HomeಮುಖಪುಟPM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಚೀನಾ ದೇಶವು ಭಾರತ ಭೂಪ್ರದೇಶ ವಶಪಡಿಸಿಕೊಳ್ಳುತ್ತಿರುವಾಗಲೂ ಪ್ರಧಾನಿಗಳು ಚೀನಾದ ಕಂಪನಿಗಳಿಂದ ನೂರಾರು ಕೋಟಿ ದೇಣಿಗೆ ಸ್ವೀಕರಿಸುವುದು ಸರಿಯೇ ಎಂದು ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಗ್ವಿ “2020 ರ ಮೇ 20 ರ ವೇಳೆಗೆ ಪಿಎಂ ಮೋದಿಯವರು ವಿವಾದಾತ್ಮಕ PM CARES ನಿಧಿಯ ಮೂಲಕ 9,678 ಕೋಟಿ ರೂ. ಪಡೆದಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಆಘಾತಕಾರಿ ಅಂಶವೆಂದರೆ ಚೀನಾದ ಪಡೆಗಳು ನಮ್ಮ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿದ್ದರೂ, ಪ್ರಧಾನ ಮಂತ್ರಿಗಳು ಚೀನೀ ಕಂಪನಿಗಳಿಂದ ಹಣ ಸ್ವೀಕರಿಸಿದ್ದಾರೆ” ಎಂದು ದೂರಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್‌ಗಾಗಿ ಚೀನಾದ ಹಣವನ್ನು ಸ್ವೀಕರಿಸಿದ ಆರೋಪ ಹೊತ್ತಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಪ್ರತಿದಾಳಿ ಆರಂಭಿಸಿದೆ. ಚೀನಾದ ಸಂಸ್ಥೆಗಳಿಂದ ದೇಣಿಗೆಗಳು ಪಿಎಂ ಕೇರ್ಸ್ ನಿಧಿಯಲ್ಲೂ ಸುರಿಯಲ್ಪಟ್ಟಿದೆ, ಪ್ರಧಾನಿ ನರೇಂದ್ರ ಮೋದಿಯವರು ಚೀನಾದ ಬಗ್ಗೆ ಮೃದುಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದೆ.

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಕಾಂಗ್ರೆಸ್ ಏಳು ಪ್ರಶ್ನೆಗಳನ್ನು ಕೇಳಿದೆ.

“ವಿವಾದಾತ್ಮಕ ಕಂಪನಿಯಾದ ಹುವಾವೇಯಿಂದ ಪ್ರಧಾನಿ 7 ಕೋಟಿ ರೂಗಳನ್ನು ಪಡೆದಿದ್ದಾರೆಯೇ? ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಜೊತೆ ಹುವಾವೇಗೆ ನೇರ ಸಂಪರ್ಕವಿದೆಯೇ? ಟಿಕ್ ಟಾಕ್‌ ಎಂಬ ಚೀನೀ ಕಂಪನಿಯು ವಿವಾದಾತ್ಮಕ ಪಿಎಂ ಕೇರ್ಸ್ ಫಂಡ್‌ಗೆ 30 ಕೋಟಿ ರೂ. ದೇಣಿಗೆ ನೀಡಿದೆ. 38% ಚೀನೀ ಮಾಲೀಕತ್ವವನ್ನು ಹೊಂದಿರುವ ಪೇಟಿಯಂ ಪಿಎಂ ಕೇರ್ಸ್‌ ನಿಧಿಗೆ 100 ಕೋಟಿ ನೀಡಿದೆ? ಚೀನಾದ ಕಂಪನಿಯಾದ XIAOMI ವಿವಾದಾತ್ಮಕ ನಿಧಿಗೆ 15 ಕೋಟಿ ರೂ. ನೀಡಿದೆ? ಚೀನಾದ ಕಂಪನಿ ಒಪ್ಪೋ ಈ ವಿವಾದಾತ್ಮಕ ನಿಧಿಗೆ 1 ಕೋಟಿ ರೂ. ನೀಡಿದೆ ಅಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಶಿಯೋಮಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ಮತ್ತು ರಾಜ್ಯಗಳಾದ್ಯಂತ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಪರಿಹಾರ ಪರಿಹಾರ ನಿಧಿಗೆ ಒಟ್ಟಾರೆಯಾಗಿ 1 ಕೋಟಿ ರೂ. ಕೊಡುಗೆ ನೀಡುತ್ತಿದೆ ಎಂದು ಒಪ್ಪೋ ಹೇಳಿದರು. ಒನ್‌ಪ್ಲಸ್ ಸಹ 1 ಕೋಟಿ ರೂ ದೇಣಿಗೆ ನೀಡುವುದಾಗಿ ಘೋಷಿಸಿದೆ.

ಪಿಎಂ ಕೇರ್ಸ್ ನಿಧಿಯನ್ನು ಪ್ರಧಾನಮಂತ್ರಿಯ “ತೋರಿಕೆಯ ವೈಯಕ್ತಿಕ” ನಿಧಿಯಂತೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದು ಯಾವುದೇ ಸಾರ್ವಜನಿಕ ಪ್ರಾಧಿಕಾರ ಅಥವಾ ಮಾಹಿತಿ ಹಕ್ಕು ಕಾಯ್ದೆಯಿಂದ ಲೆಕ್ಕಪರಿಶೋಧನೆಗೆ ಒಳಪಡುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

“ಒಟ್ಟಾರೆಯಾಗಿ ಈ ನಿಧಿಯನ್ನು ಕೇವಲ ಪ್ರಧಾನಮಂತ್ರಿಯು ಶೂನ್ಯ ಪಾರದರ್ಶಕತೆ ಮತ್ತು ಶೂನ್ಯ ಹೊಣೆಗಾರಿಕೆಯೊಂದಿಗೆ ಅಪಾರದರ್ಶಕ ಮತ್ತು ರಹಸ್ಯ ಶೈಲಿಯಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.


ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...