HomeಮುಖಪುಟPM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಚೀನಾ ದೇಶವು ಭಾರತ ಭೂಪ್ರದೇಶ ವಶಪಡಿಸಿಕೊಳ್ಳುತ್ತಿರುವಾಗಲೂ ಪ್ರಧಾನಿಗಳು ಚೀನಾದ ಕಂಪನಿಗಳಿಂದ ನೂರಾರು ಕೋಟಿ ದೇಣಿಗೆ ಸ್ವೀಕರಿಸುವುದು ಸರಿಯೇ ಎಂದು ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಗ್ವಿ “2020 ರ ಮೇ 20 ರ ವೇಳೆಗೆ ಪಿಎಂ ಮೋದಿಯವರು ವಿವಾದಾತ್ಮಕ PM CARES ನಿಧಿಯ ಮೂಲಕ 9,678 ಕೋಟಿ ರೂ. ಪಡೆದಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಆಘಾತಕಾರಿ ಅಂಶವೆಂದರೆ ಚೀನಾದ ಪಡೆಗಳು ನಮ್ಮ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿದ್ದರೂ, ಪ್ರಧಾನ ಮಂತ್ರಿಗಳು ಚೀನೀ ಕಂಪನಿಗಳಿಂದ ಹಣ ಸ್ವೀಕರಿಸಿದ್ದಾರೆ” ಎಂದು ದೂರಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್‌ಗಾಗಿ ಚೀನಾದ ಹಣವನ್ನು ಸ್ವೀಕರಿಸಿದ ಆರೋಪ ಹೊತ್ತಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಪ್ರತಿದಾಳಿ ಆರಂಭಿಸಿದೆ. ಚೀನಾದ ಸಂಸ್ಥೆಗಳಿಂದ ದೇಣಿಗೆಗಳು ಪಿಎಂ ಕೇರ್ಸ್ ನಿಧಿಯಲ್ಲೂ ಸುರಿಯಲ್ಪಟ್ಟಿದೆ, ಪ್ರಧಾನಿ ನರೇಂದ್ರ ಮೋದಿಯವರು ಚೀನಾದ ಬಗ್ಗೆ ಮೃದುಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದೆ.

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಕಾಂಗ್ರೆಸ್ ಏಳು ಪ್ರಶ್ನೆಗಳನ್ನು ಕೇಳಿದೆ.

“ವಿವಾದಾತ್ಮಕ ಕಂಪನಿಯಾದ ಹುವಾವೇಯಿಂದ ಪ್ರಧಾನಿ 7 ಕೋಟಿ ರೂಗಳನ್ನು ಪಡೆದಿದ್ದಾರೆಯೇ? ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಜೊತೆ ಹುವಾವೇಗೆ ನೇರ ಸಂಪರ್ಕವಿದೆಯೇ? ಟಿಕ್ ಟಾಕ್‌ ಎಂಬ ಚೀನೀ ಕಂಪನಿಯು ವಿವಾದಾತ್ಮಕ ಪಿಎಂ ಕೇರ್ಸ್ ಫಂಡ್‌ಗೆ 30 ಕೋಟಿ ರೂ. ದೇಣಿಗೆ ನೀಡಿದೆ. 38% ಚೀನೀ ಮಾಲೀಕತ್ವವನ್ನು ಹೊಂದಿರುವ ಪೇಟಿಯಂ ಪಿಎಂ ಕೇರ್ಸ್‌ ನಿಧಿಗೆ 100 ಕೋಟಿ ನೀಡಿದೆ? ಚೀನಾದ ಕಂಪನಿಯಾದ XIAOMI ವಿವಾದಾತ್ಮಕ ನಿಧಿಗೆ 15 ಕೋಟಿ ರೂ. ನೀಡಿದೆ? ಚೀನಾದ ಕಂಪನಿ ಒಪ್ಪೋ ಈ ವಿವಾದಾತ್ಮಕ ನಿಧಿಗೆ 1 ಕೋಟಿ ರೂ. ನೀಡಿದೆ ಅಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಶಿಯೋಮಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ಮತ್ತು ರಾಜ್ಯಗಳಾದ್ಯಂತ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಪರಿಹಾರ ಪರಿಹಾರ ನಿಧಿಗೆ ಒಟ್ಟಾರೆಯಾಗಿ 1 ಕೋಟಿ ರೂ. ಕೊಡುಗೆ ನೀಡುತ್ತಿದೆ ಎಂದು ಒಪ್ಪೋ ಹೇಳಿದರು. ಒನ್‌ಪ್ಲಸ್ ಸಹ 1 ಕೋಟಿ ರೂ ದೇಣಿಗೆ ನೀಡುವುದಾಗಿ ಘೋಷಿಸಿದೆ.

ಪಿಎಂ ಕೇರ್ಸ್ ನಿಧಿಯನ್ನು ಪ್ರಧಾನಮಂತ್ರಿಯ “ತೋರಿಕೆಯ ವೈಯಕ್ತಿಕ” ನಿಧಿಯಂತೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದು ಯಾವುದೇ ಸಾರ್ವಜನಿಕ ಪ್ರಾಧಿಕಾರ ಅಥವಾ ಮಾಹಿತಿ ಹಕ್ಕು ಕಾಯ್ದೆಯಿಂದ ಲೆಕ್ಕಪರಿಶೋಧನೆಗೆ ಒಳಪಡುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

“ಒಟ್ಟಾರೆಯಾಗಿ ಈ ನಿಧಿಯನ್ನು ಕೇವಲ ಪ್ರಧಾನಮಂತ್ರಿಯು ಶೂನ್ಯ ಪಾರದರ್ಶಕತೆ ಮತ್ತು ಶೂನ್ಯ ಹೊಣೆಗಾರಿಕೆಯೊಂದಿಗೆ ಅಪಾರದರ್ಶಕ ಮತ್ತು ರಹಸ್ಯ ಶೈಲಿಯಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.


ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...