Homeಮುಖಪುಟಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೀರಿ, ಆದರೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನಿಮ್ಮದೇ ಪಕ್ಷದ ಸಂಸದರ ಬಗ್ಗೆ ಯಾಕೆ ಮಾತನಾಡಲ್ಲ? ಎಂದು ಸ್ಮೃತಿ ಇರಾನಿ ಅವರಿಗೆ ಟಿಎಂ ಸಿ ಸಂಸೆದೆ ಮಹುವಾ ಮೊಯಿತ್ರಾ ಪ್ರಶ್ನೆ ಮಾಡಿದ್ದಾರೆ.

ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಲೋಕಸಭೆಯಲ್ಲಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಈ ನಿರ್ಣಯವು ಸದನದಲ್ಲಿ ಯಶಸ್ವಿಯಾಗಲು ಉದ್ದೇಶಿಸಿಲ್ಲ, ಆದರೆ ಸರ್ಕಾರದ ಮೇಲೆ ಅವಿಶ್ವಾಸಕ್ಕಿಂತ ಹೆಚ್ಚಾಗಿ, ವಿಪಕ್ಷಗಳ INDIA ಮೈತ್ರಿಕೂಟದ ಮೇಲಿನ ವಿಶ್ವಾಸಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಮಣಿಪುರದ ಬಗ್ಗೆ ಮಾತನಾಡಿದ ಅವರು, ಅಲ್ಲಿನ ಪರಿಸ್ಥಿತಿಯು ಇತರ ರಾಜ್ಯಗಳಿಗಿಂತ ಭಿನ್ನವಾಗಿದೆ. ಮಣಿಪುರದಲ್ಲಿ ದ್ವೇಷ ಅಪರಾಧ, ಆಂತರಿಕ ಕಲಹ ನಡೆಯುತ್ತಿದೆ. ಬಹುಪಾಲು ಅವಿಶ್ವಾಸ ನಿರ್ಣಯಗಳು ಸರ್ಕಾರವನ್ನು ಪತನ ಮಾಡಲು ಬಳಸಲಾಗುತ್ತದೆ. ಇಲ್ಲಿ ಆ ಸಾಧ್ಯತೆ ಇಲ್ಲ ಎಂದು ನಮಗೆ ತಿಳಿದಿದೆ. ನಮ್ಮ ಬಳಿ ಸಂಖ್ಯಾಬಲವಿಲ್ಲ. ಆಡಳಿತಾರೂಢ ಪಕ್ಷದಲ್ಲಿರುವ ನನ್ನ ಅನೇಕ ಸ್ನೇಹಿತರು ಮತ್ತು ವೈಎಸ್‌ಆರ್‌ನಂತಹ ಇತರ ಬಿಜೆಪಿ ಮಿತ್ರರು, ಈ ನಿರ್ಣಯವು INDIAದ ಪತನಕ್ಕಾಗಿದೆ ಎಂದು ನಮ್ಮನ್ನು ಲೇವಡಿ ಮಾಡಿದ್ದಾರೆ. ಆದರೆ ನಾವು ಯಾರನ್ನೂ ಕೆಳಗಿಳಿಸುವುದಕ್ಕಾಗಿ ಅಲ್ಲ, ಒಗ್ಗೂಡಿಸುವುದಕ್ಕಾಗಿ ಈ ನಿರ್ಣಯವನ್ನು ತಂದಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಪ್ರಧಾನಿ ಮೋದಿ ಅವರು ಮಣಿಪುರದ ಪರಿಸ್ಥಿತಿಯನ್ನು ಇತರ ರಾಜ್ಯಗಳೊಂದಿಗೆ ಹೋಲಿಸುವು ‘ಸುಳ್ಳು ಹರಡುವಿಕೆ’ಯ ಭಾಗವಾಗಿದೆ ಎಂದ ಸಂಸದೆ ಕಿಡಿಕಾರಿದ್ದಾರೆ.

”ಮಣಿಪುರದಲ್ಲಿ ನಡೆಯುತ್ತಿರುವುದು ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಅಪರಾಧವಾಗಿದೆ. ಅಲ್ಲಿ ಪೊಲೀಸ್ ಸಿಬ್ಬಂದಿ ಒಂದು ಸಮುದಾಯಕ್ಕೆ ಸೇರಿದ್ದಾರೆ. ಮುಖ್ಯಮಂತ್ರಿಯವರ ಅದೇ ಸಮುದಾಯದವರಾಗಿರಬಹುದು ಎಂದೆನಿಸುತ್ತದೆ. ಪೊಲೀಸ್‌ ಸಿಬ್ಬಂದಿ ಇನ್ನೊಂದು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಕ್ಕಾಗಿ ಸಮುದಾಯದ ಜನಸಮೂಹಕ್ಕೆ ಅವರನ್ನು ಒಪ್ಪಿಸಿದರು. ನ್ಯಾಯದ ಬೇಡಿಕೆಯನ್ನು ತಡೆಯುವ ಎಲ್ಲಾ ಪ್ರಯತ್ನಗಳು ಇಲ್ಲಿ ನಡೆದವು” ಎಂದು ಮಣಿಪುರದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವನ್ನು ನೆನಪಿಸಿದ್ದಾರೆ.

”ಕಳೆದ 3 ತಿಂಗಳಲ್ಲಿ 6,500 ಎಫ್‌ಐಆರ್‌ಗಳು ದಾಖಲಾಗಿವೆ ಯಾವ ರಾಜ್ಯದಲ್ಲಿ ಹೀಗಾಗಿದೆ? ಇದು ಡಬಲ್ ಇಂಜಿನ್ ಸರ್ಕಾರದ ದೊಡ್ಡ ವೈಫಲ್ಯ. ರಾಜಸ್ಥಾನದ ಬಗ್ಗೆ, ಛತ್ತೀಸ್‌ಗಢದ ಬಗ್ಗೆ ಏನಂತೀರಿ? ಎಂದು ಕೇಳುವ ಮೂಲಕ ಇತರ ರಾಜ್ಯಗಳನ್ನು ಅವಮಾನಿಸಬಾರದು. ಮಣಿಪುರವು ಮೌನವಾಗಿ ಅನುಮೋದಿಸಲಾದ ದ್ವೇಷದ ಅಪರಾಧವಾಗಿದೆ. ಇದು ಅಂತರ್ಯುದ್ಧ ಎಂದರೆ ತಪ್ಪಾಗಲ್ಲ” ಎಂದು ಮೋದಿ ನೇತೃತ್ವದ ಸರ್ಕಾರವನ್ನು ಮಹುವಾ ಮೊಯಿತ್ರಾ ಟೀಕಿಸಿದ್ದಾರೆ.

”ಪ್ರಧಾನಿ ಮೋದಿಯವರೇ ನೀವು ಇದನ್ನು ಕೇಳುತ್ತಿದ್ದರೆ… ನಾನು ಮಣಿಪುರದ ಜನರ ಪರವಾಗಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಆಡಳಿತವನ್ನು ಬದಲಿಸಿ, ಎಲ್ಲಾ ಪಕ್ಷಗಳು ಕದನ ವಿರಾಮಕ್ಕಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಇಲ್ಲದಿದ್ದರೆ, ನಿಮ್ಮ ಅವಧಿ ಮುಗಿದ ನಂತರವೂ, ಮಣಿಪುರದಲ್ಲಿ ಏನು ತಪ್ಪಾಗಿದೆ ಎಂದು ಭಾರತ ಒಂದೇ ಧ್ವನಿಯಲ್ಲಿ ಪ್ರತಿಧ್ವನಿಸುತ್ತದೆ” ಎಂದು ಮಹುವಾ ಮೊಯಿತ್ರಾ ಹೇಳಿದರು.

”ಭಾರತವು ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಹೊಸ ಸಂಸತ್ತಿನ ಸಭಾಂಗಣದಲ್ಲಿ ಬಹುಮತದ ಧರ್ಮೀಯರಿಗೆ ತಲೆಬಾಗುವ ಮಹಾನ್ ಪ್ರಜಾಪ್ರಭುತ್ವದ ಪ್ರಧಾನಿಯ ನಡೆ ನಾಚಿಕೆಗೇಡು ಪೊಲೀಸ್ ದೌರ್ಜನ್ಯ ಮತ್ತು ಚಾಂಪಿಯನ್ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದು ನಮಗೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯ 3 ಜಿಲ್ಲೆಗಳ 50 ಪಂಚಾಯತ್‌ಗಳು- ಹರ್ಯಾಣದಲ್ಲಿ ಮುಸ್ಲಿಂ ವರ್ತಕರನ್ನು ರಾಜ್ಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಪತ್ರಗಳನ್ನು ಹೊರಡಿಸಿರುವುದು ನಮಗೆ ಅವಮಾನ ತಂದಿದೆ. ದ್ವೇಷದ ಯುದ್ಧದಲ್ಲಿ ಏನೇನಾಯ್ತು ನೋಡಿ, ತರಕಾರಿಗಳು ಹಿಂದೂ ಆದವು, ಆಡು ಮುಸ್ಲಿಂ ಆಯ್ತು ನಾವು ಹಿಂಸೆಗೆ ಒಳಗಾಗುವುದಿಲ್ಲ. ಮಮತಾ ದೀದಿ ಹೆದರಿಲ್ಲ, ಸ್ಟಾಲಿನ್ ಹೆದರಿಲ್ಲ, ಅಖಿಲೇಶ್ ಜಿ ಹೆದರಿಲ್ಲ, ರಾಹುಲ್ ಗಾಂಧಿ ಹೆದರಿಲ್ಲ. ಒಬ್ಬ ಕ್ರೋನಿ ಕ್ಯಾಪಿಟಲಿಸ್ಟ್ ನಾವು ನೋಡುತ್ತಿರುವಾಗಲೇ ಭಾರತದ ನಿಯಂತ್ರಕರು ಮತ್ತು ಇಕ್ವಿಟಿ ಮಾರುಕಟ್ಟೆಗಳಿಂದ ಹಣ ಮಾಡಲು ಹೋಗುವುದಿಲ್ಲ. ಎಲ್ಲರೂ ಕೇಳುತ್ತಾರೆ ಮೋದಿಜಿ ಇಲ್ಲದಿದ್ದರೆ ಯಾರು? ಮಣಿಪುರದ ಬಗ್ಗೆ ಈ ಮೌನದ ನಂತರ ಮೋದಿ ಅಲ್ಲದೆ ಬೇರೆ ಯಾರೂ ಅಲ್ಲ ಎಂದು ಭಾರತ ಹೇಳಬಹುದು ಎಂದರು.

ರಾಹುಲ್ ಮೇಲೆ ಆರೋಪಿಸಿರುವ ‘ಫ್ಲೈಯಿಂಗ್ ಕಿಸ್’ ಪ್ರಕರಣ ಬಗ್ಗೆ ಮಾತನಾಡಿದ ಮಹುವಾ, ”ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಸಂಸದರ ಮೇಲೆ ಆರೋಪ ಬಂದಾಗ ನೀವೇನೂ ಮಾತಾಡಿಲ್ಲ ಯಾಕೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾರೆ.

ಗುರುವಾರ ನಡೆದ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಕೇಂದ್ರ ಸಚಿವ ಆಕ್ರೋಶ ವ್ಯಕ್ತಡಿಸಿದ್ದು, ಬಿಜೆಪಿ ಸಂಸದೆಯರು ಕೂಡ ಕ್ರಮಕ್ಕೆ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....