HomeUncategorizedಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

- Advertisement -
- Advertisement -

ಪಾಟ್ನಾ: ಇನ್ನು 10 ತಿಂಗಳ ನಂತರ, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು 2025ರ ಸೆಪ್ಟೆಂಬರ್‌ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಬಿಜೆಪಿಯ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಹಾರ ವಿಧಾನಸಭೆಯು  ನಿತೀಶ್ ನಾಯಕತ್ವದಲ್ಲಿ ಎನ್‌ಡಿಎ ಸ್ಪರ್ಧಿಸುತ್ತದೆಯೇ ಅಥವಾ ಮಹಾರಾಷ್ಟ್ರದಂತೆ ಅಲ್ಲಿ ಸ್ಪರ್ಧಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ “ನಾವು ಚರ್ಚಿಸಿ, ನಿರ್ಧರಿಸುತ್ತೇವೆ”. ಬಿಹಾರದಲ್ಲಿ 2025ರಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖವಿರುವುದಿಲ್ಲವೆಂದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಶಾ ಅವರ ಈ ಹೇಳಿಕೆಯು ಮತ್ತಷ್ಟು ವಿವಾದದ ಕಿಡಿಹೊತ್ತಿಸಿದೆ. ಆದರೆ ಜೆಡಿಯು ಬಿಹಾರದಲ್ಲಿ ಮಹಾರಾಷ್ಟ್ರದಂತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ನಿತೀಶ್ ಅವರು ಏಕನಾಥ್ ಶಿಂಧೆಯಂತೆ ಅಲ್ಲ ಎಂದು ನಿತೀಶ್ ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

2005ರಿಂದಲೂ ನಿತೀಶ್ ಹೆಸರಿನಲ್ಲಿ ಜನರು ಮತ ಚಲಾಯಿಸಿದ್ದಾರೆ. ಕಾನೂನುರಹಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿದ ಮತ್ತು ಬಿಹಾರವನ್ನು ಮತ್ತೆ ಅಭಿವೃದ್ಧಿ ಪಥಕ್ಕೆ ತಂದ ನಿತೀಶ್ ಅವರ  ಉತ್ತಮ ಆಡಳಿತಕ್ಕಾಗಿ ಮತದಾರರು ಅವರ ಪರವಾಗಿ ನಿಂತಿದ್ದಾರೆ ಎಂದು ಅವರ ಸಹಾಯಕ ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಬಿಜೆಪಿಯು ಪ್ರಸ್ತುತ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸಹ ಅದಕ್ಕೆ ಇಲ್ಲಿಯವರೆಗೆ ಮುಖ್ಯಮಂತ್ರಿಯನ್ನು ಹೊಂದಿಲ್ಲದ ಒಂದು ರಾಜ್ಯವಾಗಿ ಬಿಹಾರ ಉಳಿದಿದೆ. 2025 ರಲ್ಲಿ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ಮುಖ್ಯಮಂತ್ರಿಯನ್ನು ಹೊಂದುವ ಸಮಯ ಬಂದಿದೆ ಎಂದು ಕೆಲವು ರಾಜ್ಯ ಮಟ್ಟದ ನಾಯಕರು ಸೂಚಿಸಿದ್ದಾರೆ. ಇದು ಚುನಾವಣಾ ಲೆಕ್ಕಾಚಾರಕ್ಕಿಂತ ಹೊರಗಿದೆ.

ಹೀಗಾಗಿಯೇ ಬಿಹಾರ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ. “ಮುಂದಿನ ವರ್ಷದ ಚುನಾವಣೆಯು ನಿತೀಶ್ ಮತ್ತು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪರ್ಧಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 22 ರಂದು ನವದೆಹಲಿಯಲ್ಲಿ ಹೇಳುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಗೆ ಇಷ್ಟವಿರಲಿ ಇಲ್ಲದಿರಲಿ, ನಿತೀಶ್ ಕುಮಾರ್ ಅವರನ್ನು ಅವಲಂಭಿಸಲು ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಹಾರವನ್ನು ಸಮರ್ಥವಾಗಿ ಆಳಿದ ಮತ್ತು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಇರಿಸಿರುವ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿಯ ವ್ಯಕ್ತಿತ್ವವನ್ನು ಅವರು ಹೊಂದಿರುವುದು.

ಎರಡನೆಯದಾಗಿ, ನಿತೀಶ್ ಅವರ ಶೇಕಡಾ 15 ರಷ್ಟು ನಿಷ್ಟವಂತ ಮತದಾರರು ಅವರ ಮೈತ್ರಿಯನ್ನು ಲೆಕ್ಕಿಸದೆ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿರುವುದು.

ಬಿಜೆಪಿಯ ಶೇ.19 , ಚಿರಾಗ್ ಪಾಸ್ವಾನ್‌ರ ಎಲ್‌ಜೆಪಿಯಿಂದ ಶೇ.5 ಮತ್ತು ಇತರರು ಶೇಕಡಾ 2.5 ಸೇರಿದರೆ ಇದು ಮೈತ್ರಿಕೂಟಕ್ಕೆ ಶೇ. 40 ಕ್ಕಿಂತ ಹೆಚ್ಚು ಮತಗಳನ್ನು ಗಳಿಸುತ್ತದೆ. ಇದು ಪ್ರಚಂಡ ವಿಜಯವನ್ನು ಖಚಿತಪಡಿಸುತ್ತದೆ. ಇದು 2010ರಲ್ಲಿ ಮತ್ತು 2015ರಲ್ಲಿ ಸಾಬೀತಾಗಿದೆ.

ಮೂರನೆಯದಾಗಿ, ಮುಖ್ಯಮಂತ್ರಿಯಾಗಬಲ್ಲ ಒಬ್ಬ ನಾಯಕನನ್ನು ಬಿಜೆಪಿ ಎಂದಿಗೂ ಬೆಳೆಸಲಿಲ್ಲ. ದಿವಂಗತ ಸುಶೀಲ್ ಮೋದಿ ಅವರನ್ನು ಹೊರತುಪಡಿಸಿ, ಬಿಜೆಪಿಯ ಯಾವುದೇ ಉಪಮುಖ್ಯಮಂತ್ರಿಗಳು ನಿತೀಶ್ ಅವರ ಸಮಗ್ರತೆ ಮತ್ತು ಆಡಳಿತ ಕೌಶಲ್ಯಕ್ಕೆ ಸರಿಸಾಟಿಯಾಗಬಲ್ಲ ನಾಯಕರಾಗಿ ಬೆಳೆಯಲಿಲ್ಲ.

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...