HomeಮುಖಪುಟPM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಚೀನಾ ದೇಶವು ಭಾರತ ಭೂಪ್ರದೇಶ ವಶಪಡಿಸಿಕೊಳ್ಳುತ್ತಿರುವಾಗಲೂ ಪ್ರಧಾನಿಗಳು ಚೀನಾದ ಕಂಪನಿಗಳಿಂದ ನೂರಾರು ಕೋಟಿ ದೇಣಿಗೆ ಸ್ವೀಕರಿಸುವುದು ಸರಿಯೇ ಎಂದು ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಗ್ವಿ “2020 ರ ಮೇ 20 ರ ವೇಳೆಗೆ ಪಿಎಂ ಮೋದಿಯವರು ವಿವಾದಾತ್ಮಕ PM CARES ನಿಧಿಯ ಮೂಲಕ 9,678 ಕೋಟಿ ರೂ. ಪಡೆದಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಆಘಾತಕಾರಿ ಅಂಶವೆಂದರೆ ಚೀನಾದ ಪಡೆಗಳು ನಮ್ಮ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿದ್ದರೂ, ಪ್ರಧಾನ ಮಂತ್ರಿಗಳು ಚೀನೀ ಕಂಪನಿಗಳಿಂದ ಹಣ ಸ್ವೀಕರಿಸಿದ್ದಾರೆ” ಎಂದು ದೂರಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್‌ಗಾಗಿ ಚೀನಾದ ಹಣವನ್ನು ಸ್ವೀಕರಿಸಿದ ಆರೋಪ ಹೊತ್ತಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಪ್ರತಿದಾಳಿ ಆರಂಭಿಸಿದೆ. ಚೀನಾದ ಸಂಸ್ಥೆಗಳಿಂದ ದೇಣಿಗೆಗಳು ಪಿಎಂ ಕೇರ್ಸ್ ನಿಧಿಯಲ್ಲೂ ಸುರಿಯಲ್ಪಟ್ಟಿದೆ, ಪ್ರಧಾನಿ ನರೇಂದ್ರ ಮೋದಿಯವರು ಚೀನಾದ ಬಗ್ಗೆ ಮೃದುಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದೆ.

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಕಾಂಗ್ರೆಸ್ ಏಳು ಪ್ರಶ್ನೆಗಳನ್ನು ಕೇಳಿದೆ.

“ವಿವಾದಾತ್ಮಕ ಕಂಪನಿಯಾದ ಹುವಾವೇಯಿಂದ ಪ್ರಧಾನಿ 7 ಕೋಟಿ ರೂಗಳನ್ನು ಪಡೆದಿದ್ದಾರೆಯೇ? ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಜೊತೆ ಹುವಾವೇಗೆ ನೇರ ಸಂಪರ್ಕವಿದೆಯೇ? ಟಿಕ್ ಟಾಕ್‌ ಎಂಬ ಚೀನೀ ಕಂಪನಿಯು ವಿವಾದಾತ್ಮಕ ಪಿಎಂ ಕೇರ್ಸ್ ಫಂಡ್‌ಗೆ 30 ಕೋಟಿ ರೂ. ದೇಣಿಗೆ ನೀಡಿದೆ. 38% ಚೀನೀ ಮಾಲೀಕತ್ವವನ್ನು ಹೊಂದಿರುವ ಪೇಟಿಯಂ ಪಿಎಂ ಕೇರ್ಸ್‌ ನಿಧಿಗೆ 100 ಕೋಟಿ ನೀಡಿದೆ? ಚೀನಾದ ಕಂಪನಿಯಾದ XIAOMI ವಿವಾದಾತ್ಮಕ ನಿಧಿಗೆ 15 ಕೋಟಿ ರೂ. ನೀಡಿದೆ? ಚೀನಾದ ಕಂಪನಿ ಒಪ್ಪೋ ಈ ವಿವಾದಾತ್ಮಕ ನಿಧಿಗೆ 1 ಕೋಟಿ ರೂ. ನೀಡಿದೆ ಅಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಶಿಯೋಮಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ಮತ್ತು ರಾಜ್ಯಗಳಾದ್ಯಂತ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಪರಿಹಾರ ಪರಿಹಾರ ನಿಧಿಗೆ ಒಟ್ಟಾರೆಯಾಗಿ 1 ಕೋಟಿ ರೂ. ಕೊಡುಗೆ ನೀಡುತ್ತಿದೆ ಎಂದು ಒಪ್ಪೋ ಹೇಳಿದರು. ಒನ್‌ಪ್ಲಸ್ ಸಹ 1 ಕೋಟಿ ರೂ ದೇಣಿಗೆ ನೀಡುವುದಾಗಿ ಘೋಷಿಸಿದೆ.

ಪಿಎಂ ಕೇರ್ಸ್ ನಿಧಿಯನ್ನು ಪ್ರಧಾನಮಂತ್ರಿಯ “ತೋರಿಕೆಯ ವೈಯಕ್ತಿಕ” ನಿಧಿಯಂತೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದು ಯಾವುದೇ ಸಾರ್ವಜನಿಕ ಪ್ರಾಧಿಕಾರ ಅಥವಾ ಮಾಹಿತಿ ಹಕ್ಕು ಕಾಯ್ದೆಯಿಂದ ಲೆಕ್ಕಪರಿಶೋಧನೆಗೆ ಒಳಪಡುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

“ಒಟ್ಟಾರೆಯಾಗಿ ಈ ನಿಧಿಯನ್ನು ಕೇವಲ ಪ್ರಧಾನಮಂತ್ರಿಯು ಶೂನ್ಯ ಪಾರದರ್ಶಕತೆ ಮತ್ತು ಶೂನ್ಯ ಹೊಣೆಗಾರಿಕೆಯೊಂದಿಗೆ ಅಪಾರದರ್ಶಕ ಮತ್ತು ರಹಸ್ಯ ಶೈಲಿಯಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.


ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...