Homeಮುಖಪುಟಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೀರಿ, ಆದರೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನಿಮ್ಮದೇ ಪಕ್ಷದ ಸಂಸದರ ಬಗ್ಗೆ ಯಾಕೆ ಮಾತನಾಡಲ್ಲ? ಎಂದು ಸ್ಮೃತಿ ಇರಾನಿ ಅವರಿಗೆ ಟಿಎಂ ಸಿ ಸಂಸೆದೆ ಮಹುವಾ ಮೊಯಿತ್ರಾ ಪ್ರಶ್ನೆ ಮಾಡಿದ್ದಾರೆ.

ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಲೋಕಸಭೆಯಲ್ಲಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಈ ನಿರ್ಣಯವು ಸದನದಲ್ಲಿ ಯಶಸ್ವಿಯಾಗಲು ಉದ್ದೇಶಿಸಿಲ್ಲ, ಆದರೆ ಸರ್ಕಾರದ ಮೇಲೆ ಅವಿಶ್ವಾಸಕ್ಕಿಂತ ಹೆಚ್ಚಾಗಿ, ವಿಪಕ್ಷಗಳ INDIA ಮೈತ್ರಿಕೂಟದ ಮೇಲಿನ ವಿಶ್ವಾಸಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಮಣಿಪುರದ ಬಗ್ಗೆ ಮಾತನಾಡಿದ ಅವರು, ಅಲ್ಲಿನ ಪರಿಸ್ಥಿತಿಯು ಇತರ ರಾಜ್ಯಗಳಿಗಿಂತ ಭಿನ್ನವಾಗಿದೆ. ಮಣಿಪುರದಲ್ಲಿ ದ್ವೇಷ ಅಪರಾಧ, ಆಂತರಿಕ ಕಲಹ ನಡೆಯುತ್ತಿದೆ. ಬಹುಪಾಲು ಅವಿಶ್ವಾಸ ನಿರ್ಣಯಗಳು ಸರ್ಕಾರವನ್ನು ಪತನ ಮಾಡಲು ಬಳಸಲಾಗುತ್ತದೆ. ಇಲ್ಲಿ ಆ ಸಾಧ್ಯತೆ ಇಲ್ಲ ಎಂದು ನಮಗೆ ತಿಳಿದಿದೆ. ನಮ್ಮ ಬಳಿ ಸಂಖ್ಯಾಬಲವಿಲ್ಲ. ಆಡಳಿತಾರೂಢ ಪಕ್ಷದಲ್ಲಿರುವ ನನ್ನ ಅನೇಕ ಸ್ನೇಹಿತರು ಮತ್ತು ವೈಎಸ್‌ಆರ್‌ನಂತಹ ಇತರ ಬಿಜೆಪಿ ಮಿತ್ರರು, ಈ ನಿರ್ಣಯವು INDIAದ ಪತನಕ್ಕಾಗಿದೆ ಎಂದು ನಮ್ಮನ್ನು ಲೇವಡಿ ಮಾಡಿದ್ದಾರೆ. ಆದರೆ ನಾವು ಯಾರನ್ನೂ ಕೆಳಗಿಳಿಸುವುದಕ್ಕಾಗಿ ಅಲ್ಲ, ಒಗ್ಗೂಡಿಸುವುದಕ್ಕಾಗಿ ಈ ನಿರ್ಣಯವನ್ನು ತಂದಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಪ್ರಧಾನಿ ಮೋದಿ ಅವರು ಮಣಿಪುರದ ಪರಿಸ್ಥಿತಿಯನ್ನು ಇತರ ರಾಜ್ಯಗಳೊಂದಿಗೆ ಹೋಲಿಸುವು ‘ಸುಳ್ಳು ಹರಡುವಿಕೆ’ಯ ಭಾಗವಾಗಿದೆ ಎಂದ ಸಂಸದೆ ಕಿಡಿಕಾರಿದ್ದಾರೆ.

”ಮಣಿಪುರದಲ್ಲಿ ನಡೆಯುತ್ತಿರುವುದು ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಅಪರಾಧವಾಗಿದೆ. ಅಲ್ಲಿ ಪೊಲೀಸ್ ಸಿಬ್ಬಂದಿ ಒಂದು ಸಮುದಾಯಕ್ಕೆ ಸೇರಿದ್ದಾರೆ. ಮುಖ್ಯಮಂತ್ರಿಯವರ ಅದೇ ಸಮುದಾಯದವರಾಗಿರಬಹುದು ಎಂದೆನಿಸುತ್ತದೆ. ಪೊಲೀಸ್‌ ಸಿಬ್ಬಂದಿ ಇನ್ನೊಂದು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಕ್ಕಾಗಿ ಸಮುದಾಯದ ಜನಸಮೂಹಕ್ಕೆ ಅವರನ್ನು ಒಪ್ಪಿಸಿದರು. ನ್ಯಾಯದ ಬೇಡಿಕೆಯನ್ನು ತಡೆಯುವ ಎಲ್ಲಾ ಪ್ರಯತ್ನಗಳು ಇಲ್ಲಿ ನಡೆದವು” ಎಂದು ಮಣಿಪುರದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವನ್ನು ನೆನಪಿಸಿದ್ದಾರೆ.

”ಕಳೆದ 3 ತಿಂಗಳಲ್ಲಿ 6,500 ಎಫ್‌ಐಆರ್‌ಗಳು ದಾಖಲಾಗಿವೆ ಯಾವ ರಾಜ್ಯದಲ್ಲಿ ಹೀಗಾಗಿದೆ? ಇದು ಡಬಲ್ ಇಂಜಿನ್ ಸರ್ಕಾರದ ದೊಡ್ಡ ವೈಫಲ್ಯ. ರಾಜಸ್ಥಾನದ ಬಗ್ಗೆ, ಛತ್ತೀಸ್‌ಗಢದ ಬಗ್ಗೆ ಏನಂತೀರಿ? ಎಂದು ಕೇಳುವ ಮೂಲಕ ಇತರ ರಾಜ್ಯಗಳನ್ನು ಅವಮಾನಿಸಬಾರದು. ಮಣಿಪುರವು ಮೌನವಾಗಿ ಅನುಮೋದಿಸಲಾದ ದ್ವೇಷದ ಅಪರಾಧವಾಗಿದೆ. ಇದು ಅಂತರ್ಯುದ್ಧ ಎಂದರೆ ತಪ್ಪಾಗಲ್ಲ” ಎಂದು ಮೋದಿ ನೇತೃತ್ವದ ಸರ್ಕಾರವನ್ನು ಮಹುವಾ ಮೊಯಿತ್ರಾ ಟೀಕಿಸಿದ್ದಾರೆ.

”ಪ್ರಧಾನಿ ಮೋದಿಯವರೇ ನೀವು ಇದನ್ನು ಕೇಳುತ್ತಿದ್ದರೆ… ನಾನು ಮಣಿಪುರದ ಜನರ ಪರವಾಗಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಆಡಳಿತವನ್ನು ಬದಲಿಸಿ, ಎಲ್ಲಾ ಪಕ್ಷಗಳು ಕದನ ವಿರಾಮಕ್ಕಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಇಲ್ಲದಿದ್ದರೆ, ನಿಮ್ಮ ಅವಧಿ ಮುಗಿದ ನಂತರವೂ, ಮಣಿಪುರದಲ್ಲಿ ಏನು ತಪ್ಪಾಗಿದೆ ಎಂದು ಭಾರತ ಒಂದೇ ಧ್ವನಿಯಲ್ಲಿ ಪ್ರತಿಧ್ವನಿಸುತ್ತದೆ” ಎಂದು ಮಹುವಾ ಮೊಯಿತ್ರಾ ಹೇಳಿದರು.

”ಭಾರತವು ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಹೊಸ ಸಂಸತ್ತಿನ ಸಭಾಂಗಣದಲ್ಲಿ ಬಹುಮತದ ಧರ್ಮೀಯರಿಗೆ ತಲೆಬಾಗುವ ಮಹಾನ್ ಪ್ರಜಾಪ್ರಭುತ್ವದ ಪ್ರಧಾನಿಯ ನಡೆ ನಾಚಿಕೆಗೇಡು ಪೊಲೀಸ್ ದೌರ್ಜನ್ಯ ಮತ್ತು ಚಾಂಪಿಯನ್ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದು ನಮಗೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯ 3 ಜಿಲ್ಲೆಗಳ 50 ಪಂಚಾಯತ್‌ಗಳು- ಹರ್ಯಾಣದಲ್ಲಿ ಮುಸ್ಲಿಂ ವರ್ತಕರನ್ನು ರಾಜ್ಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಪತ್ರಗಳನ್ನು ಹೊರಡಿಸಿರುವುದು ನಮಗೆ ಅವಮಾನ ತಂದಿದೆ. ದ್ವೇಷದ ಯುದ್ಧದಲ್ಲಿ ಏನೇನಾಯ್ತು ನೋಡಿ, ತರಕಾರಿಗಳು ಹಿಂದೂ ಆದವು, ಆಡು ಮುಸ್ಲಿಂ ಆಯ್ತು ನಾವು ಹಿಂಸೆಗೆ ಒಳಗಾಗುವುದಿಲ್ಲ. ಮಮತಾ ದೀದಿ ಹೆದರಿಲ್ಲ, ಸ್ಟಾಲಿನ್ ಹೆದರಿಲ್ಲ, ಅಖಿಲೇಶ್ ಜಿ ಹೆದರಿಲ್ಲ, ರಾಹುಲ್ ಗಾಂಧಿ ಹೆದರಿಲ್ಲ. ಒಬ್ಬ ಕ್ರೋನಿ ಕ್ಯಾಪಿಟಲಿಸ್ಟ್ ನಾವು ನೋಡುತ್ತಿರುವಾಗಲೇ ಭಾರತದ ನಿಯಂತ್ರಕರು ಮತ್ತು ಇಕ್ವಿಟಿ ಮಾರುಕಟ್ಟೆಗಳಿಂದ ಹಣ ಮಾಡಲು ಹೋಗುವುದಿಲ್ಲ. ಎಲ್ಲರೂ ಕೇಳುತ್ತಾರೆ ಮೋದಿಜಿ ಇಲ್ಲದಿದ್ದರೆ ಯಾರು? ಮಣಿಪುರದ ಬಗ್ಗೆ ಈ ಮೌನದ ನಂತರ ಮೋದಿ ಅಲ್ಲದೆ ಬೇರೆ ಯಾರೂ ಅಲ್ಲ ಎಂದು ಭಾರತ ಹೇಳಬಹುದು ಎಂದರು.

ರಾಹುಲ್ ಮೇಲೆ ಆರೋಪಿಸಿರುವ ‘ಫ್ಲೈಯಿಂಗ್ ಕಿಸ್’ ಪ್ರಕರಣ ಬಗ್ಗೆ ಮಾತನಾಡಿದ ಮಹುವಾ, ”ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಸಂಸದರ ಮೇಲೆ ಆರೋಪ ಬಂದಾಗ ನೀವೇನೂ ಮಾತಾಡಿಲ್ಲ ಯಾಕೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾರೆ.

ಗುರುವಾರ ನಡೆದ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಕೇಂದ್ರ ಸಚಿವ ಆಕ್ರೋಶ ವ್ಯಕ್ತಡಿಸಿದ್ದು, ಬಿಜೆಪಿ ಸಂಸದೆಯರು ಕೂಡ ಕ್ರಮಕ್ಕೆ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...