Homeಮುಖಪುಟನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌ ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

- Advertisement -
- Advertisement -

ಹೆಲಿಕಾಪ್ಟರ್‌ನಿಂದ ದುಡ್ಡು ಸುರಿಯುತ್ತಾರಾ ಮೋದಿ ಎಂಬ ಸುಳ್ಳು ಸುದ್ದಿ ಪ್ರಕಟಿಸಿದ ಕನ್ನಡದ ಪಬ್ಲಿಕ್‌ಟಿವಿಗೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ ನೀಡಿದೆ.

ಈ ಕುರಿತು ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ರವರಿಗೆ ಅಡಿಷನಲ್‌ ಡೈರೆಕ್ಟರ್‌ ಜನರಲ್‌ ಎಂ.ನಾಗೇಂದ್ರ ಸ್ವಾಮಿಯವರು ನೋಟಿಸ್‌ ನೀಡಿದ್ದು ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ಕೂಡಲೇ ನಿಲ್ಲಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್‌ 15ರ ಬುಧವಾರ ರಾತ್ರಿ 8:30ರ ಸಮಯದಲ್ಲಿ ಪಬ್ಲಿಕ್‌ ಟಿವಿಯಲ್ಲಿ “ಕೊರೊನಾ ಎಫೆಕ್ಟ್‌:ಹೆಲಿಕ್ಯಾಪ್ಟರ್‌ನಲ್ಲಿ ದುಡ್ಡು ಸುರೀತಾರಾ ಮೋದಿ!?, ಜನರಿಗೆ ಬಂಪರ್‌ ಗಿಫ್ಟ್‌ ಆಕಾಶದಿಂದ ಬೀಳಲಿದ್ಯಾ ಕಂತೆ ಕಂತೆ ನೋಟು, ಏನಿದು ಹೆಲಿಕ್ಯಾಪ್ಟರ್‌ ಮೋದಿ ಪ್ಲಾನ್‌? ಮೋದಿ ಬಳಿ ಸೂಪರ್‌ ಐಡಿಯಾ!, ಬಡ್ಡಿ ಇಲ್ಲ.. ಸಾಲ ಅಲ್ಲ.. ಹೆಲಿಕಾಪ್ಟರ್‌ನಿಂದ ಪ್ರತಿ ಊರಿಗೂ ದುಡ್ಡು ಎಂಬುದಾಗಿ ಪ್ರಸಾರ ಮಾಡಿತ್ತು.

ಎಲ್ರೂ ಆಯ್ಕಳಿ, ಎಷ್ಟು ಬೇಕೋ ಅಷ್ಟು.

Posted by Dinesh Kumar Dinoo on Wednesday, April 15, 2020

ಈ ಸುದ್ದಿಯು ಸುಳ್ಳು ಸುದ್ದಿಯಾಗಿದ್ದು, ಜನರನ್ನು ತಪ್ಪು ದಾರಿಗೆಳೆಯಲಿದೆ ಮಾತ್ರವಲ್ಲದೇ ಉದ್ದೇಶಪೂರ್ವಕವಾದ, ಕುಚೇಷ್ಟೆಯ ಮತ್ತು ಸ್ಪಷ್ಟವಾದ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ ಮತ್ತು ಸಂಕೇತಗಳ ಉಲ್ಲಂಘನೆಯಾಗಿದೆ ಎಂದು ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ನಲ್ಲಿ ತಿಳಿಸಿದೆ.

ಇಡೀ ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ನಿಮ್ಮ ಚಾನೆಲ್‌ ಜಾಗೃತಿ ಮೂಡಿಸುವುದನ್ನು ಬಿಟ್ಟು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಜನರಲ್ಲಿ ಭೀತಿ ಉಂಟುಮಾಡುತ್ತಿದ್ದು ಸಾಮಾಜಿಕ ಅಶಾಂತಿಗೆ ಕಾರಣವಾಗಿದ್ದೀರಿ ಎಂದು ಪಬ್ಲಿಕ್‌ ಟಿವಿಗೆ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ಛೀಮಾರಿ ಹಾಕಿದೆ.

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995ರ ಹಲವು ನಿಯಮಗಳನ್ನು ಉಲ್ಲಂಘಿಸಿದಕ್ಕಾಗಿ ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬಾರದು ಎಂದು ಪಿಐಬಿ ಕೇಳಿದ್ದು ಈ ನೋಟಿಸ್‌ಗೆ 10 ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿದೆ.

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

ಈ ಹಿಂದೆ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣ ಘೋಷಿಸಿದ ಸಂದರ್ಭದಲ್ಲಿ ಇದೇ ಪಬ್ಲಿಕ್‌ ಟಿವಿಯು ಮೋದಿಯವರನ್ನು ಹೊಗಳುವ ಭರದಲ್ಲಿ 2000 ರೂ ನೋಟಿನಲ್ಲಿ ನ್ಯಾನೋ ಜಿಪಿಎಸ್‌ ಚಿಪ್ಪು ಇದೆ ಎಂದು ಸ್ವತಃ ಎಚ್‌.ಆರ್‌.ರಂಗನಾಥ್‌ ಪದೇ ಪದೇ ಹೇಳಿದ್ದರು. ತದನಂತರ ಅದು ಸುಳ್ಳೆಂದು ಸಾಬೀತಾಗಿ ರಂಗನಾಥ್‌ ಬಹಳ ಲೇವಡಿಗೊಳಗಾಗಿದ್ದನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬಹುದಾಗಿದೆ.


ಇದನ್ನೂ ಓದಿ: ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹುಚ್ಚರ ಸಂತೆ …ಮಾದ್ಯಮ ಮಾನಸಿಕ ಕಾಯಿಲೆ …
    ಬಾಯಿ ಬಡುಕರು..ಮಾನ ಮರ್ಯಾದೆ …ಸುಳ್ಳುಗಾರಿಕೆ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...