HomeUncategorizedಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

- Advertisement -
- Advertisement -

ಪಾಟ್ನಾ: ಇನ್ನು 10 ತಿಂಗಳ ನಂತರ, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು 2025ರ ಸೆಪ್ಟೆಂಬರ್‌ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಬಿಜೆಪಿಯ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಹಾರ ವಿಧಾನಸಭೆಯು  ನಿತೀಶ್ ನಾಯಕತ್ವದಲ್ಲಿ ಎನ್‌ಡಿಎ ಸ್ಪರ್ಧಿಸುತ್ತದೆಯೇ ಅಥವಾ ಮಹಾರಾಷ್ಟ್ರದಂತೆ ಅಲ್ಲಿ ಸ್ಪರ್ಧಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ “ನಾವು ಚರ್ಚಿಸಿ, ನಿರ್ಧರಿಸುತ್ತೇವೆ”. ಬಿಹಾರದಲ್ಲಿ 2025ರಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖವಿರುವುದಿಲ್ಲವೆಂದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಶಾ ಅವರ ಈ ಹೇಳಿಕೆಯು ಮತ್ತಷ್ಟು ವಿವಾದದ ಕಿಡಿಹೊತ್ತಿಸಿದೆ. ಆದರೆ ಜೆಡಿಯು ಬಿಹಾರದಲ್ಲಿ ಮಹಾರಾಷ್ಟ್ರದಂತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ನಿತೀಶ್ ಅವರು ಏಕನಾಥ್ ಶಿಂಧೆಯಂತೆ ಅಲ್ಲ ಎಂದು ನಿತೀಶ್ ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

2005ರಿಂದಲೂ ನಿತೀಶ್ ಹೆಸರಿನಲ್ಲಿ ಜನರು ಮತ ಚಲಾಯಿಸಿದ್ದಾರೆ. ಕಾನೂನುರಹಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿದ ಮತ್ತು ಬಿಹಾರವನ್ನು ಮತ್ತೆ ಅಭಿವೃದ್ಧಿ ಪಥಕ್ಕೆ ತಂದ ನಿತೀಶ್ ಅವರ  ಉತ್ತಮ ಆಡಳಿತಕ್ಕಾಗಿ ಮತದಾರರು ಅವರ ಪರವಾಗಿ ನಿಂತಿದ್ದಾರೆ ಎಂದು ಅವರ ಸಹಾಯಕ ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಬಿಜೆಪಿಯು ಪ್ರಸ್ತುತ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸಹ ಅದಕ್ಕೆ ಇಲ್ಲಿಯವರೆಗೆ ಮುಖ್ಯಮಂತ್ರಿಯನ್ನು ಹೊಂದಿಲ್ಲದ ಒಂದು ರಾಜ್ಯವಾಗಿ ಬಿಹಾರ ಉಳಿದಿದೆ. 2025 ರಲ್ಲಿ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ಮುಖ್ಯಮಂತ್ರಿಯನ್ನು ಹೊಂದುವ ಸಮಯ ಬಂದಿದೆ ಎಂದು ಕೆಲವು ರಾಜ್ಯ ಮಟ್ಟದ ನಾಯಕರು ಸೂಚಿಸಿದ್ದಾರೆ. ಇದು ಚುನಾವಣಾ ಲೆಕ್ಕಾಚಾರಕ್ಕಿಂತ ಹೊರಗಿದೆ.

ಹೀಗಾಗಿಯೇ ಬಿಹಾರ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ. “ಮುಂದಿನ ವರ್ಷದ ಚುನಾವಣೆಯು ನಿತೀಶ್ ಮತ್ತು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪರ್ಧಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 22 ರಂದು ನವದೆಹಲಿಯಲ್ಲಿ ಹೇಳುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಗೆ ಇಷ್ಟವಿರಲಿ ಇಲ್ಲದಿರಲಿ, ನಿತೀಶ್ ಕುಮಾರ್ ಅವರನ್ನು ಅವಲಂಭಿಸಲು ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಹಾರವನ್ನು ಸಮರ್ಥವಾಗಿ ಆಳಿದ ಮತ್ತು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಇರಿಸಿರುವ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿಯ ವ್ಯಕ್ತಿತ್ವವನ್ನು ಅವರು ಹೊಂದಿರುವುದು.

ಎರಡನೆಯದಾಗಿ, ನಿತೀಶ್ ಅವರ ಶೇಕಡಾ 15 ರಷ್ಟು ನಿಷ್ಟವಂತ ಮತದಾರರು ಅವರ ಮೈತ್ರಿಯನ್ನು ಲೆಕ್ಕಿಸದೆ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿರುವುದು.

ಬಿಜೆಪಿಯ ಶೇ.19 , ಚಿರಾಗ್ ಪಾಸ್ವಾನ್‌ರ ಎಲ್‌ಜೆಪಿಯಿಂದ ಶೇ.5 ಮತ್ತು ಇತರರು ಶೇಕಡಾ 2.5 ಸೇರಿದರೆ ಇದು ಮೈತ್ರಿಕೂಟಕ್ಕೆ ಶೇ. 40 ಕ್ಕಿಂತ ಹೆಚ್ಚು ಮತಗಳನ್ನು ಗಳಿಸುತ್ತದೆ. ಇದು ಪ್ರಚಂಡ ವಿಜಯವನ್ನು ಖಚಿತಪಡಿಸುತ್ತದೆ. ಇದು 2010ರಲ್ಲಿ ಮತ್ತು 2015ರಲ್ಲಿ ಸಾಬೀತಾಗಿದೆ.

ಮೂರನೆಯದಾಗಿ, ಮುಖ್ಯಮಂತ್ರಿಯಾಗಬಲ್ಲ ಒಬ್ಬ ನಾಯಕನನ್ನು ಬಿಜೆಪಿ ಎಂದಿಗೂ ಬೆಳೆಸಲಿಲ್ಲ. ದಿವಂಗತ ಸುಶೀಲ್ ಮೋದಿ ಅವರನ್ನು ಹೊರತುಪಡಿಸಿ, ಬಿಜೆಪಿಯ ಯಾವುದೇ ಉಪಮುಖ್ಯಮಂತ್ರಿಗಳು ನಿತೀಶ್ ಅವರ ಸಮಗ್ರತೆ ಮತ್ತು ಆಡಳಿತ ಕೌಶಲ್ಯಕ್ಕೆ ಸರಿಸಾಟಿಯಾಗಬಲ್ಲ ನಾಯಕರಾಗಿ ಬೆಳೆಯಲಿಲ್ಲ.

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...