Homeಮುಖಪುಟನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌ ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

- Advertisement -
- Advertisement -

ಹೆಲಿಕಾಪ್ಟರ್‌ನಿಂದ ದುಡ್ಡು ಸುರಿಯುತ್ತಾರಾ ಮೋದಿ ಎಂಬ ಸುಳ್ಳು ಸುದ್ದಿ ಪ್ರಕಟಿಸಿದ ಕನ್ನಡದ ಪಬ್ಲಿಕ್‌ಟಿವಿಗೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ ನೀಡಿದೆ.

ಈ ಕುರಿತು ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ರವರಿಗೆ ಅಡಿಷನಲ್‌ ಡೈರೆಕ್ಟರ್‌ ಜನರಲ್‌ ಎಂ.ನಾಗೇಂದ್ರ ಸ್ವಾಮಿಯವರು ನೋಟಿಸ್‌ ನೀಡಿದ್ದು ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ಕೂಡಲೇ ನಿಲ್ಲಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್‌ 15ರ ಬುಧವಾರ ರಾತ್ರಿ 8:30ರ ಸಮಯದಲ್ಲಿ ಪಬ್ಲಿಕ್‌ ಟಿವಿಯಲ್ಲಿ “ಕೊರೊನಾ ಎಫೆಕ್ಟ್‌:ಹೆಲಿಕ್ಯಾಪ್ಟರ್‌ನಲ್ಲಿ ದುಡ್ಡು ಸುರೀತಾರಾ ಮೋದಿ!?, ಜನರಿಗೆ ಬಂಪರ್‌ ಗಿಫ್ಟ್‌ ಆಕಾಶದಿಂದ ಬೀಳಲಿದ್ಯಾ ಕಂತೆ ಕಂತೆ ನೋಟು, ಏನಿದು ಹೆಲಿಕ್ಯಾಪ್ಟರ್‌ ಮೋದಿ ಪ್ಲಾನ್‌? ಮೋದಿ ಬಳಿ ಸೂಪರ್‌ ಐಡಿಯಾ!, ಬಡ್ಡಿ ಇಲ್ಲ.. ಸಾಲ ಅಲ್ಲ.. ಹೆಲಿಕಾಪ್ಟರ್‌ನಿಂದ ಪ್ರತಿ ಊರಿಗೂ ದುಡ್ಡು ಎಂಬುದಾಗಿ ಪ್ರಸಾರ ಮಾಡಿತ್ತು.

ಎಲ್ರೂ ಆಯ್ಕಳಿ, ಎಷ್ಟು ಬೇಕೋ ಅಷ್ಟು.

Posted by Dinesh Kumar Dinoo on Wednesday, April 15, 2020

ಈ ಸುದ್ದಿಯು ಸುಳ್ಳು ಸುದ್ದಿಯಾಗಿದ್ದು, ಜನರನ್ನು ತಪ್ಪು ದಾರಿಗೆಳೆಯಲಿದೆ ಮಾತ್ರವಲ್ಲದೇ ಉದ್ದೇಶಪೂರ್ವಕವಾದ, ಕುಚೇಷ್ಟೆಯ ಮತ್ತು ಸ್ಪಷ್ಟವಾದ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ ಮತ್ತು ಸಂಕೇತಗಳ ಉಲ್ಲಂಘನೆಯಾಗಿದೆ ಎಂದು ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ನಲ್ಲಿ ತಿಳಿಸಿದೆ.

ಇಡೀ ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ನಿಮ್ಮ ಚಾನೆಲ್‌ ಜಾಗೃತಿ ಮೂಡಿಸುವುದನ್ನು ಬಿಟ್ಟು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಜನರಲ್ಲಿ ಭೀತಿ ಉಂಟುಮಾಡುತ್ತಿದ್ದು ಸಾಮಾಜಿಕ ಅಶಾಂತಿಗೆ ಕಾರಣವಾಗಿದ್ದೀರಿ ಎಂದು ಪಬ್ಲಿಕ್‌ ಟಿವಿಗೆ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ಛೀಮಾರಿ ಹಾಕಿದೆ.

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995ರ ಹಲವು ನಿಯಮಗಳನ್ನು ಉಲ್ಲಂಘಿಸಿದಕ್ಕಾಗಿ ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬಾರದು ಎಂದು ಪಿಐಬಿ ಕೇಳಿದ್ದು ಈ ನೋಟಿಸ್‌ಗೆ 10 ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿದೆ.

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

ಈ ಹಿಂದೆ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣ ಘೋಷಿಸಿದ ಸಂದರ್ಭದಲ್ಲಿ ಇದೇ ಪಬ್ಲಿಕ್‌ ಟಿವಿಯು ಮೋದಿಯವರನ್ನು ಹೊಗಳುವ ಭರದಲ್ಲಿ 2000 ರೂ ನೋಟಿನಲ್ಲಿ ನ್ಯಾನೋ ಜಿಪಿಎಸ್‌ ಚಿಪ್ಪು ಇದೆ ಎಂದು ಸ್ವತಃ ಎಚ್‌.ಆರ್‌.ರಂಗನಾಥ್‌ ಪದೇ ಪದೇ ಹೇಳಿದ್ದರು. ತದನಂತರ ಅದು ಸುಳ್ಳೆಂದು ಸಾಬೀತಾಗಿ ರಂಗನಾಥ್‌ ಬಹಳ ಲೇವಡಿಗೊಳಗಾಗಿದ್ದನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬಹುದಾಗಿದೆ.


ಇದನ್ನೂ ಓದಿ: ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹುಚ್ಚರ ಸಂತೆ …ಮಾದ್ಯಮ ಮಾನಸಿಕ ಕಾಯಿಲೆ …
    ಬಾಯಿ ಬಡುಕರು..ಮಾನ ಮರ್ಯಾದೆ …ಸುಳ್ಳುಗಾರಿಕೆ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...