HomeಮುಖಪುಟPM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಚೀನಾ ದೇಶವು ಭಾರತ ಭೂಪ್ರದೇಶ ವಶಪಡಿಸಿಕೊಳ್ಳುತ್ತಿರುವಾಗಲೂ ಪ್ರಧಾನಿಗಳು ಚೀನಾದ ಕಂಪನಿಗಳಿಂದ ನೂರಾರು ಕೋಟಿ ದೇಣಿಗೆ ಸ್ವೀಕರಿಸುವುದು ಸರಿಯೇ ಎಂದು ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಗ್ವಿ “2020 ರ ಮೇ 20 ರ ವೇಳೆಗೆ ಪಿಎಂ ಮೋದಿಯವರು ವಿವಾದಾತ್ಮಕ PM CARES ನಿಧಿಯ ಮೂಲಕ 9,678 ಕೋಟಿ ರೂ. ಪಡೆದಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಆಘಾತಕಾರಿ ಅಂಶವೆಂದರೆ ಚೀನಾದ ಪಡೆಗಳು ನಮ್ಮ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿದ್ದರೂ, ಪ್ರಧಾನ ಮಂತ್ರಿಗಳು ಚೀನೀ ಕಂಪನಿಗಳಿಂದ ಹಣ ಸ್ವೀಕರಿಸಿದ್ದಾರೆ” ಎಂದು ದೂರಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್‌ಗಾಗಿ ಚೀನಾದ ಹಣವನ್ನು ಸ್ವೀಕರಿಸಿದ ಆರೋಪ ಹೊತ್ತಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಪ್ರತಿದಾಳಿ ಆರಂಭಿಸಿದೆ. ಚೀನಾದ ಸಂಸ್ಥೆಗಳಿಂದ ದೇಣಿಗೆಗಳು ಪಿಎಂ ಕೇರ್ಸ್ ನಿಧಿಯಲ್ಲೂ ಸುರಿಯಲ್ಪಟ್ಟಿದೆ, ಪ್ರಧಾನಿ ನರೇಂದ್ರ ಮೋದಿಯವರು ಚೀನಾದ ಬಗ್ಗೆ ಮೃದುಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದೆ.

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಕಾಂಗ್ರೆಸ್ ಏಳು ಪ್ರಶ್ನೆಗಳನ್ನು ಕೇಳಿದೆ.

“ವಿವಾದಾತ್ಮಕ ಕಂಪನಿಯಾದ ಹುವಾವೇಯಿಂದ ಪ್ರಧಾನಿ 7 ಕೋಟಿ ರೂಗಳನ್ನು ಪಡೆದಿದ್ದಾರೆಯೇ? ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಜೊತೆ ಹುವಾವೇಗೆ ನೇರ ಸಂಪರ್ಕವಿದೆಯೇ? ಟಿಕ್ ಟಾಕ್‌ ಎಂಬ ಚೀನೀ ಕಂಪನಿಯು ವಿವಾದಾತ್ಮಕ ಪಿಎಂ ಕೇರ್ಸ್ ಫಂಡ್‌ಗೆ 30 ಕೋಟಿ ರೂ. ದೇಣಿಗೆ ನೀಡಿದೆ. 38% ಚೀನೀ ಮಾಲೀಕತ್ವವನ್ನು ಹೊಂದಿರುವ ಪೇಟಿಯಂ ಪಿಎಂ ಕೇರ್ಸ್‌ ನಿಧಿಗೆ 100 ಕೋಟಿ ನೀಡಿದೆ? ಚೀನಾದ ಕಂಪನಿಯಾದ XIAOMI ವಿವಾದಾತ್ಮಕ ನಿಧಿಗೆ 15 ಕೋಟಿ ರೂ. ನೀಡಿದೆ? ಚೀನಾದ ಕಂಪನಿ ಒಪ್ಪೋ ಈ ವಿವಾದಾತ್ಮಕ ನಿಧಿಗೆ 1 ಕೋಟಿ ರೂ. ನೀಡಿದೆ ಅಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಶಿಯೋಮಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ಮತ್ತು ರಾಜ್ಯಗಳಾದ್ಯಂತ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಪರಿಹಾರ ಪರಿಹಾರ ನಿಧಿಗೆ ಒಟ್ಟಾರೆಯಾಗಿ 1 ಕೋಟಿ ರೂ. ಕೊಡುಗೆ ನೀಡುತ್ತಿದೆ ಎಂದು ಒಪ್ಪೋ ಹೇಳಿದರು. ಒನ್‌ಪ್ಲಸ್ ಸಹ 1 ಕೋಟಿ ರೂ ದೇಣಿಗೆ ನೀಡುವುದಾಗಿ ಘೋಷಿಸಿದೆ.

ಪಿಎಂ ಕೇರ್ಸ್ ನಿಧಿಯನ್ನು ಪ್ರಧಾನಮಂತ್ರಿಯ “ತೋರಿಕೆಯ ವೈಯಕ್ತಿಕ” ನಿಧಿಯಂತೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದು ಯಾವುದೇ ಸಾರ್ವಜನಿಕ ಪ್ರಾಧಿಕಾರ ಅಥವಾ ಮಾಹಿತಿ ಹಕ್ಕು ಕಾಯ್ದೆಯಿಂದ ಲೆಕ್ಕಪರಿಶೋಧನೆಗೆ ಒಳಪಡುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

“ಒಟ್ಟಾರೆಯಾಗಿ ಈ ನಿಧಿಯನ್ನು ಕೇವಲ ಪ್ರಧಾನಮಂತ್ರಿಯು ಶೂನ್ಯ ಪಾರದರ್ಶಕತೆ ಮತ್ತು ಶೂನ್ಯ ಹೊಣೆಗಾರಿಕೆಯೊಂದಿಗೆ ಅಪಾರದರ್ಶಕ ಮತ್ತು ರಹಸ್ಯ ಶೈಲಿಯಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.


ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...