಲ್ಲವಲ್ಲ” ಎಂದರು. “ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ಫಾಸಿಲ್ ಕೊಲ್ಲಲಾಯಿತು” ಎಂದು ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ ಎಂದು ತಿಳಿಸಲಾಯಿತು. ಆಗ ಸಿಪಿಐ, “ಅವರೇನು ಮಾತನಾಡಿಲ್ಲ ಬಿಡಿ. ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ ಎಂದರೆ ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ. ನಾವು ಮಾಡಿಕೊಳ್ಳುತ್ತೇವೆ ಬಿಡಿ” ಎಂದು ದಾಷ್ಟ್ಯದಿಂದ ವರ್ತಿಸಿ ಕರೆ ಕಟ್ ಮಾಡಿದರು. ಹೆಚ್ಚುವರಿ ಪ್ರತಿಕ್ರಿಯೆ ಪಡೆಯಲು ಮತ್ತೆ ಮತ್ತೆ ಕರೆ ಮಾಡಿದಾಗ, ಅವರ ನಂಬರ್‌ (9480802932) ಬ್ಯುಸಿ ಬರುತ್ತಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪುರ್‌ವಾದ್‌ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ಶರಣ್‌ ಪಂಪ್‌ವೆಲ್‌ ಭಾಷಣದಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೇ?

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರು ನಡೆದಾಡಿದ, ಸರ್ವಜನಾಂಗದ ಶಾಂತಿಯ ತೋಟವಾದ ತುಮಕೂರಿನಲ್ಲಿ ಕೋಮುಗಲಭೆ ಎಬ್ಬಿಸಲು ಶರಣ್ ಪಂಪ್‌ವೆಲ್ ಆಡಿರುವ ಮಾತುಗಳು ಆತಂಕಕಾರಿಯಾಗಿವೆ. ಅವರ ಭಾಷಣದ ವಿಡಿಯೊ ವೈರಲ್ ಆಗಿದೆ. ಭಾಷಣದಿಂದ ಆಯ್ದ ಅಂಶಗಳು ಹೀಗಿವೆ:

“ಎಲ್ಲಾ ಮಸೀದಿಗಳಿಗೆ ನುಗ್ಗಿ ಹನುಮಾನ್ ಚಾಲೀಸ್ ಭಜಿಸುತ್ತೇವೆ ಎಂಬ ಎಚ್ಚರಿಕೆಯನ್ನು ದೇಶಕ್ಕೆ ಕೊಟ್ಟೆವು. ಮುಸಲ್ಮಾನರು ಗಾಬರಿಯಾದರು. ಮೆರವಣಿಗೆ ಆಯೋಜನೆಯನ್ನು ಬಂದ್ ಮಾಡಿದರು…”

“ನಮ್ಮ ಸಾಮರ್ಥ್ಯವನ್ನು ಈ ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ. ಒಂದು ಸಲ ಗುಜರಾತ್ ಘಟನೆಯನ್ನು ನೆನಪು ಮಾಡಿಕೊಳ್ಳಿ. 59 ಕರಸೇವಕರ ಹತ್ಯೆ ಮಾಡಲಾಯಿತು. ಅದಕ್ಕೆ ಗುಜರಾತ್ ಯಾವ ರೀತಿ ಉತ್ತರ ಕೊಟ್ಟಿತು? ಯಾರು ಕೂಡ ಮನೆಯಲ್ಲಿ ಕೂರಲಿಲ್ಲ. ರಸ್ತೆಗೆ ಇಳಿದರು. ಮನೆಮನೆಗೆ ನುಗ್ಗಿದರು. 59 ಕರಸೇವಕರ ಹತ್ಯೆಗೆ ಪ್ರತಿಯಾಗಿ ಸುಮಾರು ಎರಡು ಸಾವಿರ ಜನರ ಹತ್ಯೆ ಗುಜರಾತ್‌ನಲ್ಲಿ ಆಯಿತು….”

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು.”

“ಅವಶ್ಯಕತೆ ಇದ್ದಾಗ ಹೊಡೆದಾಟನೂ ಮಾಡ್ತೀವಿ, ಅನಿವಾರ್ಯ ಇದ್ದಾಗ ನುಗ್ಗಿ ಹೊಡೆದೇ ಹೊಡೆಯುತ್ತೇವೆ. ಸಿದ್ದರಾಮಯ್ಯನವರೇ, ದಕ್ಷಿಣ ಕನ್ನಡ ಮಾತ್ರ ಹಿಂದುತ್ವದ ಪ್ರಯೋಗಶಾಲೆಯಲ್ಲ, ತುಮಕೂರು ಕೂಡ ಮುಂದಿನ ದಿನಗಳಲ್ಲಿ ಪ್ರಯೋಗಶಾಲೆ ಆಗಲಿದೆ…”

– ಈ ಮೇಲಿನ ಭಾಷಣದಲ್ಲಿ ಪೊಲೀಸ್ ಅಧಿಕಾರಿಗೆ ಯಾವುದೇ ತಪ್ಪುಗಳು ಕಂಡಿಲ್ಲವಂತೆ. ಪ್ರಶ್ನಿಸಿದರೆ, “ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ?” ಎಂದು ಪ್ರತಿಕ್ರಿಯೆ ನೀಡುತ್ತಾರೆ ಸಿಪಿಐ ನವೀನ್‌ಕುಮಾರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...