Homeಕರ್ನಾಟಕ‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

- Advertisement -
- Advertisement -

“ಶರಣ್ ಪಂಪ್‌ವೆಲ್‌ ಮಾಡಿರುವ ಭಾಷಣ ಸಂಬಂಧ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ?”- ಹೀಗೆ ಕೇಳಿದ್ದು ತುಮಕೂರು ತಿಲಕ್ ಪಾರ್ಕ್ ಸರ್ಕಲ್ ಪೊಲೀಸ್‌ ಇನ್‌ಸ್ಪೆಕ್ಟರ್‌ (ಸಿಪಿಐ) ನವೀನ್ ಕುಮಾರ್.

ತುಮಕೂರು ನಗರದಲ್ಲಿ ಭಜರಂಗದಳ ಹಮ್ಮಿಕೊಂಡಿದ್ದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ್ದ ವಿಎಚ್‌ಪಿ, ಬಿಜೆಪಿ ಮುಖಂಡ ಶರಣ್‌ ಪಂಪ್‌ವೆಲ್‌, ಅಮಾಯಕನಾದ ಫಾಸಿಲ್ ಕೊಲೆಯನ್ನು ಸಮರ್ಥಿಸಿ ಮಾತನಾಡಿದ್ದರಲ್ಲಿ ಸಿಪಿಐಗೆ ಯಾವುದೇ ತಪ್ಪುಗಳು ಕಂಡು ಬಂದಂತೆ ತೋರುತ್ತಿಲ್ಲ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನೂ ನೀಡಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆಯೇ ಎಂದು ತಿಳಿಯಲು ಸಿಪಿಐ ಅವರಿಗೆ ಕರೆ ಮಾಡಿದಾಗ, “ಅವರೇನೂ ಮಾತನಾಡಿಲ್ಲವಲ್ಲ” ಎಂದರು. “ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ಫಾಸಿಲ್ ಕೊಲ್ಲಲಾಯಿತು” ಎಂದು ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ ಎಂದು ತಿಳಿಸಲಾಯಿತು. ಆಗ ಸಿಪಿಐ, “ಅವರೇನು ಮಾತನಾಡಿಲ್ಲ ಬಿಡಿ. ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ ಎಂದರೆ ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ. ನಾವು ಮಾಡಿಕೊಳ್ಳುತ್ತೇವೆ ಬಿಡಿ” ಎಂದು ದಾಷ್ಟ್ಯದಿಂದ ವರ್ತಿಸಿ ಕರೆ ಕಟ್ ಮಾಡಿದರು. ಹೆಚ್ಚುವರಿ ಪ್ರತಿಕ್ರಿಯೆ ಪಡೆಯಲು ಮತ್ತೆ ಮತ್ತೆ ಕರೆ ಮಾಡಿದಾಗ, ಅವರ ನಂಬರ್‌ (9480802932) ಬ್ಯುಸಿ ಬರುತ್ತಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪುರ್‌ವಾದ್‌ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ಶರಣ್‌ ಪಂಪ್‌ವೆಲ್‌ ಭಾಷಣದಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೇ?

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರು ನಡೆದಾಡಿದ, ಸರ್ವಜನಾಂಗದ ಶಾಂತಿಯ ತೋಟವಾದ ತುಮಕೂರಿನಲ್ಲಿ ಕೋಮುಗಲಭೆ ಎಬ್ಬಿಸಲು ಶರಣ್ ಪಂಪ್‌ವೆಲ್ ಆಡಿರುವ ಮಾತುಗಳು ಆತಂಕಕಾರಿಯಾಗಿವೆ. ಅವರ ಭಾಷಣದ ವಿಡಿಯೊ ವೈರಲ್ ಆಗಿದೆ. ಭಾಷಣದಿಂದ ಆಯ್ದ ಅಂಶಗಳು ಹೀಗಿವೆ:

“ಎಲ್ಲಾ ಮಸೀದಿಗಳಿಗೆ ನುಗ್ಗಿ ಹನುಮಾನ್ ಚಾಲೀಸ್ ಭಜಿಸುತ್ತೇವೆ ಎಂಬ ಎಚ್ಚರಿಕೆಯನ್ನು ದೇಶಕ್ಕೆ ಕೊಟ್ಟೆವು. ಮುಸಲ್ಮಾನರು ಗಾಬರಿಯಾದರು. ಮೆರವಣಿಗೆ ಆಯೋಜನೆಯನ್ನು ಬಂದ್ ಮಾಡಿದರು…”

“ನಮ್ಮ ಸಾಮರ್ಥ್ಯವನ್ನು ಈ ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ. ಒಂದು ಸಲ ಗುಜರಾತ್ ಘಟನೆಯನ್ನು ನೆನಪು ಮಾಡಿಕೊಳ್ಳಿ. 59 ಕರಸೇವಕರ ಹತ್ಯೆ ಮಾಡಲಾಯಿತು. ಅದಕ್ಕೆ ಗುಜರಾತ್ ಯಾವ ರೀತಿ ಉತ್ತರ ಕೊಟ್ಟಿತು? ಯಾರು ಕೂಡ ಮನೆಯಲ್ಲಿ ಕೂರಲಿಲ್ಲ. ರಸ್ತೆಗೆ ಇಳಿದರು. ಮನೆಮನೆಗೆ ನುಗ್ಗಿದರು. 59 ಕರಸೇವಕರ ಹತ್ಯೆಗೆ ಪ್ರತಿಯಾಗಿ ಸುಮಾರು ಎರಡು ಸಾವಿರ ಜನರ ಹತ್ಯೆ ಗುಜರಾತ್‌ನಲ್ಲಿ ಆಯಿತು….”

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು.”

“ಅವಶ್ಯಕತೆ ಇದ್ದಾಗ ಹೊಡೆದಾಟನೂ ಮಾಡ್ತೀವಿ, ಅನಿವಾರ್ಯ ಇದ್ದಾಗ ನುಗ್ಗಿ ಹೊಡೆದೇ ಹೊಡೆಯುತ್ತೇವೆ. ಸಿದ್ದರಾಮಯ್ಯನವರೇ, ದಕ್ಷಿಣ ಕನ್ನಡ ಮಾತ್ರ ಹಿಂದುತ್ವದ ಪ್ರಯೋಗಶಾಲೆಯಲ್ಲ, ತುಮಕೂರು ಕೂಡ ಮುಂದಿನ ದಿನಗಳಲ್ಲಿ ಪ್ರಯೋಗಶಾಲೆ ಆಗಲಿದೆ…”

– ಈ ಮೇಲಿನ ಭಾಷಣದಲ್ಲಿ ಪೊಲೀಸ್ ಅಧಿಕಾರಿಗೆ ಯಾವುದೇ ತಪ್ಪುಗಳು ಕಂಡಿಲ್ಲವಂತೆ. ಪ್ರಶ್ನಿಸಿದರೆ, “ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ?” ಎಂದು ಪ್ರತಿಕ್ರಿಯೆ ನೀಡುತ್ತಾರೆ ಸಿಪಿಐ ನವೀನ್‌ಕುಮಾರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...