HomeUncategorizedಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

- Advertisement -
- Advertisement -

ಪಾಟ್ನಾ: ಇನ್ನು 10 ತಿಂಗಳ ನಂತರ, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು 2025ರ ಸೆಪ್ಟೆಂಬರ್‌ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಬಿಜೆಪಿಯ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಹಾರ ವಿಧಾನಸಭೆಯು  ನಿತೀಶ್ ನಾಯಕತ್ವದಲ್ಲಿ ಎನ್‌ಡಿಎ ಸ್ಪರ್ಧಿಸುತ್ತದೆಯೇ ಅಥವಾ ಮಹಾರಾಷ್ಟ್ರದಂತೆ ಅಲ್ಲಿ ಸ್ಪರ್ಧಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ “ನಾವು ಚರ್ಚಿಸಿ, ನಿರ್ಧರಿಸುತ್ತೇವೆ”. ಬಿಹಾರದಲ್ಲಿ 2025ರಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖವಿರುವುದಿಲ್ಲವೆಂದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಶಾ ಅವರ ಈ ಹೇಳಿಕೆಯು ಮತ್ತಷ್ಟು ವಿವಾದದ ಕಿಡಿಹೊತ್ತಿಸಿದೆ. ಆದರೆ ಜೆಡಿಯು ಬಿಹಾರದಲ್ಲಿ ಮಹಾರಾಷ್ಟ್ರದಂತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ನಿತೀಶ್ ಅವರು ಏಕನಾಥ್ ಶಿಂಧೆಯಂತೆ ಅಲ್ಲ ಎಂದು ನಿತೀಶ್ ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

2005ರಿಂದಲೂ ನಿತೀಶ್ ಹೆಸರಿನಲ್ಲಿ ಜನರು ಮತ ಚಲಾಯಿಸಿದ್ದಾರೆ. ಕಾನೂನುರಹಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿದ ಮತ್ತು ಬಿಹಾರವನ್ನು ಮತ್ತೆ ಅಭಿವೃದ್ಧಿ ಪಥಕ್ಕೆ ತಂದ ನಿತೀಶ್ ಅವರ  ಉತ್ತಮ ಆಡಳಿತಕ್ಕಾಗಿ ಮತದಾರರು ಅವರ ಪರವಾಗಿ ನಿಂತಿದ್ದಾರೆ ಎಂದು ಅವರ ಸಹಾಯಕ ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಬಿಜೆಪಿಯು ಪ್ರಸ್ತುತ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸಹ ಅದಕ್ಕೆ ಇಲ್ಲಿಯವರೆಗೆ ಮುಖ್ಯಮಂತ್ರಿಯನ್ನು ಹೊಂದಿಲ್ಲದ ಒಂದು ರಾಜ್ಯವಾಗಿ ಬಿಹಾರ ಉಳಿದಿದೆ. 2025 ರಲ್ಲಿ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ಮುಖ್ಯಮಂತ್ರಿಯನ್ನು ಹೊಂದುವ ಸಮಯ ಬಂದಿದೆ ಎಂದು ಕೆಲವು ರಾಜ್ಯ ಮಟ್ಟದ ನಾಯಕರು ಸೂಚಿಸಿದ್ದಾರೆ. ಇದು ಚುನಾವಣಾ ಲೆಕ್ಕಾಚಾರಕ್ಕಿಂತ ಹೊರಗಿದೆ.

ಹೀಗಾಗಿಯೇ ಬಿಹಾರ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ. “ಮುಂದಿನ ವರ್ಷದ ಚುನಾವಣೆಯು ನಿತೀಶ್ ಮತ್ತು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪರ್ಧಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 22 ರಂದು ನವದೆಹಲಿಯಲ್ಲಿ ಹೇಳುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಗೆ ಇಷ್ಟವಿರಲಿ ಇಲ್ಲದಿರಲಿ, ನಿತೀಶ್ ಕುಮಾರ್ ಅವರನ್ನು ಅವಲಂಭಿಸಲು ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಹಾರವನ್ನು ಸಮರ್ಥವಾಗಿ ಆಳಿದ ಮತ್ತು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಇರಿಸಿರುವ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿಯ ವ್ಯಕ್ತಿತ್ವವನ್ನು ಅವರು ಹೊಂದಿರುವುದು.

ಎರಡನೆಯದಾಗಿ, ನಿತೀಶ್ ಅವರ ಶೇಕಡಾ 15 ರಷ್ಟು ನಿಷ್ಟವಂತ ಮತದಾರರು ಅವರ ಮೈತ್ರಿಯನ್ನು ಲೆಕ್ಕಿಸದೆ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿರುವುದು.

ಬಿಜೆಪಿಯ ಶೇ.19 , ಚಿರಾಗ್ ಪಾಸ್ವಾನ್‌ರ ಎಲ್‌ಜೆಪಿಯಿಂದ ಶೇ.5 ಮತ್ತು ಇತರರು ಶೇಕಡಾ 2.5 ಸೇರಿದರೆ ಇದು ಮೈತ್ರಿಕೂಟಕ್ಕೆ ಶೇ. 40 ಕ್ಕಿಂತ ಹೆಚ್ಚು ಮತಗಳನ್ನು ಗಳಿಸುತ್ತದೆ. ಇದು ಪ್ರಚಂಡ ವಿಜಯವನ್ನು ಖಚಿತಪಡಿಸುತ್ತದೆ. ಇದು 2010ರಲ್ಲಿ ಮತ್ತು 2015ರಲ್ಲಿ ಸಾಬೀತಾಗಿದೆ.

ಮೂರನೆಯದಾಗಿ, ಮುಖ್ಯಮಂತ್ರಿಯಾಗಬಲ್ಲ ಒಬ್ಬ ನಾಯಕನನ್ನು ಬಿಜೆಪಿ ಎಂದಿಗೂ ಬೆಳೆಸಲಿಲ್ಲ. ದಿವಂಗತ ಸುಶೀಲ್ ಮೋದಿ ಅವರನ್ನು ಹೊರತುಪಡಿಸಿ, ಬಿಜೆಪಿಯ ಯಾವುದೇ ಉಪಮುಖ್ಯಮಂತ್ರಿಗಳು ನಿತೀಶ್ ಅವರ ಸಮಗ್ರತೆ ಮತ್ತು ಆಡಳಿತ ಕೌಶಲ್ಯಕ್ಕೆ ಸರಿಸಾಟಿಯಾಗಬಲ್ಲ ನಾಯಕರಾಗಿ ಬೆಳೆಯಲಿಲ್ಲ.

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...