Homeಮುಖಪುಟತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

ತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

- Advertisement -
- Advertisement -

ಏಳು ವರ್ಷಕ್ಕೂ ಹೆಚ್ಚು ಕಾಲ ಜಾಮೀನಿನ ಮೇಲೆ ಹೊರಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಅವರ ಪತಿ ಜಾವೇದ್ ಆನಂದ್ ಅವರನ್ನು ಮತ್ತೆ ಜೈಲಿಗೆ ಏಕೆ ಕಳುಹಿಸಲು ಬಯಸುತ್ತೀರಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಗುಜರಾತ್ ಪೊಲೀಸರು ಮತ್ತು ಕೇಂದ್ರ ತನಿಖಾ ದಳವನ್ನು ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಜಸ್ಟಿಸ್‌ಗಳಾದ ಎಸ್‌ಕೆ ಕೌಲ್, ಎಎಸ್ ಓಕಾ ಮತ್ತು ಬಿವಿ ನಾಗರತ್ನ ಅವರ ಪೀಠವು ಗುಜರಾತ್ ಪೊಲೀಸರು ಮತ್ತು ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಮೂರು ಎಫ್‌ಐಆರ್‍‌ಗಳಿಗೆ ಸಂಬಂಧಿಸಿದಂತೆ ಸೆಟಲ್‌ವಾಡ್, ಆನಂದ್ ದಂಪತಿಗಳ ವಿರುದ್ಧ ವಿಚಾರಣೆ ನಡೆಸುತ್ತಿದೆ. 2002ರಲ್ಲಿ ಗುಜರಾತ್ ದಂಗೆಯ ಸಂತ್ರಸ್ತರಿಗಾಗಿ ಸಮಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ದಂಪತಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಸೆಟಲ್ವಾಡ್ ಮತ್ತು ಆನಂದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಅಪರ್ಣಾ ಭಟ್ ಅವರು, ತಮ್ಮ ವಿರುದ್ಧದ ಪ್ರಕರಣಗಳು ಎಂಟು ವರ್ಷಗಳಿಂದ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯವು ಸೆಟಲ್ವಾಡ್ ಮತ್ತು ಆನಂದ್‌ಗೆ ನಿರೀಕ್ಷಣಾ ಜಾಮೀನು ಮತ್ತು ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಆದರೆ ತನಿಖಾ ಸಂಸ್ಥೆಗಳು ಇನ್ನೂ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ ಎಂದು ಸಿಬಲ್ ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

“ನೀವು ಯಾರನ್ನಾದರೂ ಎಷ್ಟು ಸಮಯದವರೆಗೆ ಕಸ್ಟಡಿಯಲ್ಲಿ ಇರಿಸಬಹುದು ಎಂಬುದು ಪ್ರಶ್ನೆಯಾಗಿದೆ ಎಂದು ಕೋರ್ಟ್ ಹೇಳಿದೆ. ಏಕೆಂದರೆ ನಿರೀಕ್ಷಣಾ ಜಾಮೀನು ನೀಡಿ ಏಳು ವರ್ಷಗಳು ಕಳೆದಿವೆ ಆದರೂ ಈಗ ನೀವು ಅವಳನ್ನು ಮತ್ತೆ ಜೈಲಿಗೆ ಕಳುಹಿಸಲು ಬಯಸುತ್ತೀರಿ” ಎಂದಿದೆ.

ಕೇಂದ್ರೀಯ ತನಿಖಾ ದಳ ಮತ್ತು ಗುಜರಾತ್ ಪೊಲೀಸರು ಬಾಕಿ ಉಳಿದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ಕೋರಿದರು.

ಇದನ್ನೂ ಓದಿ: ಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

ಸೆಟಲ್ವಾಡ್ ಮತ್ತು ಆನಂದ್ ವಿರುದ್ಧ ಎಫ್ಐಆರ್

2014 ರಲ್ಲಿ, ಅಹಮದಾಬಾದ್ ಕ್ರೈಂ ಬ್ರಾಂಚ್ ನಗರದ ಗುಲ್ಬರ್ಗ್ ಹೌಸಿಂಗ್ ಸೊಸೈಟಿಯಲ್ಲಿ ಮ್ಯೂಸಿಯಂ ಆಫ್ ರೆಸಿಸ್ಟೆನ್ಸ್ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯದಲ್ಲಿ ವಂಚನೆ, ನಂಬಿಕೆ ಉಲ್ಲಂಘನೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಫೆಬ್ರವರಿ 28, 2002 ರಂದು ಗುಲ್ಬರ್ಗ್ ಸೊಸೈಟಿಯಲ್ಲಿ 69 ಜನರನ್ನು ಕೊಲ್ಲಲಾಯಿತು. ಕಲ್ಲು ಎಸೆದು ಮತ್ತು ಮನೆಗಳಿಗೆ ಬೆಂಕಿ ಹಚ್ಚಿ ದಾಳಿ ನಡೆಸಲಾಯಿತು. ಇ ದಾಳಿಯಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಕೂಡ ಸಾವನ್ನಪ್ಪಿದ್ದರು.

‘ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಮತ್ತು ಸಬ್ರಂಗ್ ಟ್ರಸ್ಟ್’ ಎಂಬ ಎರಡು ಲಾಭರಹಿತ ಸಂಸ್ಥೆಗಳ ಟ್ರಸ್ಟಿಗಳಾದ ಸೆಟಲ್ವಾಡ್ ಮತ್ತು ಆನಂದ್ ಅವರು ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಸಂಗ್ರಹಿಸಿದ್ದಾರೆ. ಆದರೆ ಆ ಹಣವನ್ನು ಇವರು ಮ್ಯೂಸಿಯಂ ನಿರ್ಮಿಸಲು ಅಥವಾ ಗುಲ್ಬರ್ಗ್ ಸೊಸೈಟಿಯ ನಿವಾಸಿಗಳಿಗೆ ಸಹಾಯವನ್ನು ನೀಡಲು ಬಳಸಲಿಲ್ಲ ಎಂದು ಆರೋಪಿಸಲಾಗಿದೆ.

ದಂಪತಿಗಳ ವಿರುದ್ಧದ ಎರಡನೇ ಎಫ್‌ಐಆರ್ ವಿದೇಶಿ ನಿಧಿಯ ದುರುಪಯೋಗಕ್ಕೆ ಸಂಬಂಧಿಸಿದ್ದಾಗಿದೆ. ಇದನ್ನು ಕೇಂದ್ರೀಯ ತನಿಖಾ ದಳವು ತನಿಖೆ ನಡೆಸುತ್ತಿದೆ. ‘ದಂಪತಿಗಳು ಸ್ಥಾಪಿಸಿದ ಸಬ್ರಾಂಗ್ ಕಮ್ಯುನಿಕೇಷನ್ ಮತ್ತು ಪಬ್ಲಿಷಿಂಗ್ ಕಂಪನಿಯು ಯುಎಸ್ ಮೂಲದ ಫೋರ್ಡ್ ಫೌಂಡೇಶನ್‌ನಿಂದ ಕೇಂದ್ರ ಸರ್ಕಾರದ ಕಡ್ಡಾಯ ಅನುಮೋದನೆಯಿಲ್ಲದೆ 1.8 ಕೋಟಿ ರೂಪಾಯಿಗಳನ್ನು ಪಡೆದಿದೆ’ ಎಂದು ಕೇಂದ್ರೀಯ ಸಂಸ್ಥೆ ಆರೋಪಿಸಿದೆ.

2010 ಮತ್ತು 2013 ರ ನಡುವೆ ಸಬ್ರಂಗ್ ಟ್ರಸ್ಟ್‌ಗೆ ಕೇಂದ್ರ ಸರ್ಕಾರದ ನಿಧಿಯಾಗಿ 1.4 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದಕ್ಕಾಗಿ ಸೆಟಲ್ವಾಡ್ ಮತ್ತು ಆನಂದ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...