Homeಮುಖಪುಟನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌ ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

- Advertisement -
- Advertisement -

ಹೆಲಿಕಾಪ್ಟರ್‌ನಿಂದ ದುಡ್ಡು ಸುರಿಯುತ್ತಾರಾ ಮೋದಿ ಎಂಬ ಸುಳ್ಳು ಸುದ್ದಿ ಪ್ರಕಟಿಸಿದ ಕನ್ನಡದ ಪಬ್ಲಿಕ್‌ಟಿವಿಗೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ ನೀಡಿದೆ.

ಈ ಕುರಿತು ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ರವರಿಗೆ ಅಡಿಷನಲ್‌ ಡೈರೆಕ್ಟರ್‌ ಜನರಲ್‌ ಎಂ.ನಾಗೇಂದ್ರ ಸ್ವಾಮಿಯವರು ನೋಟಿಸ್‌ ನೀಡಿದ್ದು ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ಕೂಡಲೇ ನಿಲ್ಲಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್‌ 15ರ ಬುಧವಾರ ರಾತ್ರಿ 8:30ರ ಸಮಯದಲ್ಲಿ ಪಬ್ಲಿಕ್‌ ಟಿವಿಯಲ್ಲಿ “ಕೊರೊನಾ ಎಫೆಕ್ಟ್‌:ಹೆಲಿಕ್ಯಾಪ್ಟರ್‌ನಲ್ಲಿ ದುಡ್ಡು ಸುರೀತಾರಾ ಮೋದಿ!?, ಜನರಿಗೆ ಬಂಪರ್‌ ಗಿಫ್ಟ್‌ ಆಕಾಶದಿಂದ ಬೀಳಲಿದ್ಯಾ ಕಂತೆ ಕಂತೆ ನೋಟು, ಏನಿದು ಹೆಲಿಕ್ಯಾಪ್ಟರ್‌ ಮೋದಿ ಪ್ಲಾನ್‌? ಮೋದಿ ಬಳಿ ಸೂಪರ್‌ ಐಡಿಯಾ!, ಬಡ್ಡಿ ಇಲ್ಲ.. ಸಾಲ ಅಲ್ಲ.. ಹೆಲಿಕಾಪ್ಟರ್‌ನಿಂದ ಪ್ರತಿ ಊರಿಗೂ ದುಡ್ಡು ಎಂಬುದಾಗಿ ಪ್ರಸಾರ ಮಾಡಿತ್ತು.

ಎಲ್ರೂ ಆಯ್ಕಳಿ, ಎಷ್ಟು ಬೇಕೋ ಅಷ್ಟು.

Posted by Dinesh Kumar Dinoo on Wednesday, April 15, 2020

ಈ ಸುದ್ದಿಯು ಸುಳ್ಳು ಸುದ್ದಿಯಾಗಿದ್ದು, ಜನರನ್ನು ತಪ್ಪು ದಾರಿಗೆಳೆಯಲಿದೆ ಮಾತ್ರವಲ್ಲದೇ ಉದ್ದೇಶಪೂರ್ವಕವಾದ, ಕುಚೇಷ್ಟೆಯ ಮತ್ತು ಸ್ಪಷ್ಟವಾದ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ ಮತ್ತು ಸಂಕೇತಗಳ ಉಲ್ಲಂಘನೆಯಾಗಿದೆ ಎಂದು ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ನೋಟಿಸ್‌ನಲ್ಲಿ ತಿಳಿಸಿದೆ.

ಇಡೀ ದೇಶ ಕೊರೊನಾ ವಿರುದ್ಧ ಹೋರಾಡುತ್ತಿರುವಾಗ ನಿಮ್ಮ ಚಾನೆಲ್‌ ಜಾಗೃತಿ ಮೂಡಿಸುವುದನ್ನು ಬಿಟ್ಟು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಜನರಲ್ಲಿ ಭೀತಿ ಉಂಟುಮಾಡುತ್ತಿದ್ದು ಸಾಮಾಜಿಕ ಅಶಾಂತಿಗೆ ಕಾರಣವಾಗಿದ್ದೀರಿ ಎಂದು ಪಬ್ಲಿಕ್‌ ಟಿವಿಗೆ ಪ್ರೆಸ್‌ ಇನ್ಫರ್‌ಮೇಶನ್‌ ಬ್ಯೂರೋ ಛೀಮಾರಿ ಹಾಕಿದೆ.

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995ರ ಹಲವು ನಿಯಮಗಳನ್ನು ಉಲ್ಲಂಘಿಸಿದಕ್ಕಾಗಿ ಏಕೆ ನಿಮ್ಮ ಚಾನೆಲ್‌ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬಾರದು ಎಂದು ಪಿಐಬಿ ಕೇಳಿದ್ದು ಈ ನೋಟಿಸ್‌ಗೆ 10 ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿದೆ.

ಪಬ್ಲಿಕ್‌ ಟಿವಿಯಲ್ಲಿ ಏಪ್ರಿಲ್‌ 15ರ ರಾತ್ರಿ ಆ ಹೆಲಿಕಾಪ್ಟರ್‌ನಲ್ಲಿ ಹಣ ಸುರೀತಾರಾ ಮೋದಿ ಎಂಬ ಸುದ್ದಿ ಪ್ರಸಾರವಾದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ನೂರಾರು ಜನರು ಪಬ್ಲಿಕ್‌ ಟಿವಿ ಮತ್ತು ಅದರ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಛೀಮಾರಿ ಹಾಕಿದ್ದರು.

ಈ ಹಿಂದೆ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣ ಘೋಷಿಸಿದ ಸಂದರ್ಭದಲ್ಲಿ ಇದೇ ಪಬ್ಲಿಕ್‌ ಟಿವಿಯು ಮೋದಿಯವರನ್ನು ಹೊಗಳುವ ಭರದಲ್ಲಿ 2000 ರೂ ನೋಟಿನಲ್ಲಿ ನ್ಯಾನೋ ಜಿಪಿಎಸ್‌ ಚಿಪ್ಪು ಇದೆ ಎಂದು ಸ್ವತಃ ಎಚ್‌.ಆರ್‌.ರಂಗನಾಥ್‌ ಪದೇ ಪದೇ ಹೇಳಿದ್ದರು. ತದನಂತರ ಅದು ಸುಳ್ಳೆಂದು ಸಾಬೀತಾಗಿ ರಂಗನಾಥ್‌ ಬಹಳ ಲೇವಡಿಗೊಳಗಾಗಿದ್ದನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬಹುದಾಗಿದೆ.


ಇದನ್ನೂ ಓದಿ: ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹುಚ್ಚರ ಸಂತೆ …ಮಾದ್ಯಮ ಮಾನಸಿಕ ಕಾಯಿಲೆ …
    ಬಾಯಿ ಬಡುಕರು..ಮಾನ ಮರ್ಯಾದೆ …ಸುಳ್ಳುಗಾರಿಕೆ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...