HomeಮುಖಪುಟPM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಚೀನಾ ದೇಶವು ಭಾರತ ಭೂಪ್ರದೇಶ ವಶಪಡಿಸಿಕೊಳ್ಳುತ್ತಿರುವಾಗಲೂ ಪ್ರಧಾನಿಗಳು ಚೀನಾದ ಕಂಪನಿಗಳಿಂದ ನೂರಾರು ಕೋಟಿ ದೇಣಿಗೆ ಸ್ವೀಕರಿಸುವುದು ಸರಿಯೇ ಎಂದು ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕಾಪ್ರಹಾರ ನಡೆಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಗ್ವಿ “2020 ರ ಮೇ 20 ರ ವೇಳೆಗೆ ಪಿಎಂ ಮೋದಿಯವರು ವಿವಾದಾತ್ಮಕ PM CARES ನಿಧಿಯ ಮೂಲಕ 9,678 ಕೋಟಿ ರೂ. ಪಡೆದಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಆಘಾತಕಾರಿ ಅಂಶವೆಂದರೆ ಚೀನಾದ ಪಡೆಗಳು ನಮ್ಮ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿದ್ದರೂ, ಪ್ರಧಾನ ಮಂತ್ರಿಗಳು ಚೀನೀ ಕಂಪನಿಗಳಿಂದ ಹಣ ಸ್ವೀಕರಿಸಿದ್ದಾರೆ” ಎಂದು ದೂರಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್‌ಗಾಗಿ ಚೀನಾದ ಹಣವನ್ನು ಸ್ವೀಕರಿಸಿದ ಆರೋಪ ಹೊತ್ತಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಪ್ರತಿದಾಳಿ ಆರಂಭಿಸಿದೆ. ಚೀನಾದ ಸಂಸ್ಥೆಗಳಿಂದ ದೇಣಿಗೆಗಳು ಪಿಎಂ ಕೇರ್ಸ್ ನಿಧಿಯಲ್ಲೂ ಸುರಿಯಲ್ಪಟ್ಟಿದೆ, ಪ್ರಧಾನಿ ನರೇಂದ್ರ ಮೋದಿಯವರು ಚೀನಾದ ಬಗ್ಗೆ ಮೃದುಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದೆ.

ಶಿಯೋಮಿ, ಒಪ್ಪೊ ಮತ್ತು ಹುವಾವೇ ಸೇರಿದಂತೆ ಪ್ರಸಿದ್ಧ ಚೀನಾದ ಸಂಸ್ಥೆಗಳಿಂದ ನೂರಾರು ಕೋಟಿಗಳನ್ನು ಪಿಎಂ ಕೇರ್ಸ್‌ ದೇಣಿಗೆಯಾಗಿ ಪಡೆದಿದೆ. ಇದು ಹೆಚ್ಚು ಚಿಂತಾಜನಕವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಆತಂಕಕಾರಿ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಕಾಂಗ್ರೆಸ್ ಏಳು ಪ್ರಶ್ನೆಗಳನ್ನು ಕೇಳಿದೆ.

“ವಿವಾದಾತ್ಮಕ ಕಂಪನಿಯಾದ ಹುವಾವೇಯಿಂದ ಪ್ರಧಾನಿ 7 ಕೋಟಿ ರೂಗಳನ್ನು ಪಡೆದಿದ್ದಾರೆಯೇ? ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಜೊತೆ ಹುವಾವೇಗೆ ನೇರ ಸಂಪರ್ಕವಿದೆಯೇ? ಟಿಕ್ ಟಾಕ್‌ ಎಂಬ ಚೀನೀ ಕಂಪನಿಯು ವಿವಾದಾತ್ಮಕ ಪಿಎಂ ಕೇರ್ಸ್ ಫಂಡ್‌ಗೆ 30 ಕೋಟಿ ರೂ. ದೇಣಿಗೆ ನೀಡಿದೆ. 38% ಚೀನೀ ಮಾಲೀಕತ್ವವನ್ನು ಹೊಂದಿರುವ ಪೇಟಿಯಂ ಪಿಎಂ ಕೇರ್ಸ್‌ ನಿಧಿಗೆ 100 ಕೋಟಿ ನೀಡಿದೆ? ಚೀನಾದ ಕಂಪನಿಯಾದ XIAOMI ವಿವಾದಾತ್ಮಕ ನಿಧಿಗೆ 15 ಕೋಟಿ ರೂ. ನೀಡಿದೆ? ಚೀನಾದ ಕಂಪನಿ ಒಪ್ಪೋ ಈ ವಿವಾದಾತ್ಮಕ ನಿಧಿಗೆ 1 ಕೋಟಿ ರೂ. ನೀಡಿದೆ ಅಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇತ್ತೀಚಿನ ಹೇಳಿಕೆಯಲ್ಲಿ, ಶಿಯೋಮಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ಮತ್ತು ರಾಜ್ಯಗಳಾದ್ಯಂತ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಪರಿಹಾರ ಪರಿಹಾರ ನಿಧಿಗೆ ಒಟ್ಟಾರೆಯಾಗಿ 1 ಕೋಟಿ ರೂ. ಕೊಡುಗೆ ನೀಡುತ್ತಿದೆ ಎಂದು ಒಪ್ಪೋ ಹೇಳಿದರು. ಒನ್‌ಪ್ಲಸ್ ಸಹ 1 ಕೋಟಿ ರೂ ದೇಣಿಗೆ ನೀಡುವುದಾಗಿ ಘೋಷಿಸಿದೆ.

ಪಿಎಂ ಕೇರ್ಸ್ ನಿಧಿಯನ್ನು ಪ್ರಧಾನಮಂತ್ರಿಯ “ತೋರಿಕೆಯ ವೈಯಕ್ತಿಕ” ನಿಧಿಯಂತೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದು ಯಾವುದೇ ಸಾರ್ವಜನಿಕ ಪ್ರಾಧಿಕಾರ ಅಥವಾ ಮಾಹಿತಿ ಹಕ್ಕು ಕಾಯ್ದೆಯಿಂದ ಲೆಕ್ಕಪರಿಶೋಧನೆಗೆ ಒಳಪಡುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

“ಒಟ್ಟಾರೆಯಾಗಿ ಈ ನಿಧಿಯನ್ನು ಕೇವಲ ಪ್ರಧಾನಮಂತ್ರಿಯು ಶೂನ್ಯ ಪಾರದರ್ಶಕತೆ ಮತ್ತು ಶೂನ್ಯ ಹೊಣೆಗಾರಿಕೆಯೊಂದಿಗೆ ಅಪಾರದರ್ಶಕ ಮತ್ತು ರಹಸ್ಯ ಶೈಲಿಯಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.


ಬಿಜೆಪಿಗೂ ಚೀನಾ ಕಮ್ಯುನಿಸ್ಟ್ ಪಕ್ಷಕ್ಕೂ ಸಂಬಂಧವೇನು? : ಕಾಂಗ್ರೆಸ್‌ನಿಂದ ಹತ್ತು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...