Homeಮುಖಪುಟನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌ ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

- Advertisement -
- Advertisement -

ಹೆಲಿಕಾಪ್ಟರ್‌ನಿಂದ ದುಡ್ಡು ಸುರಿಯುತ್ತಾರಾ ಮೋದಿ ಎಂಬ ಸುಳ್ಳು ಸುದ್ದಿ ಪ್ರಕಟಿಸಿದ ಕನ್ನಡದ ಪಬ್ಲಿಕ್‌ಟಿವಿಗೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ ನೀಡಿದೆ.

ಈ ಕುರಿತು ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ರವರಿಗೆ ಅಡಿಷನಲ್‌ ಡೈರೆಕ್ಟರ್‌ ಜನರಲ್‌ ಎಂ.ನಾಗೇಂದ್ರ ಸ್ವಾಮಿಯವರು ನೋಟಿಸ್‌ ನೀಡಿದ್ದು ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ಕೂಡಲೇ ನಿಲ್ಲಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್‌ 15ರ ಬುಧವಾರ ರಾತ್ರಿ 8:30ರ ಸಮಯದಲ್ಲಿ ಪಬ್ಲಿಕ್‌ ಟಿವಿಯಲ್ಲಿ “ಕೊರೊನಾ ಎಫೆಕ್ಟ್‌:ಹೆಲಿಕ್ಯಾಪ್ಟರ್‌ನಲ್ಲಿ ದುಡ್ಡು ಸುರೀತಾರಾ ಮೋದಿ!?, ಜನರಿಗೆ ಬಂಪರ್‌ ಗಿಫ್ಟ್‌ ಆಕಾಶದಿಂದ ಬೀಳಲಿದ್ಯಾ ಕಂತೆ ಕಂತೆ ನೋಟು, ಏನಿದು ಹೆಲಿಕ್ಯಾಪ್ಟರ್‌ ಮೋದಿ ಪ್ಲಾನ್‌? ಮೋದಿ ಬಳಿ ಸೂಪರ್‌ ಐಡಿಯಾ!, ಬಡ್ಡಿ ಇಲ್ಲ.. ಸಾಲ ಅಲ್ಲ.. ಹೆಲಿಕಾಪ್ಟರ್‌ನಿಂದ ಪ್ರತಿ ಊರಿಗೂ ದುಡ್ಡು ಎಂಬುದಾಗಿ ಪ್ರಸಾರ ಮಾಡಿತ್ತು.

ಎಲ್ರೂ ಆಯ್ಕಳಿ, ಎಷ್ಟು ಬೇಕೋ ಅಷ್ಟು.

Posted by Dinesh Kumar Dinoo on Wednesday, April 15, 2020

ಈ ಸುದ್ದಿಯು ಸುಳ್ಳು ಸುದ್ದಿಯಾಗಿದ್ದು, ಜನರನ್ನು ತಪ್ಪು ದಾರಿಗೆಳೆಯಲಿದೆ ಮಾತ್ರವಲ್ಲದೇ ಉದ್ದೇಶಪೂರ್ವಕವಾದ, ಕುಚೇಷ್ಟೆಯ ಮತ್ತು ಸ್ಪಷ್ಟವಾದ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ ಮತ್ತು ಸಂಕೇತಗಳ ಉಲ್ಲಂಘನೆಯಾಗಿದೆ ಎಂದು ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ನಲ್ಲಿ ತಿಳಿಸಿದೆ.

ಇಡೀ ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ನಿಮ್ಮ ಚಾನೆಲ್‌ ಜಾಗೃತಿ ಮೂಡಿಸುವುದನ್ನು ಬಿಟ್ಟು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಜನರಲ್ಲಿ ಭೀತಿ ಉಂಟುಮಾಡುತ್ತಿದ್ದು ಸಾಮಾಜಿಕ ಅಶಾಂತಿಗೆ ಕಾರಣವಾಗಿದ್ದೀರಿ ಎಂದು ಪಬ್ಲಿಕ್‌ ಟಿವಿಗೆ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ಛೀಮಾರಿ ಹಾಕಿದೆ.

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995ರ ಹಲವು ನಿಯಮಗಳನ್ನು ಉಲ್ಲಂಘಿಸಿದಕ್ಕಾಗಿ ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬಾರದು ಎಂದು ಪಿಐಬಿ ಕೇಳಿದ್ದು ಈ ನೋಟಿಸ್‌ಗೆ 10 ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿದೆ.

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

ಈ ಹಿಂದೆ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣ ಘೋಷಿಸಿದ ಸಂದರ್ಭದಲ್ಲಿ ಇದೇ ಪಬ್ಲಿಕ್‌ ಟಿವಿಯು ಮೋದಿಯವರನ್ನು ಹೊಗಳುವ ಭರದಲ್ಲಿ 2000 ರೂ ನೋಟಿನಲ್ಲಿ ನ್ಯಾನೋ ಜಿಪಿಎಸ್‌ ಚಿಪ್ಪು ಇದೆ ಎಂದು ಸ್ವತಃ ಎಚ್‌.ಆರ್‌.ರಂಗನಾಥ್‌ ಪದೇ ಪದೇ ಹೇಳಿದ್ದರು. ತದನಂತರ ಅದು ಸುಳ್ಳೆಂದು ಸಾಬೀತಾಗಿ ರಂಗನಾಥ್‌ ಬಹಳ ಲೇವಡಿಗೊಳಗಾಗಿದ್ದನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬಹುದಾಗಿದೆ.


ಇದನ್ನೂ ಓದಿ: ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹುಚ್ಚರ ಸಂತೆ …ಮಾದ್ಯಮ ಮಾನಸಿಕ ಕಾಯಿಲೆ …
    ಬಾಯಿ ಬಡುಕರು..ಮಾನ ಮರ್ಯಾದೆ …ಸುಳ್ಳುಗಾರಿಕೆ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...