Homeಕರ್ನಾಟಕ‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

- Advertisement -
- Advertisement -

“ಶರಣ್ ಪಂಪ್‌ವೆಲ್‌ ಮಾಡಿರುವ ಭಾಷಣ ಸಂಬಂಧ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ?”- ಹೀಗೆ ಕೇಳಿದ್ದು ತುಮಕೂರು ತಿಲಕ್ ಪಾರ್ಕ್ ಸರ್ಕಲ್ ಪೊಲೀಸ್‌ ಇನ್‌ಸ್ಪೆಕ್ಟರ್‌ (ಸಿಪಿಐ) ನವೀನ್ ಕುಮಾರ್.

ತುಮಕೂರು ನಗರದಲ್ಲಿ ಭಜರಂಗದಳ ಹಮ್ಮಿಕೊಂಡಿದ್ದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ್ದ ವಿಎಚ್‌ಪಿ, ಬಿಜೆಪಿ ಮುಖಂಡ ಶರಣ್‌ ಪಂಪ್‌ವೆಲ್‌, ಅಮಾಯಕನಾದ ಫಾಸಿಲ್ ಕೊಲೆಯನ್ನು ಸಮರ್ಥಿಸಿ ಮಾತನಾಡಿದ್ದರಲ್ಲಿ ಸಿಪಿಐಗೆ ಯಾವುದೇ ತಪ್ಪುಗಳು ಕಂಡು ಬಂದಂತೆ ತೋರುತ್ತಿಲ್ಲ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನೂ ನೀಡಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆಯೇ ಎಂದು ತಿಳಿಯಲು ಸಿಪಿಐ ಅವರಿಗೆ ಕರೆ ಮಾಡಿದಾಗ, “ಅವರೇನೂ ಮಾತನಾಡಿಲ್ಲವಲ್ಲ” ಎಂದರು. “ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ಫಾಸಿಲ್ ಕೊಲ್ಲಲಾಯಿತು” ಎಂದು ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ ಎಂದು ತಿಳಿಸಲಾಯಿತು. ಆಗ ಸಿಪಿಐ, “ಅವರೇನು ಮಾತನಾಡಿಲ್ಲ ಬಿಡಿ. ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ ಎಂದರೆ ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ. ನಾವು ಮಾಡಿಕೊಳ್ಳುತ್ತೇವೆ ಬಿಡಿ” ಎಂದು ದಾಷ್ಟ್ಯದಿಂದ ವರ್ತಿಸಿ ಕರೆ ಕಟ್ ಮಾಡಿದರು. ಹೆಚ್ಚುವರಿ ಪ್ರತಿಕ್ರಿಯೆ ಪಡೆಯಲು ಮತ್ತೆ ಮತ್ತೆ ಕರೆ ಮಾಡಿದಾಗ, ಅವರ ನಂಬರ್‌ (9480802932) ಬ್ಯುಸಿ ಬರುತ್ತಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪುರ್‌ವಾದ್‌ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ಶರಣ್‌ ಪಂಪ್‌ವೆಲ್‌ ಭಾಷಣದಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೇ?

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರು ನಡೆದಾಡಿದ, ಸರ್ವಜನಾಂಗದ ಶಾಂತಿಯ ತೋಟವಾದ ತುಮಕೂರಿನಲ್ಲಿ ಕೋಮುಗಲಭೆ ಎಬ್ಬಿಸಲು ಶರಣ್ ಪಂಪ್‌ವೆಲ್ ಆಡಿರುವ ಮಾತುಗಳು ಆತಂಕಕಾರಿಯಾಗಿವೆ. ಅವರ ಭಾಷಣದ ವಿಡಿಯೊ ವೈರಲ್ ಆಗಿದೆ. ಭಾಷಣದಿಂದ ಆಯ್ದ ಅಂಶಗಳು ಹೀಗಿವೆ:

“ಎಲ್ಲಾ ಮಸೀದಿಗಳಿಗೆ ನುಗ್ಗಿ ಹನುಮಾನ್ ಚಾಲೀಸ್ ಭಜಿಸುತ್ತೇವೆ ಎಂಬ ಎಚ್ಚರಿಕೆಯನ್ನು ದೇಶಕ್ಕೆ ಕೊಟ್ಟೆವು. ಮುಸಲ್ಮಾನರು ಗಾಬರಿಯಾದರು. ಮೆರವಣಿಗೆ ಆಯೋಜನೆಯನ್ನು ಬಂದ್ ಮಾಡಿದರು…”

“ನಮ್ಮ ಸಾಮರ್ಥ್ಯವನ್ನು ಈ ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ. ಒಂದು ಸಲ ಗುಜರಾತ್ ಘಟನೆಯನ್ನು ನೆನಪು ಮಾಡಿಕೊಳ್ಳಿ. 59 ಕರಸೇವಕರ ಹತ್ಯೆ ಮಾಡಲಾಯಿತು. ಅದಕ್ಕೆ ಗುಜರಾತ್ ಯಾವ ರೀತಿ ಉತ್ತರ ಕೊಟ್ಟಿತು? ಯಾರು ಕೂಡ ಮನೆಯಲ್ಲಿ ಕೂರಲಿಲ್ಲ. ರಸ್ತೆಗೆ ಇಳಿದರು. ಮನೆಮನೆಗೆ ನುಗ್ಗಿದರು. 59 ಕರಸೇವಕರ ಹತ್ಯೆಗೆ ಪ್ರತಿಯಾಗಿ ಸುಮಾರು ಎರಡು ಸಾವಿರ ಜನರ ಹತ್ಯೆ ಗುಜರಾತ್‌ನಲ್ಲಿ ಆಯಿತು….”

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು.”

“ಅವಶ್ಯಕತೆ ಇದ್ದಾಗ ಹೊಡೆದಾಟನೂ ಮಾಡ್ತೀವಿ, ಅನಿವಾರ್ಯ ಇದ್ದಾಗ ನುಗ್ಗಿ ಹೊಡೆದೇ ಹೊಡೆಯುತ್ತೇವೆ. ಸಿದ್ದರಾಮಯ್ಯನವರೇ, ದಕ್ಷಿಣ ಕನ್ನಡ ಮಾತ್ರ ಹಿಂದುತ್ವದ ಪ್ರಯೋಗಶಾಲೆಯಲ್ಲ, ತುಮಕೂರು ಕೂಡ ಮುಂದಿನ ದಿನಗಳಲ್ಲಿ ಪ್ರಯೋಗಶಾಲೆ ಆಗಲಿದೆ…”

– ಈ ಮೇಲಿನ ಭಾಷಣದಲ್ಲಿ ಪೊಲೀಸ್ ಅಧಿಕಾರಿಗೆ ಯಾವುದೇ ತಪ್ಪುಗಳು ಕಂಡಿಲ್ಲವಂತೆ. ಪ್ರಶ್ನಿಸಿದರೆ, “ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ?” ಎಂದು ಪ್ರತಿಕ್ರಿಯೆ ನೀಡುತ್ತಾರೆ ಸಿಪಿಐ ನವೀನ್‌ಕುಮಾರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...