Homeಮುಖಪುಟಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೀರಿ, ಆದರೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನಿಮ್ಮದೇ ಪಕ್ಷದ ಸಂಸದರ ಬಗ್ಗೆ ಯಾಕೆ ಮಾತನಾಡಲ್ಲ? ಎಂದು ಸ್ಮೃತಿ ಇರಾನಿ ಅವರಿಗೆ ಟಿಎಂ ಸಿ ಸಂಸೆದೆ ಮಹುವಾ ಮೊಯಿತ್ರಾ ಪ್ರಶ್ನೆ ಮಾಡಿದ್ದಾರೆ.

ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಲೋಕಸಭೆಯಲ್ಲಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಈ ನಿರ್ಣಯವು ಸದನದಲ್ಲಿ ಯಶಸ್ವಿಯಾಗಲು ಉದ್ದೇಶಿಸಿಲ್ಲ, ಆದರೆ ಸರ್ಕಾರದ ಮೇಲೆ ಅವಿಶ್ವಾಸಕ್ಕಿಂತ ಹೆಚ್ಚಾಗಿ, ವಿಪಕ್ಷಗಳ INDIA ಮೈತ್ರಿಕೂಟದ ಮೇಲಿನ ವಿಶ್ವಾಸಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಮಣಿಪುರದ ಬಗ್ಗೆ ಮಾತನಾಡಿದ ಅವರು, ಅಲ್ಲಿನ ಪರಿಸ್ಥಿತಿಯು ಇತರ ರಾಜ್ಯಗಳಿಗಿಂತ ಭಿನ್ನವಾಗಿದೆ. ಮಣಿಪುರದಲ್ಲಿ ದ್ವೇಷ ಅಪರಾಧ, ಆಂತರಿಕ ಕಲಹ ನಡೆಯುತ್ತಿದೆ. ಬಹುಪಾಲು ಅವಿಶ್ವಾಸ ನಿರ್ಣಯಗಳು ಸರ್ಕಾರವನ್ನು ಪತನ ಮಾಡಲು ಬಳಸಲಾಗುತ್ತದೆ. ಇಲ್ಲಿ ಆ ಸಾಧ್ಯತೆ ಇಲ್ಲ ಎಂದು ನಮಗೆ ತಿಳಿದಿದೆ. ನಮ್ಮ ಬಳಿ ಸಂಖ್ಯಾಬಲವಿಲ್ಲ. ಆಡಳಿತಾರೂಢ ಪಕ್ಷದಲ್ಲಿರುವ ನನ್ನ ಅನೇಕ ಸ್ನೇಹಿತರು ಮತ್ತು ವೈಎಸ್‌ಆರ್‌ನಂತಹ ಇತರ ಬಿಜೆಪಿ ಮಿತ್ರರು, ಈ ನಿರ್ಣಯವು INDIAದ ಪತನಕ್ಕಾಗಿದೆ ಎಂದು ನಮ್ಮನ್ನು ಲೇವಡಿ ಮಾಡಿದ್ದಾರೆ. ಆದರೆ ನಾವು ಯಾರನ್ನೂ ಕೆಳಗಿಳಿಸುವುದಕ್ಕಾಗಿ ಅಲ್ಲ, ಒಗ್ಗೂಡಿಸುವುದಕ್ಕಾಗಿ ಈ ನಿರ್ಣಯವನ್ನು ತಂದಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಪ್ರಧಾನಿ ಮೋದಿ ಅವರು ಮಣಿಪುರದ ಪರಿಸ್ಥಿತಿಯನ್ನು ಇತರ ರಾಜ್ಯಗಳೊಂದಿಗೆ ಹೋಲಿಸುವು ‘ಸುಳ್ಳು ಹರಡುವಿಕೆ’ಯ ಭಾಗವಾಗಿದೆ ಎಂದ ಸಂಸದೆ ಕಿಡಿಕಾರಿದ್ದಾರೆ.

”ಮಣಿಪುರದಲ್ಲಿ ನಡೆಯುತ್ತಿರುವುದು ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಅಪರಾಧವಾಗಿದೆ. ಅಲ್ಲಿ ಪೊಲೀಸ್ ಸಿಬ್ಬಂದಿ ಒಂದು ಸಮುದಾಯಕ್ಕೆ ಸೇರಿದ್ದಾರೆ. ಮುಖ್ಯಮಂತ್ರಿಯವರ ಅದೇ ಸಮುದಾಯದವರಾಗಿರಬಹುದು ಎಂದೆನಿಸುತ್ತದೆ. ಪೊಲೀಸ್‌ ಸಿಬ್ಬಂದಿ ಇನ್ನೊಂದು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಕ್ಕಾಗಿ ಸಮುದಾಯದ ಜನಸಮೂಹಕ್ಕೆ ಅವರನ್ನು ಒಪ್ಪಿಸಿದರು. ನ್ಯಾಯದ ಬೇಡಿಕೆಯನ್ನು ತಡೆಯುವ ಎಲ್ಲಾ ಪ್ರಯತ್ನಗಳು ಇಲ್ಲಿ ನಡೆದವು” ಎಂದು ಮಣಿಪುರದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವನ್ನು ನೆನಪಿಸಿದ್ದಾರೆ.

”ಕಳೆದ 3 ತಿಂಗಳಲ್ಲಿ 6,500 ಎಫ್‌ಐಆರ್‌ಗಳು ದಾಖಲಾಗಿವೆ ಯಾವ ರಾಜ್ಯದಲ್ಲಿ ಹೀಗಾಗಿದೆ? ಇದು ಡಬಲ್ ಇಂಜಿನ್ ಸರ್ಕಾರದ ದೊಡ್ಡ ವೈಫಲ್ಯ. ರಾಜಸ್ಥಾನದ ಬಗ್ಗೆ, ಛತ್ತೀಸ್‌ಗಢದ ಬಗ್ಗೆ ಏನಂತೀರಿ? ಎಂದು ಕೇಳುವ ಮೂಲಕ ಇತರ ರಾಜ್ಯಗಳನ್ನು ಅವಮಾನಿಸಬಾರದು. ಮಣಿಪುರವು ಮೌನವಾಗಿ ಅನುಮೋದಿಸಲಾದ ದ್ವೇಷದ ಅಪರಾಧವಾಗಿದೆ. ಇದು ಅಂತರ್ಯುದ್ಧ ಎಂದರೆ ತಪ್ಪಾಗಲ್ಲ” ಎಂದು ಮೋದಿ ನೇತೃತ್ವದ ಸರ್ಕಾರವನ್ನು ಮಹುವಾ ಮೊಯಿತ್ರಾ ಟೀಕಿಸಿದ್ದಾರೆ.

”ಪ್ರಧಾನಿ ಮೋದಿಯವರೇ ನೀವು ಇದನ್ನು ಕೇಳುತ್ತಿದ್ದರೆ… ನಾನು ಮಣಿಪುರದ ಜನರ ಪರವಾಗಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಆಡಳಿತವನ್ನು ಬದಲಿಸಿ, ಎಲ್ಲಾ ಪಕ್ಷಗಳು ಕದನ ವಿರಾಮಕ್ಕಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಇಲ್ಲದಿದ್ದರೆ, ನಿಮ್ಮ ಅವಧಿ ಮುಗಿದ ನಂತರವೂ, ಮಣಿಪುರದಲ್ಲಿ ಏನು ತಪ್ಪಾಗಿದೆ ಎಂದು ಭಾರತ ಒಂದೇ ಧ್ವನಿಯಲ್ಲಿ ಪ್ರತಿಧ್ವನಿಸುತ್ತದೆ” ಎಂದು ಮಹುವಾ ಮೊಯಿತ್ರಾ ಹೇಳಿದರು.

”ಭಾರತವು ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಹೊಸ ಸಂಸತ್ತಿನ ಸಭಾಂಗಣದಲ್ಲಿ ಬಹುಮತದ ಧರ್ಮೀಯರಿಗೆ ತಲೆಬಾಗುವ ಮಹಾನ್ ಪ್ರಜಾಪ್ರಭುತ್ವದ ಪ್ರಧಾನಿಯ ನಡೆ ನಾಚಿಕೆಗೇಡು ಪೊಲೀಸ್ ದೌರ್ಜನ್ಯ ಮತ್ತು ಚಾಂಪಿಯನ್ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದು ನಮಗೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯ 3 ಜಿಲ್ಲೆಗಳ 50 ಪಂಚಾಯತ್‌ಗಳು- ಹರ್ಯಾಣದಲ್ಲಿ ಮುಸ್ಲಿಂ ವರ್ತಕರನ್ನು ರಾಜ್ಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಪತ್ರಗಳನ್ನು ಹೊರಡಿಸಿರುವುದು ನಮಗೆ ಅವಮಾನ ತಂದಿದೆ. ದ್ವೇಷದ ಯುದ್ಧದಲ್ಲಿ ಏನೇನಾಯ್ತು ನೋಡಿ, ತರಕಾರಿಗಳು ಹಿಂದೂ ಆದವು, ಆಡು ಮುಸ್ಲಿಂ ಆಯ್ತು ನಾವು ಹಿಂಸೆಗೆ ಒಳಗಾಗುವುದಿಲ್ಲ. ಮಮತಾ ದೀದಿ ಹೆದರಿಲ್ಲ, ಸ್ಟಾಲಿನ್ ಹೆದರಿಲ್ಲ, ಅಖಿಲೇಶ್ ಜಿ ಹೆದರಿಲ್ಲ, ರಾಹುಲ್ ಗಾಂಧಿ ಹೆದರಿಲ್ಲ. ಒಬ್ಬ ಕ್ರೋನಿ ಕ್ಯಾಪಿಟಲಿಸ್ಟ್ ನಾವು ನೋಡುತ್ತಿರುವಾಗಲೇ ಭಾರತದ ನಿಯಂತ್ರಕರು ಮತ್ತು ಇಕ್ವಿಟಿ ಮಾರುಕಟ್ಟೆಗಳಿಂದ ಹಣ ಮಾಡಲು ಹೋಗುವುದಿಲ್ಲ. ಎಲ್ಲರೂ ಕೇಳುತ್ತಾರೆ ಮೋದಿಜಿ ಇಲ್ಲದಿದ್ದರೆ ಯಾರು? ಮಣಿಪುರದ ಬಗ್ಗೆ ಈ ಮೌನದ ನಂತರ ಮೋದಿ ಅಲ್ಲದೆ ಬೇರೆ ಯಾರೂ ಅಲ್ಲ ಎಂದು ಭಾರತ ಹೇಳಬಹುದು ಎಂದರು.

ರಾಹುಲ್ ಮೇಲೆ ಆರೋಪಿಸಿರುವ ‘ಫ್ಲೈಯಿಂಗ್ ಕಿಸ್’ ಪ್ರಕರಣ ಬಗ್ಗೆ ಮಾತನಾಡಿದ ಮಹುವಾ, ”ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಸಂಸದರ ಮೇಲೆ ಆರೋಪ ಬಂದಾಗ ನೀವೇನೂ ಮಾತಾಡಿಲ್ಲ ಯಾಕೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾರೆ.

ಗುರುವಾರ ನಡೆದ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಕೇಂದ್ರ ಸಚಿವ ಆಕ್ರೋಶ ವ್ಯಕ್ತಡಿಸಿದ್ದು, ಬಿಜೆಪಿ ಸಂಸದೆಯರು ಕೂಡ ಕ್ರಮಕ್ಕೆ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...