Homeಕರೋನಾ ತಲ್ಲಣವೈದ್ಯಕೀಯ ಸಾಮಗ್ರಿ ಖರೀದಿ ಹಗರಣ: ಈಶ್ವರ ಖಂಡ್ರೆ, ಸುಧಾಕರ್ ನಡುವೆ ಜಟಾಪಟಿ

ವೈದ್ಯಕೀಯ ಸಾಮಗ್ರಿ ಖರೀದಿ ಹಗರಣ: ಈಶ್ವರ ಖಂಡ್ರೆ, ಸುಧಾಕರ್ ನಡುವೆ ಜಟಾಪಟಿ

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಖಂಡ್ರೆ, "ಕೋವಿಡ್ ಸಮಸ್ಯೆ ಇರುವಾಗಲೇ ನಿರ್ದೇಶಕರನ್ನ ರಜೆಗೆ ಕಳುಹಿಸಿದ್ದು ಯಾಕೆ? ಏಕಾಏಕಿ ನಿರ್ದೇಶಕರನ್ನ ಬದಲಾಯಿಸೋದು ಯಾಕೆ? ಇದರ ಹಿಂದೆ ಯಾರ ಹಿತಾಸಕ್ತಿ ಇದೆ ಸ್ವಾಮಿ? ರಾಜ್ಯದ ಜನ ಪ್ರಶ್ನೆ ಕೇಳ್ತಿದ್ದಾರೆ ಉತ್ತರಿಸಿ" ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೊರೊನಾ ಸಂಬಂಧಿತ ವೈದ್ಯಕೀಯ ಸಾಮಗ್ರಿ ಖರೀದಿ ಹಗರಣದ ಆರೋಪದಲ್ಲಿ ಸಿಲುಕಿರುವ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ “ನಗರದಲ್ಲಿ ಕೊರೊನಾ ಸೋಂಕು ಸಮಸ್ಯೆ ಇರುವಾಗಲೇ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ಅವರನ್ನು ಸರಕಾರ ಏಕಾಏಕಿ ರಜೆಗೆ ಕಳುಹಿಸಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಖಂಡ್ರೆ, “ಕೋವಿಡ್ ಸಮಸ್ಯೆ ಇರುವಾಗಲೇ ನಿರ್ದೇಶಕರನ್ನ ರಜೆಗೆ ಕಳುಹಿಸಿದ್ದು ಯಾಕೆ? ಏಕಾಏಕಿ ನಿರ್ದೇಶಕರನ್ನ ಬದಲಾಯಿಸೋದು ಯಾಕೆ? ಇದರ ಹಿಂದೆ ಯಾರ ಹಿತಾಸಕ್ತಿ ಇದೆ ಸ್ವಾಮಿ? ರಾಜ್ಯದ ಜನ ಪ್ರಶ್ನೆ ಕೇಳ್ತಿದ್ದಾರೆ ಉತ್ತರಿಸಿ” ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಅಕ್ರಮ ಎಸೆಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ಆಸ್ಪತ್ರೆ ವೈದ್ಯರನ್ನ ಧಿಡೀರ್ ರಜೆ ಮೇಲೆ ಕಳಿಸಿದೆ. ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್‌ರನ್ನು ಆರು ವಾರಗಳ ಕಾಲ ಧಿಡೀರ್ ರಜೆ ಮೇಲೆ ಕಳುಹಿಸಲಾಗಿದೆ. ಆಸ್ಪತ್ರೆಗೆ ಸಂಬಂಧವೇ ಇಲ್ಲದವರನ್ನ ನಿರ್ದೇಶಕರನ್ನಾಗಿಸೋ ಪ್ರಯತ್ನ ನಡೆದಿದೆ. ಸ್ವತಃ ಬೌರಿಂಗ್ ಆಸ್ಪತ್ರೆ ವೈದ್ಯರೇ ಸಚಿವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುಧಾಕರ್ ಅವರೇ ನಿಮ್ಮ ಮೂಗಿನ ಕೆಳಗೆ ಎಲ್ಲಾ ನಡಿತಾ ಇದ್ರೂ ಏಕೆ ಸುಮ್ಮನಿದ್ದಿರಿ ಎಂದಿದ್ದಾರೆ.

ಇದಕ್ಕೆ ಪ್ರತಿಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ರಜೆಯ ಮೇಲಿರುವ ವೈದ್ಯರು ರಜೆಕೋರಿ ಬರೆದಿರುವ ಪತ್ರವನ್ನು ಹಂಚಿಕೊಳ್ಳುವ ಮೂಲಕ, ಡಾ.ಮಂಜುನಾಥ್ ಅವರನ್ನು ತಾತ್ಕಾಲಿಕವಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಡೀನ್ ಹಾಗು ನಿರ್ದೇಶಕರ ಹುದ್ದೆಗೆ ಪ್ರಭಾರದಲ್ಲಿರಿಸಲಾಗಿತ್ತು. ಪ್ರಸ್ತುತ ಅವರು ಸ್ವಂತ ಕೋರಿಕೆ ಮೇರೆಗೆ ರಜೆಯಲ್ಲಿ ತೆರಳಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಸಮರ್ಥ ನಿರ್ವಹಣೆಗಾಗಿ ಪ್ರಾಧ್ಯಾಪಕರಿಗೆ ಪ್ರಭಾರ ವಹಿಸಲಾಗಿದೆ. ವಿರೋಧ ಪಕ್ಷದ ಕಾರ್ಯಾಧ್ಯಕ್ಷರಾಗಿ ಹೀಗೆ ವಾಸ್ತವಾಂಶ ಅರಿಯದೇ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ : ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...