Homeಮುಖಪುಟತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

ತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

- Advertisement -
- Advertisement -

ಏಳು ವರ್ಷಕ್ಕೂ ಹೆಚ್ಚು ಕಾಲ ಜಾಮೀನಿನ ಮೇಲೆ ಹೊರಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಅವರ ಪತಿ ಜಾವೇದ್ ಆನಂದ್ ಅವರನ್ನು ಮತ್ತೆ ಜೈಲಿಗೆ ಏಕೆ ಕಳುಹಿಸಲು ಬಯಸುತ್ತೀರಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಗುಜರಾತ್ ಪೊಲೀಸರು ಮತ್ತು ಕೇಂದ್ರ ತನಿಖಾ ದಳವನ್ನು ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಜಸ್ಟಿಸ್‌ಗಳಾದ ಎಸ್‌ಕೆ ಕೌಲ್, ಎಎಸ್ ಓಕಾ ಮತ್ತು ಬಿವಿ ನಾಗರತ್ನ ಅವರ ಪೀಠವು ಗುಜರಾತ್ ಪೊಲೀಸರು ಮತ್ತು ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಮೂರು ಎಫ್‌ಐಆರ್‍‌ಗಳಿಗೆ ಸಂಬಂಧಿಸಿದಂತೆ ಸೆಟಲ್‌ವಾಡ್, ಆನಂದ್ ದಂಪತಿಗಳ ವಿರುದ್ಧ ವಿಚಾರಣೆ ನಡೆಸುತ್ತಿದೆ. 2002ರಲ್ಲಿ ಗುಜರಾತ್ ದಂಗೆಯ ಸಂತ್ರಸ್ತರಿಗಾಗಿ ಸಮಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ದಂಪತಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಸೆಟಲ್ವಾಡ್ ಮತ್ತು ಆನಂದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಅಪರ್ಣಾ ಭಟ್ ಅವರು, ತಮ್ಮ ವಿರುದ್ಧದ ಪ್ರಕರಣಗಳು ಎಂಟು ವರ್ಷಗಳಿಂದ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯವು ಸೆಟಲ್ವಾಡ್ ಮತ್ತು ಆನಂದ್‌ಗೆ ನಿರೀಕ್ಷಣಾ ಜಾಮೀನು ಮತ್ತು ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಆದರೆ ತನಿಖಾ ಸಂಸ್ಥೆಗಳು ಇನ್ನೂ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ ಎಂದು ಸಿಬಲ್ ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

“ನೀವು ಯಾರನ್ನಾದರೂ ಎಷ್ಟು ಸಮಯದವರೆಗೆ ಕಸ್ಟಡಿಯಲ್ಲಿ ಇರಿಸಬಹುದು ಎಂಬುದು ಪ್ರಶ್ನೆಯಾಗಿದೆ ಎಂದು ಕೋರ್ಟ್ ಹೇಳಿದೆ. ಏಕೆಂದರೆ ನಿರೀಕ್ಷಣಾ ಜಾಮೀನು ನೀಡಿ ಏಳು ವರ್ಷಗಳು ಕಳೆದಿವೆ ಆದರೂ ಈಗ ನೀವು ಅವಳನ್ನು ಮತ್ತೆ ಜೈಲಿಗೆ ಕಳುಹಿಸಲು ಬಯಸುತ್ತೀರಿ” ಎಂದಿದೆ.

ಕೇಂದ್ರೀಯ ತನಿಖಾ ದಳ ಮತ್ತು ಗುಜರಾತ್ ಪೊಲೀಸರು ಬಾಕಿ ಉಳಿದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ಕೋರಿದರು.

ಇದನ್ನೂ ಓದಿ: ಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

ಸೆಟಲ್ವಾಡ್ ಮತ್ತು ಆನಂದ್ ವಿರುದ್ಧ ಎಫ್ಐಆರ್

2014 ರಲ್ಲಿ, ಅಹಮದಾಬಾದ್ ಕ್ರೈಂ ಬ್ರಾಂಚ್ ನಗರದ ಗುಲ್ಬರ್ಗ್ ಹೌಸಿಂಗ್ ಸೊಸೈಟಿಯಲ್ಲಿ ಮ್ಯೂಸಿಯಂ ಆಫ್ ರೆಸಿಸ್ಟೆನ್ಸ್ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯದಲ್ಲಿ ವಂಚನೆ, ನಂಬಿಕೆ ಉಲ್ಲಂಘನೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಫೆಬ್ರವರಿ 28, 2002 ರಂದು ಗುಲ್ಬರ್ಗ್ ಸೊಸೈಟಿಯಲ್ಲಿ 69 ಜನರನ್ನು ಕೊಲ್ಲಲಾಯಿತು. ಕಲ್ಲು ಎಸೆದು ಮತ್ತು ಮನೆಗಳಿಗೆ ಬೆಂಕಿ ಹಚ್ಚಿ ದಾಳಿ ನಡೆಸಲಾಯಿತು. ಇ ದಾಳಿಯಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಕೂಡ ಸಾವನ್ನಪ್ಪಿದ್ದರು.

‘ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಮತ್ತು ಸಬ್ರಂಗ್ ಟ್ರಸ್ಟ್’ ಎಂಬ ಎರಡು ಲಾಭರಹಿತ ಸಂಸ್ಥೆಗಳ ಟ್ರಸ್ಟಿಗಳಾದ ಸೆಟಲ್ವಾಡ್ ಮತ್ತು ಆನಂದ್ ಅವರು ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಸಂಗ್ರಹಿಸಿದ್ದಾರೆ. ಆದರೆ ಆ ಹಣವನ್ನು ಇವರು ಮ್ಯೂಸಿಯಂ ನಿರ್ಮಿಸಲು ಅಥವಾ ಗುಲ್ಬರ್ಗ್ ಸೊಸೈಟಿಯ ನಿವಾಸಿಗಳಿಗೆ ಸಹಾಯವನ್ನು ನೀಡಲು ಬಳಸಲಿಲ್ಲ ಎಂದು ಆರೋಪಿಸಲಾಗಿದೆ.

ದಂಪತಿಗಳ ವಿರುದ್ಧದ ಎರಡನೇ ಎಫ್‌ಐಆರ್ ವಿದೇಶಿ ನಿಧಿಯ ದುರುಪಯೋಗಕ್ಕೆ ಸಂಬಂಧಿಸಿದ್ದಾಗಿದೆ. ಇದನ್ನು ಕೇಂದ್ರೀಯ ತನಿಖಾ ದಳವು ತನಿಖೆ ನಡೆಸುತ್ತಿದೆ. ‘ದಂಪತಿಗಳು ಸ್ಥಾಪಿಸಿದ ಸಬ್ರಾಂಗ್ ಕಮ್ಯುನಿಕೇಷನ್ ಮತ್ತು ಪಬ್ಲಿಷಿಂಗ್ ಕಂಪನಿಯು ಯುಎಸ್ ಮೂಲದ ಫೋರ್ಡ್ ಫೌಂಡೇಶನ್‌ನಿಂದ ಕೇಂದ್ರ ಸರ್ಕಾರದ ಕಡ್ಡಾಯ ಅನುಮೋದನೆಯಿಲ್ಲದೆ 1.8 ಕೋಟಿ ರೂಪಾಯಿಗಳನ್ನು ಪಡೆದಿದೆ’ ಎಂದು ಕೇಂದ್ರೀಯ ಸಂಸ್ಥೆ ಆರೋಪಿಸಿದೆ.

2010 ಮತ್ತು 2013 ರ ನಡುವೆ ಸಬ್ರಂಗ್ ಟ್ರಸ್ಟ್‌ಗೆ ಕೇಂದ್ರ ಸರ್ಕಾರದ ನಿಧಿಯಾಗಿ 1.4 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದಕ್ಕಾಗಿ ಸೆಟಲ್ವಾಡ್ ಮತ್ತು ಆನಂದ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...