Homeಕರೋನಾ ತಲ್ಲಣವೈದ್ಯಕೀಯ ಸಾಮಗ್ರಿ ಖರೀದಿ ಹಗರಣ: ಈಶ್ವರ ಖಂಡ್ರೆ, ಸುಧಾಕರ್ ನಡುವೆ ಜಟಾಪಟಿ

ವೈದ್ಯಕೀಯ ಸಾಮಗ್ರಿ ಖರೀದಿ ಹಗರಣ: ಈಶ್ವರ ಖಂಡ್ರೆ, ಸುಧಾಕರ್ ನಡುವೆ ಜಟಾಪಟಿ

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಖಂಡ್ರೆ, "ಕೋವಿಡ್ ಸಮಸ್ಯೆ ಇರುವಾಗಲೇ ನಿರ್ದೇಶಕರನ್ನ ರಜೆಗೆ ಕಳುಹಿಸಿದ್ದು ಯಾಕೆ? ಏಕಾಏಕಿ ನಿರ್ದೇಶಕರನ್ನ ಬದಲಾಯಿಸೋದು ಯಾಕೆ? ಇದರ ಹಿಂದೆ ಯಾರ ಹಿತಾಸಕ್ತಿ ಇದೆ ಸ್ವಾಮಿ? ರಾಜ್ಯದ ಜನ ಪ್ರಶ್ನೆ ಕೇಳ್ತಿದ್ದಾರೆ ಉತ್ತರಿಸಿ" ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೊರೊನಾ ಸಂಬಂಧಿತ ವೈದ್ಯಕೀಯ ಸಾಮಗ್ರಿ ಖರೀದಿ ಹಗರಣದ ಆರೋಪದಲ್ಲಿ ಸಿಲುಕಿರುವ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ “ನಗರದಲ್ಲಿ ಕೊರೊನಾ ಸೋಂಕು ಸಮಸ್ಯೆ ಇರುವಾಗಲೇ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ಅವರನ್ನು ಸರಕಾರ ಏಕಾಏಕಿ ರಜೆಗೆ ಕಳುಹಿಸಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಖಂಡ್ರೆ, “ಕೋವಿಡ್ ಸಮಸ್ಯೆ ಇರುವಾಗಲೇ ನಿರ್ದೇಶಕರನ್ನ ರಜೆಗೆ ಕಳುಹಿಸಿದ್ದು ಯಾಕೆ? ಏಕಾಏಕಿ ನಿರ್ದೇಶಕರನ್ನ ಬದಲಾಯಿಸೋದು ಯಾಕೆ? ಇದರ ಹಿಂದೆ ಯಾರ ಹಿತಾಸಕ್ತಿ ಇದೆ ಸ್ವಾಮಿ? ರಾಜ್ಯದ ಜನ ಪ್ರಶ್ನೆ ಕೇಳ್ತಿದ್ದಾರೆ ಉತ್ತರಿಸಿ” ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಅಕ್ರಮ ಎಸೆಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ಆಸ್ಪತ್ರೆ ವೈದ್ಯರನ್ನ ಧಿಡೀರ್ ರಜೆ ಮೇಲೆ ಕಳಿಸಿದೆ. ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್‌ರನ್ನು ಆರು ವಾರಗಳ ಕಾಲ ಧಿಡೀರ್ ರಜೆ ಮೇಲೆ ಕಳುಹಿಸಲಾಗಿದೆ. ಆಸ್ಪತ್ರೆಗೆ ಸಂಬಂಧವೇ ಇಲ್ಲದವರನ್ನ ನಿರ್ದೇಶಕರನ್ನಾಗಿಸೋ ಪ್ರಯತ್ನ ನಡೆದಿದೆ. ಸ್ವತಃ ಬೌರಿಂಗ್ ಆಸ್ಪತ್ರೆ ವೈದ್ಯರೇ ಸಚಿವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುಧಾಕರ್ ಅವರೇ ನಿಮ್ಮ ಮೂಗಿನ ಕೆಳಗೆ ಎಲ್ಲಾ ನಡಿತಾ ಇದ್ರೂ ಏಕೆ ಸುಮ್ಮನಿದ್ದಿರಿ ಎಂದಿದ್ದಾರೆ.

ಇದಕ್ಕೆ ಪ್ರತಿಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ರಜೆಯ ಮೇಲಿರುವ ವೈದ್ಯರು ರಜೆಕೋರಿ ಬರೆದಿರುವ ಪತ್ರವನ್ನು ಹಂಚಿಕೊಳ್ಳುವ ಮೂಲಕ, ಡಾ.ಮಂಜುನಾಥ್ ಅವರನ್ನು ತಾತ್ಕಾಲಿಕವಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಡೀನ್ ಹಾಗು ನಿರ್ದೇಶಕರ ಹುದ್ದೆಗೆ ಪ್ರಭಾರದಲ್ಲಿರಿಸಲಾಗಿತ್ತು. ಪ್ರಸ್ತುತ ಅವರು ಸ್ವಂತ ಕೋರಿಕೆ ಮೇರೆಗೆ ರಜೆಯಲ್ಲಿ ತೆರಳಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಸಮರ್ಥ ನಿರ್ವಹಣೆಗಾಗಿ ಪ್ರಾಧ್ಯಾಪಕರಿಗೆ ಪ್ರಭಾರ ವಹಿಸಲಾಗಿದೆ. ವಿರೋಧ ಪಕ್ಷದ ಕಾರ್ಯಾಧ್ಯಕ್ಷರಾಗಿ ಹೀಗೆ ವಾಸ್ತವಾಂಶ ಅರಿಯದೇ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ : ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...