Homeಮುಖಪುಟಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೀರಿ, ಆದರೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನಿಮ್ಮದೇ ಪಕ್ಷದ ಸಂಸದರ ಬಗ್ಗೆ ಯಾಕೆ ಮಾತನಾಡಲ್ಲ? ಎಂದು ಸ್ಮೃತಿ ಇರಾನಿ ಅವರಿಗೆ ಟಿಎಂ ಸಿ ಸಂಸೆದೆ ಮಹುವಾ ಮೊಯಿತ್ರಾ ಪ್ರಶ್ನೆ ಮಾಡಿದ್ದಾರೆ.

ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಲೋಕಸಭೆಯಲ್ಲಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಈ ನಿರ್ಣಯವು ಸದನದಲ್ಲಿ ಯಶಸ್ವಿಯಾಗಲು ಉದ್ದೇಶಿಸಿಲ್ಲ, ಆದರೆ ಸರ್ಕಾರದ ಮೇಲೆ ಅವಿಶ್ವಾಸಕ್ಕಿಂತ ಹೆಚ್ಚಾಗಿ, ವಿಪಕ್ಷಗಳ INDIA ಮೈತ್ರಿಕೂಟದ ಮೇಲಿನ ವಿಶ್ವಾಸಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಮಣಿಪುರದ ಬಗ್ಗೆ ಮಾತನಾಡಿದ ಅವರು, ಅಲ್ಲಿನ ಪರಿಸ್ಥಿತಿಯು ಇತರ ರಾಜ್ಯಗಳಿಗಿಂತ ಭಿನ್ನವಾಗಿದೆ. ಮಣಿಪುರದಲ್ಲಿ ದ್ವೇಷ ಅಪರಾಧ, ಆಂತರಿಕ ಕಲಹ ನಡೆಯುತ್ತಿದೆ. ಬಹುಪಾಲು ಅವಿಶ್ವಾಸ ನಿರ್ಣಯಗಳು ಸರ್ಕಾರವನ್ನು ಪತನ ಮಾಡಲು ಬಳಸಲಾಗುತ್ತದೆ. ಇಲ್ಲಿ ಆ ಸಾಧ್ಯತೆ ಇಲ್ಲ ಎಂದು ನಮಗೆ ತಿಳಿದಿದೆ. ನಮ್ಮ ಬಳಿ ಸಂಖ್ಯಾಬಲವಿಲ್ಲ. ಆಡಳಿತಾರೂಢ ಪಕ್ಷದಲ್ಲಿರುವ ನನ್ನ ಅನೇಕ ಸ್ನೇಹಿತರು ಮತ್ತು ವೈಎಸ್‌ಆರ್‌ನಂತಹ ಇತರ ಬಿಜೆಪಿ ಮಿತ್ರರು, ಈ ನಿರ್ಣಯವು INDIAದ ಪತನಕ್ಕಾಗಿದೆ ಎಂದು ನಮ್ಮನ್ನು ಲೇವಡಿ ಮಾಡಿದ್ದಾರೆ. ಆದರೆ ನಾವು ಯಾರನ್ನೂ ಕೆಳಗಿಳಿಸುವುದಕ್ಕಾಗಿ ಅಲ್ಲ, ಒಗ್ಗೂಡಿಸುವುದಕ್ಕಾಗಿ ಈ ನಿರ್ಣಯವನ್ನು ತಂದಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಪ್ರಧಾನಿ ಮೋದಿ ಅವರು ಮಣಿಪುರದ ಪರಿಸ್ಥಿತಿಯನ್ನು ಇತರ ರಾಜ್ಯಗಳೊಂದಿಗೆ ಹೋಲಿಸುವು ‘ಸುಳ್ಳು ಹರಡುವಿಕೆ’ಯ ಭಾಗವಾಗಿದೆ ಎಂದ ಸಂಸದೆ ಕಿಡಿಕಾರಿದ್ದಾರೆ.

”ಮಣಿಪುರದಲ್ಲಿ ನಡೆಯುತ್ತಿರುವುದು ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಅಪರಾಧವಾಗಿದೆ. ಅಲ್ಲಿ ಪೊಲೀಸ್ ಸಿಬ್ಬಂದಿ ಒಂದು ಸಮುದಾಯಕ್ಕೆ ಸೇರಿದ್ದಾರೆ. ಮುಖ್ಯಮಂತ್ರಿಯವರ ಅದೇ ಸಮುದಾಯದವರಾಗಿರಬಹುದು ಎಂದೆನಿಸುತ್ತದೆ. ಪೊಲೀಸ್‌ ಸಿಬ್ಬಂದಿ ಇನ್ನೊಂದು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಕ್ಕಾಗಿ ಸಮುದಾಯದ ಜನಸಮೂಹಕ್ಕೆ ಅವರನ್ನು ಒಪ್ಪಿಸಿದರು. ನ್ಯಾಯದ ಬೇಡಿಕೆಯನ್ನು ತಡೆಯುವ ಎಲ್ಲಾ ಪ್ರಯತ್ನಗಳು ಇಲ್ಲಿ ನಡೆದವು” ಎಂದು ಮಣಿಪುರದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವನ್ನು ನೆನಪಿಸಿದ್ದಾರೆ.

”ಕಳೆದ 3 ತಿಂಗಳಲ್ಲಿ 6,500 ಎಫ್‌ಐಆರ್‌ಗಳು ದಾಖಲಾಗಿವೆ ಯಾವ ರಾಜ್ಯದಲ್ಲಿ ಹೀಗಾಗಿದೆ? ಇದು ಡಬಲ್ ಇಂಜಿನ್ ಸರ್ಕಾರದ ದೊಡ್ಡ ವೈಫಲ್ಯ. ರಾಜಸ್ಥಾನದ ಬಗ್ಗೆ, ಛತ್ತೀಸ್‌ಗಢದ ಬಗ್ಗೆ ಏನಂತೀರಿ? ಎಂದು ಕೇಳುವ ಮೂಲಕ ಇತರ ರಾಜ್ಯಗಳನ್ನು ಅವಮಾನಿಸಬಾರದು. ಮಣಿಪುರವು ಮೌನವಾಗಿ ಅನುಮೋದಿಸಲಾದ ದ್ವೇಷದ ಅಪರಾಧವಾಗಿದೆ. ಇದು ಅಂತರ್ಯುದ್ಧ ಎಂದರೆ ತಪ್ಪಾಗಲ್ಲ” ಎಂದು ಮೋದಿ ನೇತೃತ್ವದ ಸರ್ಕಾರವನ್ನು ಮಹುವಾ ಮೊಯಿತ್ರಾ ಟೀಕಿಸಿದ್ದಾರೆ.

”ಪ್ರಧಾನಿ ಮೋದಿಯವರೇ ನೀವು ಇದನ್ನು ಕೇಳುತ್ತಿದ್ದರೆ… ನಾನು ಮಣಿಪುರದ ಜನರ ಪರವಾಗಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಆಡಳಿತವನ್ನು ಬದಲಿಸಿ, ಎಲ್ಲಾ ಪಕ್ಷಗಳು ಕದನ ವಿರಾಮಕ್ಕಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಇಲ್ಲದಿದ್ದರೆ, ನಿಮ್ಮ ಅವಧಿ ಮುಗಿದ ನಂತರವೂ, ಮಣಿಪುರದಲ್ಲಿ ಏನು ತಪ್ಪಾಗಿದೆ ಎಂದು ಭಾರತ ಒಂದೇ ಧ್ವನಿಯಲ್ಲಿ ಪ್ರತಿಧ್ವನಿಸುತ್ತದೆ” ಎಂದು ಮಹುವಾ ಮೊಯಿತ್ರಾ ಹೇಳಿದರು.

”ಭಾರತವು ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಹೊಸ ಸಂಸತ್ತಿನ ಸಭಾಂಗಣದಲ್ಲಿ ಬಹುಮತದ ಧರ್ಮೀಯರಿಗೆ ತಲೆಬಾಗುವ ಮಹಾನ್ ಪ್ರಜಾಪ್ರಭುತ್ವದ ಪ್ರಧಾನಿಯ ನಡೆ ನಾಚಿಕೆಗೇಡು ಪೊಲೀಸ್ ದೌರ್ಜನ್ಯ ಮತ್ತು ಚಾಂಪಿಯನ್ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದು ನಮಗೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯ 3 ಜಿಲ್ಲೆಗಳ 50 ಪಂಚಾಯತ್‌ಗಳು- ಹರ್ಯಾಣದಲ್ಲಿ ಮುಸ್ಲಿಂ ವರ್ತಕರನ್ನು ರಾಜ್ಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಪತ್ರಗಳನ್ನು ಹೊರಡಿಸಿರುವುದು ನಮಗೆ ಅವಮಾನ ತಂದಿದೆ. ದ್ವೇಷದ ಯುದ್ಧದಲ್ಲಿ ಏನೇನಾಯ್ತು ನೋಡಿ, ತರಕಾರಿಗಳು ಹಿಂದೂ ಆದವು, ಆಡು ಮುಸ್ಲಿಂ ಆಯ್ತು ನಾವು ಹಿಂಸೆಗೆ ಒಳಗಾಗುವುದಿಲ್ಲ. ಮಮತಾ ದೀದಿ ಹೆದರಿಲ್ಲ, ಸ್ಟಾಲಿನ್ ಹೆದರಿಲ್ಲ, ಅಖಿಲೇಶ್ ಜಿ ಹೆದರಿಲ್ಲ, ರಾಹುಲ್ ಗಾಂಧಿ ಹೆದರಿಲ್ಲ. ಒಬ್ಬ ಕ್ರೋನಿ ಕ್ಯಾಪಿಟಲಿಸ್ಟ್ ನಾವು ನೋಡುತ್ತಿರುವಾಗಲೇ ಭಾರತದ ನಿಯಂತ್ರಕರು ಮತ್ತು ಇಕ್ವಿಟಿ ಮಾರುಕಟ್ಟೆಗಳಿಂದ ಹಣ ಮಾಡಲು ಹೋಗುವುದಿಲ್ಲ. ಎಲ್ಲರೂ ಕೇಳುತ್ತಾರೆ ಮೋದಿಜಿ ಇಲ್ಲದಿದ್ದರೆ ಯಾರು? ಮಣಿಪುರದ ಬಗ್ಗೆ ಈ ಮೌನದ ನಂತರ ಮೋದಿ ಅಲ್ಲದೆ ಬೇರೆ ಯಾರೂ ಅಲ್ಲ ಎಂದು ಭಾರತ ಹೇಳಬಹುದು ಎಂದರು.

ರಾಹುಲ್ ಮೇಲೆ ಆರೋಪಿಸಿರುವ ‘ಫ್ಲೈಯಿಂಗ್ ಕಿಸ್’ ಪ್ರಕರಣ ಬಗ್ಗೆ ಮಾತನಾಡಿದ ಮಹುವಾ, ”ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಸಂಸದರ ಮೇಲೆ ಆರೋಪ ಬಂದಾಗ ನೀವೇನೂ ಮಾತಾಡಿಲ್ಲ ಯಾಕೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾರೆ.

ಗುರುವಾರ ನಡೆದ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಕೇಂದ್ರ ಸಚಿವ ಆಕ್ರೋಶ ವ್ಯಕ್ತಡಿಸಿದ್ದು, ಬಿಜೆಪಿ ಸಂಸದೆಯರು ಕೂಡ ಕ್ರಮಕ್ಕೆ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...