HomeUncategorizedಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

- Advertisement -
- Advertisement -

ಪಾಟ್ನಾ: ಇನ್ನು 10 ತಿಂಗಳ ನಂತರ, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು 2025ರ ಸೆಪ್ಟೆಂಬರ್‌ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಬಿಜೆಪಿಯ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಹಾರ ವಿಧಾನಸಭೆಯು  ನಿತೀಶ್ ನಾಯಕತ್ವದಲ್ಲಿ ಎನ್‌ಡಿಎ ಸ್ಪರ್ಧಿಸುತ್ತದೆಯೇ ಅಥವಾ ಮಹಾರಾಷ್ಟ್ರದಂತೆ ಅಲ್ಲಿ ಸ್ಪರ್ಧಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ “ನಾವು ಚರ್ಚಿಸಿ, ನಿರ್ಧರಿಸುತ್ತೇವೆ”. ಬಿಹಾರದಲ್ಲಿ 2025ರಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖವಿರುವುದಿಲ್ಲವೆಂದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಶಾ ಅವರ ಈ ಹೇಳಿಕೆಯು ಮತ್ತಷ್ಟು ವಿವಾದದ ಕಿಡಿಹೊತ್ತಿಸಿದೆ. ಆದರೆ ಜೆಡಿಯು ಬಿಹಾರದಲ್ಲಿ ಮಹಾರಾಷ್ಟ್ರದಂತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ನಿತೀಶ್ ಅವರು ಏಕನಾಥ್ ಶಿಂಧೆಯಂತೆ ಅಲ್ಲ ಎಂದು ನಿತೀಶ್ ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

2005ರಿಂದಲೂ ನಿತೀಶ್ ಹೆಸರಿನಲ್ಲಿ ಜನರು ಮತ ಚಲಾಯಿಸಿದ್ದಾರೆ. ಕಾನೂನುರಹಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿದ ಮತ್ತು ಬಿಹಾರವನ್ನು ಮತ್ತೆ ಅಭಿವೃದ್ಧಿ ಪಥಕ್ಕೆ ತಂದ ನಿತೀಶ್ ಅವರ  ಉತ್ತಮ ಆಡಳಿತಕ್ಕಾಗಿ ಮತದಾರರು ಅವರ ಪರವಾಗಿ ನಿಂತಿದ್ದಾರೆ ಎಂದು ಅವರ ಸಹಾಯಕ ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಬಿಜೆಪಿಯು ಪ್ರಸ್ತುತ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸಹ ಅದಕ್ಕೆ ಇಲ್ಲಿಯವರೆಗೆ ಮುಖ್ಯಮಂತ್ರಿಯನ್ನು ಹೊಂದಿಲ್ಲದ ಒಂದು ರಾಜ್ಯವಾಗಿ ಬಿಹಾರ ಉಳಿದಿದೆ. 2025 ರಲ್ಲಿ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ಮುಖ್ಯಮಂತ್ರಿಯನ್ನು ಹೊಂದುವ ಸಮಯ ಬಂದಿದೆ ಎಂದು ಕೆಲವು ರಾಜ್ಯ ಮಟ್ಟದ ನಾಯಕರು ಸೂಚಿಸಿದ್ದಾರೆ. ಇದು ಚುನಾವಣಾ ಲೆಕ್ಕಾಚಾರಕ್ಕಿಂತ ಹೊರಗಿದೆ.

ಹೀಗಾಗಿಯೇ ಬಿಹಾರ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ. “ಮುಂದಿನ ವರ್ಷದ ಚುನಾವಣೆಯು ನಿತೀಶ್ ಮತ್ತು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪರ್ಧಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 22 ರಂದು ನವದೆಹಲಿಯಲ್ಲಿ ಹೇಳುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಗೆ ಇಷ್ಟವಿರಲಿ ಇಲ್ಲದಿರಲಿ, ನಿತೀಶ್ ಕುಮಾರ್ ಅವರನ್ನು ಅವಲಂಭಿಸಲು ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಹಾರವನ್ನು ಸಮರ್ಥವಾಗಿ ಆಳಿದ ಮತ್ತು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಇರಿಸಿರುವ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿಯ ವ್ಯಕ್ತಿತ್ವವನ್ನು ಅವರು ಹೊಂದಿರುವುದು.

ಎರಡನೆಯದಾಗಿ, ನಿತೀಶ್ ಅವರ ಶೇಕಡಾ 15 ರಷ್ಟು ನಿಷ್ಟವಂತ ಮತದಾರರು ಅವರ ಮೈತ್ರಿಯನ್ನು ಲೆಕ್ಕಿಸದೆ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿರುವುದು.

ಬಿಜೆಪಿಯ ಶೇ.19 , ಚಿರಾಗ್ ಪಾಸ್ವಾನ್‌ರ ಎಲ್‌ಜೆಪಿಯಿಂದ ಶೇ.5 ಮತ್ತು ಇತರರು ಶೇಕಡಾ 2.5 ಸೇರಿದರೆ ಇದು ಮೈತ್ರಿಕೂಟಕ್ಕೆ ಶೇ. 40 ಕ್ಕಿಂತ ಹೆಚ್ಚು ಮತಗಳನ್ನು ಗಳಿಸುತ್ತದೆ. ಇದು ಪ್ರಚಂಡ ವಿಜಯವನ್ನು ಖಚಿತಪಡಿಸುತ್ತದೆ. ಇದು 2010ರಲ್ಲಿ ಮತ್ತು 2015ರಲ್ಲಿ ಸಾಬೀತಾಗಿದೆ.

ಮೂರನೆಯದಾಗಿ, ಮುಖ್ಯಮಂತ್ರಿಯಾಗಬಲ್ಲ ಒಬ್ಬ ನಾಯಕನನ್ನು ಬಿಜೆಪಿ ಎಂದಿಗೂ ಬೆಳೆಸಲಿಲ್ಲ. ದಿವಂಗತ ಸುಶೀಲ್ ಮೋದಿ ಅವರನ್ನು ಹೊರತುಪಡಿಸಿ, ಬಿಜೆಪಿಯ ಯಾವುದೇ ಉಪಮುಖ್ಯಮಂತ್ರಿಗಳು ನಿತೀಶ್ ಅವರ ಸಮಗ್ರತೆ ಮತ್ತು ಆಡಳಿತ ಕೌಶಲ್ಯಕ್ಕೆ ಸರಿಸಾಟಿಯಾಗಬಲ್ಲ ನಾಯಕರಾಗಿ ಬೆಳೆಯಲಿಲ್ಲ.

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...