Homeಕರ್ನಾಟಕ‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

- Advertisement -
- Advertisement -

“ಶರಣ್ ಪಂಪ್‌ವೆಲ್‌ ಮಾಡಿರುವ ಭಾಷಣ ಸಂಬಂಧ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ?”- ಹೀಗೆ ಕೇಳಿದ್ದು ತುಮಕೂರು ತಿಲಕ್ ಪಾರ್ಕ್ ಸರ್ಕಲ್ ಪೊಲೀಸ್‌ ಇನ್‌ಸ್ಪೆಕ್ಟರ್‌ (ಸಿಪಿಐ) ನವೀನ್ ಕುಮಾರ್.

ತುಮಕೂರು ನಗರದಲ್ಲಿ ಭಜರಂಗದಳ ಹಮ್ಮಿಕೊಂಡಿದ್ದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ್ದ ವಿಎಚ್‌ಪಿ, ಬಿಜೆಪಿ ಮುಖಂಡ ಶರಣ್‌ ಪಂಪ್‌ವೆಲ್‌, ಅಮಾಯಕನಾದ ಫಾಸಿಲ್ ಕೊಲೆಯನ್ನು ಸಮರ್ಥಿಸಿ ಮಾತನಾಡಿದ್ದರಲ್ಲಿ ಸಿಪಿಐಗೆ ಯಾವುದೇ ತಪ್ಪುಗಳು ಕಂಡು ಬಂದಂತೆ ತೋರುತ್ತಿಲ್ಲ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನೂ ನೀಡಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆಯೇ ಎಂದು ತಿಳಿಯಲು ಸಿಪಿಐ ಅವರಿಗೆ ಕರೆ ಮಾಡಿದಾಗ, “ಅವರೇನೂ ಮಾತನಾಡಿಲ್ಲವಲ್ಲ” ಎಂದರು. “ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ಫಾಸಿಲ್ ಕೊಲ್ಲಲಾಯಿತು” ಎಂದು ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ ಎಂದು ತಿಳಿಸಲಾಯಿತು. ಆಗ ಸಿಪಿಐ, “ಅವರೇನು ಮಾತನಾಡಿಲ್ಲ ಬಿಡಿ. ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ ಎಂದರೆ ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ. ನಾವು ಮಾಡಿಕೊಳ್ಳುತ್ತೇವೆ ಬಿಡಿ” ಎಂದು ದಾಷ್ಟ್ಯದಿಂದ ವರ್ತಿಸಿ ಕರೆ ಕಟ್ ಮಾಡಿದರು. ಹೆಚ್ಚುವರಿ ಪ್ರತಿಕ್ರಿಯೆ ಪಡೆಯಲು ಮತ್ತೆ ಮತ್ತೆ ಕರೆ ಮಾಡಿದಾಗ, ಅವರ ನಂಬರ್‌ (9480802932) ಬ್ಯುಸಿ ಬರುತ್ತಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪುರ್‌ವಾದ್‌ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ಶರಣ್‌ ಪಂಪ್‌ವೆಲ್‌ ಭಾಷಣದಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೇ?

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರು ನಡೆದಾಡಿದ, ಸರ್ವಜನಾಂಗದ ಶಾಂತಿಯ ತೋಟವಾದ ತುಮಕೂರಿನಲ್ಲಿ ಕೋಮುಗಲಭೆ ಎಬ್ಬಿಸಲು ಶರಣ್ ಪಂಪ್‌ವೆಲ್ ಆಡಿರುವ ಮಾತುಗಳು ಆತಂಕಕಾರಿಯಾಗಿವೆ. ಅವರ ಭಾಷಣದ ವಿಡಿಯೊ ವೈರಲ್ ಆಗಿದೆ. ಭಾಷಣದಿಂದ ಆಯ್ದ ಅಂಶಗಳು ಹೀಗಿವೆ:

“ಎಲ್ಲಾ ಮಸೀದಿಗಳಿಗೆ ನುಗ್ಗಿ ಹನುಮಾನ್ ಚಾಲೀಸ್ ಭಜಿಸುತ್ತೇವೆ ಎಂಬ ಎಚ್ಚರಿಕೆಯನ್ನು ದೇಶಕ್ಕೆ ಕೊಟ್ಟೆವು. ಮುಸಲ್ಮಾನರು ಗಾಬರಿಯಾದರು. ಮೆರವಣಿಗೆ ಆಯೋಜನೆಯನ್ನು ಬಂದ್ ಮಾಡಿದರು…”

“ನಮ್ಮ ಸಾಮರ್ಥ್ಯವನ್ನು ಈ ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ. ಒಂದು ಸಲ ಗುಜರಾತ್ ಘಟನೆಯನ್ನು ನೆನಪು ಮಾಡಿಕೊಳ್ಳಿ. 59 ಕರಸೇವಕರ ಹತ್ಯೆ ಮಾಡಲಾಯಿತು. ಅದಕ್ಕೆ ಗುಜರಾತ್ ಯಾವ ರೀತಿ ಉತ್ತರ ಕೊಟ್ಟಿತು? ಯಾರು ಕೂಡ ಮನೆಯಲ್ಲಿ ಕೂರಲಿಲ್ಲ. ರಸ್ತೆಗೆ ಇಳಿದರು. ಮನೆಮನೆಗೆ ನುಗ್ಗಿದರು. 59 ಕರಸೇವಕರ ಹತ್ಯೆಗೆ ಪ್ರತಿಯಾಗಿ ಸುಮಾರು ಎರಡು ಸಾವಿರ ಜನರ ಹತ್ಯೆ ಗುಜರಾತ್‌ನಲ್ಲಿ ಆಯಿತು….”

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು.”

“ಅವಶ್ಯಕತೆ ಇದ್ದಾಗ ಹೊಡೆದಾಟನೂ ಮಾಡ್ತೀವಿ, ಅನಿವಾರ್ಯ ಇದ್ದಾಗ ನುಗ್ಗಿ ಹೊಡೆದೇ ಹೊಡೆಯುತ್ತೇವೆ. ಸಿದ್ದರಾಮಯ್ಯನವರೇ, ದಕ್ಷಿಣ ಕನ್ನಡ ಮಾತ್ರ ಹಿಂದುತ್ವದ ಪ್ರಯೋಗಶಾಲೆಯಲ್ಲ, ತುಮಕೂರು ಕೂಡ ಮುಂದಿನ ದಿನಗಳಲ್ಲಿ ಪ್ರಯೋಗಶಾಲೆ ಆಗಲಿದೆ…”

– ಈ ಮೇಲಿನ ಭಾಷಣದಲ್ಲಿ ಪೊಲೀಸ್ ಅಧಿಕಾರಿಗೆ ಯಾವುದೇ ತಪ್ಪುಗಳು ಕಂಡಿಲ್ಲವಂತೆ. ಪ್ರಶ್ನಿಸಿದರೆ, “ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ?” ಎಂದು ಪ್ರತಿಕ್ರಿಯೆ ನೀಡುತ್ತಾರೆ ಸಿಪಿಐ ನವೀನ್‌ಕುಮಾರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...