HomeಮುಖಪುಟPM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಚೀನಾ ದೇಶವು ಭಾರತ ಭೂಪ್ರದೇಶ ವಶಪಡಿಸಿಕೊಳ್ಳುತ್ತಿರುವಾಗಲೂ ಪ್ರಧಾನಿಗಳು ಚೀನಾದ ಕಂಪನಿಗಳಿಂದ ನೂರಾರು ಕೋಟಿ ದೇಣಿಗೆ ಸ್ವೀಕರಿಸುವುದು ಸರಿಯೇ ಎಂದು ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಗ್ವಿ “2020 ರ ಮೇ 20 ರ ವೇಳೆಗೆ ಪಿಎಂ ಮೋದಿಯವರು ವಿವಾದಾತ್ಮಕ PM CARES ನಿಧಿಯ ಮೂಲಕ 9,678 ಕೋಟಿ ರೂ. ಪಡೆದಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಆಘಾತಕಾರಿ ಅಂಶವೆಂದರೆ ಚೀನಾದ ಪಡೆಗಳು ನಮ್ಮ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿದ್ದರೂ, ಪ್ರಧಾನ ಮಂತ್ರಿಗಳು ಚೀನೀ ಕಂಪನಿಗಳಿಂದ ಹಣ ಸ್ವೀಕರಿಸಿದ್ದಾರೆ” ಎಂದು ದೂರಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್‌ಗಾಗಿ ಚೀನಾದ ಹಣವನ್ನು ಸ್ವೀಕರಿಸಿದ ಆರೋಪ ಹೊತ್ತಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಪ್ರತಿದಾಳಿ ಆರಂಭಿಸಿದೆ. ಚೀನಾದ ಸಂಸ್ಥೆಗಳಿಂದ ದೇಣಿಗೆಗಳು ಪಿಎಂ ಕೇರ್ಸ್ ನಿಧಿಯಲ್ಲೂ ಸುರಿಯಲ್ಪಟ್ಟಿದೆ, ಪ್ರಧಾನಿ ನರೇಂದ್ರ ಮೋದಿಯವರು ಚೀನಾದ ಬಗ್ಗೆ ಮೃದುಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದೆ.

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಕಾಂಗ್ರೆಸ್ ಏಳು ಪ್ರಶ್ನೆಗಳನ್ನು ಕೇಳಿದೆ.

“ವಿವಾದಾತ್ಮಕ ಕಂಪನಿಯಾದ ಹುವಾವೇಯಿಂದ ಪ್ರಧಾನಿ 7 ಕೋಟಿ ರೂಗಳನ್ನು ಪಡೆದಿದ್ದಾರೆಯೇ? ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಜೊತೆ ಹುವಾವೇಗೆ ನೇರ ಸಂಪರ್ಕವಿದೆಯೇ? ಟಿಕ್ ಟಾಕ್‌ ಎಂಬ ಚೀನೀ ಕಂಪನಿಯು ವಿವಾದಾತ್ಮಕ ಪಿಎಂ ಕೇರ್ಸ್ ಫಂಡ್‌ಗೆ 30 ಕೋಟಿ ರೂ. ದೇಣಿಗೆ ನೀಡಿದೆ. 38% ಚೀನೀ ಮಾಲೀಕತ್ವವನ್ನು ಹೊಂದಿರುವ ಪೇಟಿಯಂ ಪಿಎಂ ಕೇರ್ಸ್‌ ನಿಧಿಗೆ 100 ಕೋಟಿ ನೀಡಿದೆ? ಚೀನಾದ ಕಂಪನಿಯಾದ XIAOMI ವಿವಾದಾತ್ಮಕ ನಿಧಿಗೆ 15 ಕೋಟಿ ರೂ. ನೀಡಿದೆ? ಚೀನಾದ ಕಂಪನಿ ಒಪ್ಪೋ ಈ ವಿವಾದಾತ್ಮಕ ನಿಧಿಗೆ 1 ಕೋಟಿ ರೂ. ನೀಡಿದೆ ಅಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಶಿಯೋಮಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ಮತ್ತು ರಾಜ್ಯಗಳಾದ್ಯಂತ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಪರಿಹಾರ ಪರಿಹಾರ ನಿಧಿಗೆ ಒಟ್ಟಾರೆಯಾಗಿ 1 ಕೋಟಿ ರೂ. ಕೊಡುಗೆ ನೀಡುತ್ತಿದೆ ಎಂದು ಒಪ್ಪೋ ಹೇಳಿದರು. ಒನ್‌ಪ್ಲಸ್ ಸಹ 1 ಕೋಟಿ ರೂ ದೇಣಿಗೆ ನೀಡುವುದಾಗಿ ಘೋಷಿಸಿದೆ.

ಪಿಎಂ ಕೇರ್ಸ್ ನಿಧಿಯನ್ನು ಪ್ರಧಾನಮಂತ್ರಿಯ “ತೋರಿಕೆಯ ವೈಯಕ್ತಿಕ” ನಿಧಿಯಂತೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದು ಯಾವುದೇ ಸಾರ್ವಜನಿಕ ಪ್ರಾಧಿಕಾರ ಅಥವಾ ಮಾಹಿತಿ ಹಕ್ಕು ಕಾಯ್ದೆಯಿಂದ ಲೆಕ್ಕಪರಿಶೋಧನೆಗೆ ಒಳಪಡುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

“ಒಟ್ಟಾರೆಯಾಗಿ ಈ ನಿಧಿಯನ್ನು ಕೇವಲ ಪ್ರಧಾನಮಂತ್ರಿಯು ಶೂನ್ಯ ಪಾರದರ್ಶಕತೆ ಮತ್ತು ಶೂನ್ಯ ಹೊಣೆಗಾರಿಕೆಯೊಂದಿಗೆ ಅಪಾರದರ್ಶಕ ಮತ್ತು ರಹಸ್ಯ ಶೈಲಿಯಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.


ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...