Homeಕರ್ನಾಟಕ‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

- Advertisement -
- Advertisement -

“ಶರಣ್ ಪಂಪ್‌ವೆಲ್‌ ಮಾಡಿರುವ ಭಾಷಣ ಸಂಬಂಧ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ?”- ಹೀಗೆ ಕೇಳಿದ್ದು ತುಮಕೂರು ತಿಲಕ್ ಪಾರ್ಕ್ ಸರ್ಕಲ್ ಪೊಲೀಸ್‌ ಇನ್‌ಸ್ಪೆಕ್ಟರ್‌ (ಸಿಪಿಐ) ನವೀನ್ ಕುಮಾರ್.

ತುಮಕೂರು ನಗರದಲ್ಲಿ ಭಜರಂಗದಳ ಹಮ್ಮಿಕೊಂಡಿದ್ದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ್ದ ವಿಎಚ್‌ಪಿ, ಬಿಜೆಪಿ ಮುಖಂಡ ಶರಣ್‌ ಪಂಪ್‌ವೆಲ್‌, ಅಮಾಯಕನಾದ ಫಾಸಿಲ್ ಕೊಲೆಯನ್ನು ಸಮರ್ಥಿಸಿ ಮಾತನಾಡಿದ್ದರಲ್ಲಿ ಸಿಪಿಐಗೆ ಯಾವುದೇ ತಪ್ಪುಗಳು ಕಂಡು ಬಂದಂತೆ ತೋರುತ್ತಿಲ್ಲ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನೂ ನೀಡಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆಯೇ ಎಂದು ತಿಳಿಯಲು ಸಿಪಿಐ ಅವರಿಗೆ ಕರೆ ಮಾಡಿದಾಗ, “ಅವರೇನೂ ಮಾತನಾಡಿಲ್ಲವಲ್ಲ” ಎಂದರು. “ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ಫಾಸಿಲ್ ಕೊಲ್ಲಲಾಯಿತು” ಎಂದು ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ ಎಂದು ತಿಳಿಸಲಾಯಿತು. ಆಗ ಸಿಪಿಐ, “ಅವರೇನು ಮಾತನಾಡಿಲ್ಲ ಬಿಡಿ. ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ ಎಂದರೆ ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ. ನಾವು ಮಾಡಿಕೊಳ್ಳುತ್ತೇವೆ ಬಿಡಿ” ಎಂದು ದಾಷ್ಟ್ಯದಿಂದ ವರ್ತಿಸಿ ಕರೆ ಕಟ್ ಮಾಡಿದರು. ಹೆಚ್ಚುವರಿ ಪ್ರತಿಕ್ರಿಯೆ ಪಡೆಯಲು ಮತ್ತೆ ಮತ್ತೆ ಕರೆ ಮಾಡಿದಾಗ, ಅವರ ನಂಬರ್‌ (9480802932) ಬ್ಯುಸಿ ಬರುತ್ತಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪುರ್‌ವಾದ್‌ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ಶರಣ್‌ ಪಂಪ್‌ವೆಲ್‌ ಭಾಷಣದಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೇ?

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರು ನಡೆದಾಡಿದ, ಸರ್ವಜನಾಂಗದ ಶಾಂತಿಯ ತೋಟವಾದ ತುಮಕೂರಿನಲ್ಲಿ ಕೋಮುಗಲಭೆ ಎಬ್ಬಿಸಲು ಶರಣ್ ಪಂಪ್‌ವೆಲ್ ಆಡಿರುವ ಮಾತುಗಳು ಆತಂಕಕಾರಿಯಾಗಿವೆ. ಅವರ ಭಾಷಣದ ವಿಡಿಯೊ ವೈರಲ್ ಆಗಿದೆ. ಭಾಷಣದಿಂದ ಆಯ್ದ ಅಂಶಗಳು ಹೀಗಿವೆ:

“ಎಲ್ಲಾ ಮಸೀದಿಗಳಿಗೆ ನುಗ್ಗಿ ಹನುಮಾನ್ ಚಾಲೀಸ್ ಭಜಿಸುತ್ತೇವೆ ಎಂಬ ಎಚ್ಚರಿಕೆಯನ್ನು ದೇಶಕ್ಕೆ ಕೊಟ್ಟೆವು. ಮುಸಲ್ಮಾನರು ಗಾಬರಿಯಾದರು. ಮೆರವಣಿಗೆ ಆಯೋಜನೆಯನ್ನು ಬಂದ್ ಮಾಡಿದರು…”

“ನಮ್ಮ ಸಾಮರ್ಥ್ಯವನ್ನು ಈ ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ. ಒಂದು ಸಲ ಗುಜರಾತ್ ಘಟನೆಯನ್ನು ನೆನಪು ಮಾಡಿಕೊಳ್ಳಿ. 59 ಕರಸೇವಕರ ಹತ್ಯೆ ಮಾಡಲಾಯಿತು. ಅದಕ್ಕೆ ಗುಜರಾತ್ ಯಾವ ರೀತಿ ಉತ್ತರ ಕೊಟ್ಟಿತು? ಯಾರು ಕೂಡ ಮನೆಯಲ್ಲಿ ಕೂರಲಿಲ್ಲ. ರಸ್ತೆಗೆ ಇಳಿದರು. ಮನೆಮನೆಗೆ ನುಗ್ಗಿದರು. 59 ಕರಸೇವಕರ ಹತ್ಯೆಗೆ ಪ್ರತಿಯಾಗಿ ಸುಮಾರು ಎರಡು ಸಾವಿರ ಜನರ ಹತ್ಯೆ ಗುಜರಾತ್‌ನಲ್ಲಿ ಆಯಿತು….”

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು.”

“ಅವಶ್ಯಕತೆ ಇದ್ದಾಗ ಹೊಡೆದಾಟನೂ ಮಾಡ್ತೀವಿ, ಅನಿವಾರ್ಯ ಇದ್ದಾಗ ನುಗ್ಗಿ ಹೊಡೆದೇ ಹೊಡೆಯುತ್ತೇವೆ. ಸಿದ್ದರಾಮಯ್ಯನವರೇ, ದಕ್ಷಿಣ ಕನ್ನಡ ಮಾತ್ರ ಹಿಂದುತ್ವದ ಪ್ರಯೋಗಶಾಲೆಯಲ್ಲ, ತುಮಕೂರು ಕೂಡ ಮುಂದಿನ ದಿನಗಳಲ್ಲಿ ಪ್ರಯೋಗಶಾಲೆ ಆಗಲಿದೆ…”

– ಈ ಮೇಲಿನ ಭಾಷಣದಲ್ಲಿ ಪೊಲೀಸ್ ಅಧಿಕಾರಿಗೆ ಯಾವುದೇ ತಪ್ಪುಗಳು ಕಂಡಿಲ್ಲವಂತೆ. ಪ್ರಶ್ನಿಸಿದರೆ, “ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ?” ಎಂದು ಪ್ರತಿಕ್ರಿಯೆ ನೀಡುತ್ತಾರೆ ಸಿಪಿಐ ನವೀನ್‌ಕುಮಾರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...