Homeಮುಖಪುಟನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌ ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

- Advertisement -
- Advertisement -

ಹೆಲಿಕಾಪ್ಟರ್‌ನಿಂದ ದುಡ್ಡು ಸುರಿಯುತ್ತಾರಾ ಮೋದಿ ಎಂಬ ಸುಳ್ಳು ಸುದ್ದಿ ಪ್ರಕಟಿಸಿದ ಕನ್ನಡದ ಪಬ್ಲಿಕ್‌ಟಿವಿಗೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ ನೀಡಿದೆ.

ಈ ಕುರಿತು ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ರವರಿಗೆ ಅಡಿಷನಲ್‌ ಡೈರೆಕ್ಟರ್‌ ಜನರಲ್‌ ಎಂ.ನಾಗೇಂದ್ರ ಸ್ವಾಮಿಯವರು ನೋಟಿಸ್‌ ನೀಡಿದ್ದು ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ಕೂಡಲೇ ನಿಲ್ಲಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್‌ 15ರ ಬುಧವಾರ ರಾತ್ರಿ 8:30ರ ಸಮಯದಲ್ಲಿ ಪಬ್ಲಿಕ್‌ ಟಿವಿಯಲ್ಲಿ “ಕೊರೊನಾ ಎಫೆಕ್ಟ್‌:ಹೆಲಿಕ್ಯಾಪ್ಟರ್‌ನಲ್ಲಿ ದುಡ್ಡು ಸುರೀತಾರಾ ಮೋದಿ!?, ಜನರಿಗೆ ಬಂಪರ್‌ ಗಿಫ್ಟ್‌ ಆಕಾಶದಿಂದ ಬೀಳಲಿದ್ಯಾ ಕಂತೆ ಕಂತೆ ನೋಟು, ಏನಿದು ಹೆಲಿಕ್ಯಾಪ್ಟರ್‌ ಮೋದಿ ಪ್ಲಾನ್‌? ಮೋದಿ ಬಳಿ ಸೂಪರ್‌ ಐಡಿಯಾ!, ಬಡ್ಡಿ ಇಲ್ಲ.. ಸಾಲ ಅಲ್ಲ.. ಹೆಲಿಕಾಪ್ಟರ್‌ನಿಂದ ಪ್ರತಿ ಊರಿಗೂ ದುಡ್ಡು ಎಂಬುದಾಗಿ ಪ್ರಸಾರ ಮಾಡಿತ್ತು.

ಎಲ್ರೂ ಆಯ್ಕಳಿ, ಎಷ್ಟು ಬೇಕೋ ಅಷ್ಟು.

Posted by Dinesh Kumar Dinoo on Wednesday, April 15, 2020

ಈ ಸುದ್ದಿಯು ಸುಳ್ಳು ಸುದ್ದಿಯಾಗಿದ್ದು, ಜನರನ್ನು ತಪ್ಪು ದಾರಿಗೆಳೆಯಲಿದೆ ಮಾತ್ರವಲ್ಲದೇ ಉದ್ದೇಶಪೂರ್ವಕವಾದ, ಕುಚೇಷ್ಟೆಯ ಮತ್ತು ಸ್ಪಷ್ಟವಾದ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ ಮತ್ತು ಸಂಕೇತಗಳ ಉಲ್ಲಂಘನೆಯಾಗಿದೆ ಎಂದು ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ನಲ್ಲಿ ತಿಳಿಸಿದೆ.

ಇಡೀ ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ನಿಮ್ಮ ಚಾನೆಲ್‌ ಜಾಗೃತಿ ಮೂಡಿಸುವುದನ್ನು ಬಿಟ್ಟು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಜನರಲ್ಲಿ ಭೀತಿ ಉಂಟುಮಾಡುತ್ತಿದ್ದು ಸಾಮಾಜಿಕ ಅಶಾಂತಿಗೆ ಕಾರಣವಾಗಿದ್ದೀರಿ ಎಂದು ಪಬ್ಲಿಕ್‌ ಟಿವಿಗೆ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ಛೀಮಾರಿ ಹಾಕಿದೆ.

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995ರ ಹಲವು ನಿಯಮಗಳನ್ನು ಉಲ್ಲಂಘಿಸಿದಕ್ಕಾಗಿ ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬಾರದು ಎಂದು ಪಿಐಬಿ ಕೇಳಿದ್ದು ಈ ನೋಟಿಸ್‌ಗೆ 10 ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿದೆ.

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

ಈ ಹಿಂದೆ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣ ಘೋಷಿಸಿದ ಸಂದರ್ಭದಲ್ಲಿ ಇದೇ ಪಬ್ಲಿಕ್‌ ಟಿವಿಯು ಮೋದಿಯವರನ್ನು ಹೊಗಳುವ ಭರದಲ್ಲಿ 2000 ರೂ ನೋಟಿನಲ್ಲಿ ನ್ಯಾನೋ ಜಿಪಿಎಸ್‌ ಚಿಪ್ಪು ಇದೆ ಎಂದು ಸ್ವತಃ ಎಚ್‌.ಆರ್‌.ರಂಗನಾಥ್‌ ಪದೇ ಪದೇ ಹೇಳಿದ್ದರು. ತದನಂತರ ಅದು ಸುಳ್ಳೆಂದು ಸಾಬೀತಾಗಿ ರಂಗನಾಥ್‌ ಬಹಳ ಲೇವಡಿಗೊಳಗಾಗಿದ್ದನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬಹುದಾಗಿದೆ.


ಇದನ್ನೂ ಓದಿ: ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹುಚ್ಚರ ಸಂತೆ …ಮಾದ್ಯಮ ಮಾನಸಿಕ ಕಾಯಿಲೆ …
    ಬಾಯಿ ಬಡುಕರು..ಮಾನ ಮರ್ಯಾದೆ …ಸುಳ್ಳುಗಾರಿಕೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...