Homeಮುಖಪುಟಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೀರಿ, ಆದರೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನಿಮ್ಮದೇ ಪಕ್ಷದ ಸಂಸದರ ಬಗ್ಗೆ ಯಾಕೆ ಮಾತನಾಡಲ್ಲ? ಎಂದು ಸ್ಮೃತಿ ಇರಾನಿ ಅವರಿಗೆ ಟಿಎಂ ಸಿ ಸಂಸೆದೆ ಮಹುವಾ ಮೊಯಿತ್ರಾ ಪ್ರಶ್ನೆ ಮಾಡಿದ್ದಾರೆ.

ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಲೋಕಸಭೆಯಲ್ಲಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಈ ನಿರ್ಣಯವು ಸದನದಲ್ಲಿ ಯಶಸ್ವಿಯಾಗಲು ಉದ್ದೇಶಿಸಿಲ್ಲ, ಆದರೆ ಸರ್ಕಾರದ ಮೇಲೆ ಅವಿಶ್ವಾಸಕ್ಕಿಂತ ಹೆಚ್ಚಾಗಿ, ವಿಪಕ್ಷಗಳ INDIA ಮೈತ್ರಿಕೂಟದ ಮೇಲಿನ ವಿಶ್ವಾಸಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಮಣಿಪುರದ ಬಗ್ಗೆ ಮಾತನಾಡಿದ ಅವರು, ಅಲ್ಲಿನ ಪರಿಸ್ಥಿತಿಯು ಇತರ ರಾಜ್ಯಗಳಿಗಿಂತ ಭಿನ್ನವಾಗಿದೆ. ಮಣಿಪುರದಲ್ಲಿ ದ್ವೇಷ ಅಪರಾಧ, ಆಂತರಿಕ ಕಲಹ ನಡೆಯುತ್ತಿದೆ. ಬಹುಪಾಲು ಅವಿಶ್ವಾಸ ನಿರ್ಣಯಗಳು ಸರ್ಕಾರವನ್ನು ಪತನ ಮಾಡಲು ಬಳಸಲಾಗುತ್ತದೆ. ಇಲ್ಲಿ ಆ ಸಾಧ್ಯತೆ ಇಲ್ಲ ಎಂದು ನಮಗೆ ತಿಳಿದಿದೆ. ನಮ್ಮ ಬಳಿ ಸಂಖ್ಯಾಬಲವಿಲ್ಲ. ಆಡಳಿತಾರೂಢ ಪಕ್ಷದಲ್ಲಿರುವ ನನ್ನ ಅನೇಕ ಸ್ನೇಹಿತರು ಮತ್ತು ವೈಎಸ್‌ಆರ್‌ನಂತಹ ಇತರ ಬಿಜೆಪಿ ಮಿತ್ರರು, ಈ ನಿರ್ಣಯವು INDIAದ ಪತನಕ್ಕಾಗಿದೆ ಎಂದು ನಮ್ಮನ್ನು ಲೇವಡಿ ಮಾಡಿದ್ದಾರೆ. ಆದರೆ ನಾವು ಯಾರನ್ನೂ ಕೆಳಗಿಳಿಸುವುದಕ್ಕಾಗಿ ಅಲ್ಲ, ಒಗ್ಗೂಡಿಸುವುದಕ್ಕಾಗಿ ಈ ನಿರ್ಣಯವನ್ನು ತಂದಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಪ್ರಧಾನಿ ಮೋದಿ ಅವರು ಮಣಿಪುರದ ಪರಿಸ್ಥಿತಿಯನ್ನು ಇತರ ರಾಜ್ಯಗಳೊಂದಿಗೆ ಹೋಲಿಸುವು ‘ಸುಳ್ಳು ಹರಡುವಿಕೆ’ಯ ಭಾಗವಾಗಿದೆ ಎಂದ ಸಂಸದೆ ಕಿಡಿಕಾರಿದ್ದಾರೆ.

”ಮಣಿಪುರದಲ್ಲಿ ನಡೆಯುತ್ತಿರುವುದು ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಅಪರಾಧವಾಗಿದೆ. ಅಲ್ಲಿ ಪೊಲೀಸ್ ಸಿಬ್ಬಂದಿ ಒಂದು ಸಮುದಾಯಕ್ಕೆ ಸೇರಿದ್ದಾರೆ. ಮುಖ್ಯಮಂತ್ರಿಯವರ ಅದೇ ಸಮುದಾಯದವರಾಗಿರಬಹುದು ಎಂದೆನಿಸುತ್ತದೆ. ಪೊಲೀಸ್‌ ಸಿಬ್ಬಂದಿ ಇನ್ನೊಂದು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಕ್ಕಾಗಿ ಸಮುದಾಯದ ಜನಸಮೂಹಕ್ಕೆ ಅವರನ್ನು ಒಪ್ಪಿಸಿದರು. ನ್ಯಾಯದ ಬೇಡಿಕೆಯನ್ನು ತಡೆಯುವ ಎಲ್ಲಾ ಪ್ರಯತ್ನಗಳು ಇಲ್ಲಿ ನಡೆದವು” ಎಂದು ಮಣಿಪುರದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವನ್ನು ನೆನಪಿಸಿದ್ದಾರೆ.

”ಕಳೆದ 3 ತಿಂಗಳಲ್ಲಿ 6,500 ಎಫ್‌ಐಆರ್‌ಗಳು ದಾಖಲಾಗಿವೆ ಯಾವ ರಾಜ್ಯದಲ್ಲಿ ಹೀಗಾಗಿದೆ? ಇದು ಡಬಲ್ ಇಂಜಿನ್ ಸರ್ಕಾರದ ದೊಡ್ಡ ವೈಫಲ್ಯ. ರಾಜಸ್ಥಾನದ ಬಗ್ಗೆ, ಛತ್ತೀಸ್‌ಗಢದ ಬಗ್ಗೆ ಏನಂತೀರಿ? ಎಂದು ಕೇಳುವ ಮೂಲಕ ಇತರ ರಾಜ್ಯಗಳನ್ನು ಅವಮಾನಿಸಬಾರದು. ಮಣಿಪುರವು ಮೌನವಾಗಿ ಅನುಮೋದಿಸಲಾದ ದ್ವೇಷದ ಅಪರಾಧವಾಗಿದೆ. ಇದು ಅಂತರ್ಯುದ್ಧ ಎಂದರೆ ತಪ್ಪಾಗಲ್ಲ” ಎಂದು ಮೋದಿ ನೇತೃತ್ವದ ಸರ್ಕಾರವನ್ನು ಮಹುವಾ ಮೊಯಿತ್ರಾ ಟೀಕಿಸಿದ್ದಾರೆ.

”ಪ್ರಧಾನಿ ಮೋದಿಯವರೇ ನೀವು ಇದನ್ನು ಕೇಳುತ್ತಿದ್ದರೆ… ನಾನು ಮಣಿಪುರದ ಜನರ ಪರವಾಗಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಆಡಳಿತವನ್ನು ಬದಲಿಸಿ, ಎಲ್ಲಾ ಪಕ್ಷಗಳು ಕದನ ವಿರಾಮಕ್ಕಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಇಲ್ಲದಿದ್ದರೆ, ನಿಮ್ಮ ಅವಧಿ ಮುಗಿದ ನಂತರವೂ, ಮಣಿಪುರದಲ್ಲಿ ಏನು ತಪ್ಪಾಗಿದೆ ಎಂದು ಭಾರತ ಒಂದೇ ಧ್ವನಿಯಲ್ಲಿ ಪ್ರತಿಧ್ವನಿಸುತ್ತದೆ” ಎಂದು ಮಹುವಾ ಮೊಯಿತ್ರಾ ಹೇಳಿದರು.

”ಭಾರತವು ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಹೊಸ ಸಂಸತ್ತಿನ ಸಭಾಂಗಣದಲ್ಲಿ ಬಹುಮತದ ಧರ್ಮೀಯರಿಗೆ ತಲೆಬಾಗುವ ಮಹಾನ್ ಪ್ರಜಾಪ್ರಭುತ್ವದ ಪ್ರಧಾನಿಯ ನಡೆ ನಾಚಿಕೆಗೇಡು ಪೊಲೀಸ್ ದೌರ್ಜನ್ಯ ಮತ್ತು ಚಾಂಪಿಯನ್ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದು ನಮಗೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯ 3 ಜಿಲ್ಲೆಗಳ 50 ಪಂಚಾಯತ್‌ಗಳು- ಹರ್ಯಾಣದಲ್ಲಿ ಮುಸ್ಲಿಂ ವರ್ತಕರನ್ನು ರಾಜ್ಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಪತ್ರಗಳನ್ನು ಹೊರಡಿಸಿರುವುದು ನಮಗೆ ಅವಮಾನ ತಂದಿದೆ. ದ್ವೇಷದ ಯುದ್ಧದಲ್ಲಿ ಏನೇನಾಯ್ತು ನೋಡಿ, ತರಕಾರಿಗಳು ಹಿಂದೂ ಆದವು, ಆಡು ಮುಸ್ಲಿಂ ಆಯ್ತು ನಾವು ಹಿಂಸೆಗೆ ಒಳಗಾಗುವುದಿಲ್ಲ. ಮಮತಾ ದೀದಿ ಹೆದರಿಲ್ಲ, ಸ್ಟಾಲಿನ್ ಹೆದರಿಲ್ಲ, ಅಖಿಲೇಶ್ ಜಿ ಹೆದರಿಲ್ಲ, ರಾಹುಲ್ ಗಾಂಧಿ ಹೆದರಿಲ್ಲ. ಒಬ್ಬ ಕ್ರೋನಿ ಕ್ಯಾಪಿಟಲಿಸ್ಟ್ ನಾವು ನೋಡುತ್ತಿರುವಾಗಲೇ ಭಾರತದ ನಿಯಂತ್ರಕರು ಮತ್ತು ಇಕ್ವಿಟಿ ಮಾರುಕಟ್ಟೆಗಳಿಂದ ಹಣ ಮಾಡಲು ಹೋಗುವುದಿಲ್ಲ. ಎಲ್ಲರೂ ಕೇಳುತ್ತಾರೆ ಮೋದಿಜಿ ಇಲ್ಲದಿದ್ದರೆ ಯಾರು? ಮಣಿಪುರದ ಬಗ್ಗೆ ಈ ಮೌನದ ನಂತರ ಮೋದಿ ಅಲ್ಲದೆ ಬೇರೆ ಯಾರೂ ಅಲ್ಲ ಎಂದು ಭಾರತ ಹೇಳಬಹುದು ಎಂದರು.

ರಾಹುಲ್ ಮೇಲೆ ಆರೋಪಿಸಿರುವ ‘ಫ್ಲೈಯಿಂಗ್ ಕಿಸ್’ ಪ್ರಕರಣ ಬಗ್ಗೆ ಮಾತನಾಡಿದ ಮಹುವಾ, ”ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಸಂಸದರ ಮೇಲೆ ಆರೋಪ ಬಂದಾಗ ನೀವೇನೂ ಮಾತಾಡಿಲ್ಲ ಯಾಕೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾರೆ.

ಗುರುವಾರ ನಡೆದ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಕೇಂದ್ರ ಸಚಿವ ಆಕ್ರೋಶ ವ್ಯಕ್ತಡಿಸಿದ್ದು, ಬಿಜೆಪಿ ಸಂಸದೆಯರು ಕೂಡ ಕ್ರಮಕ್ಕೆ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...