Homeಮುಖಪುಟಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

ಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

- Advertisement -
- Advertisement -

ಇಸ್ರೇಲ್‌-ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾ ಪಟ್ಟಿಯಿಂದ ದಕ್ಷಿಣಕ್ಕೆ ನಾಗರಿಕರನ್ನು ಸ್ಥಳಾಂತರಿಸಲು ಬಲವಂತದ ಹಿನ್ನೆಲೆ ಸುಮಾರು 1.5 ಮಿಲಿಯನ್ ಪ್ಯಾಲೆಸ್ತೀನ್‌ ನಾಗರಿಕರು ಪ್ರಸ್ತುತ ದಕ್ಷಿಣ ಗಾಝಾ ನಗರವಾದ ರಫಾದಲ್ಲಿ ನೆಲೆಯೂರಿದ್ದಾರೆ. ಇದೀಗ ರಫಾವನ್ನು ಕೂಡ ಟಾರ್ಗೆಟ್‌ ಮಾಡಿ ಇಸ್ರೇಲ್‌ ಬಾಂಬ್‌ ದಾಳಿ ನಡೆಸುತ್ತಿದ್ದು, ಅಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಜೀವ ರಕ್ಷಣೆಗೆ ತೆರಳಲು ಇರುವ ಎಲ್ಲಾ ದಾರಿಯು ಬಂದ್ ಆಗಿದೆ.

ಮೂಲತಃ 2,50,000 ಜನಸಂಖ್ಯೆಯನ್ನು ಹೊಂದಿದ್ದ ಗಾಝಾ ಪಟ್ಟಣವು ಈಗ ಗಾಝಾದ ಸಂಪೂರ್ಣ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ಯುಎನ್‌ನ ಉನ್ನತ ನೆರವು ಅಧಿಕಾರಿಯು ಅಲ್ಲಿನ ಪರಿಸ್ಥಿತಿ ಹೀನಾಯ ಎಂದು ಕರೆದಿದ್ದು, ಅಲ್ಲಿ ರೋಗ ಹರಡುತ್ತಿದೆ ಮತ್ತು ಕ್ಷಾಮವು ತಲೆದೋರಿದೆ ಎಂದು ಹೇಳಿದ್ದಾರೆ.

ಇಸ್ರೇಲ್ ಗಾಝಾ ಪಟ್ಟಿಯಲ್ಲಿ ಇದುವರೆಗೆ 29,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ. ರಫಾದ ಮೇಲೆ ಇಸ್ರೇಲ್‌ನ ನಿರೀಕ್ಷಿತ ದಾಳಿಯು ನಾಗರಿಕರನ್ನು ಈಜಿಪ್ಟ್‌ನ ಗಡಿ ಸಿನಾಯ್ ಪೆನಿನ್ಸುಲಾಕ್ಕೆ  ತೆರಳುವಂತೆ ಮಾಡಬಹುದು ಎಂಬ ಆತಂಕಗಳು ಹೆಚ್ಚಿವೆ. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ರಫಾಹ್ ಈಗ ಇಸ್ರೇಲ್‌ನ ವೈಮಾನಿಕ ದಾಳಿಗೆ ಗುರಿಯಾಗುತ್ತಿದೆ. ಹಿಂಸಾಚಾರದಿಂದ ಜೀವ ರಕ್ಷಣೆಗೆ ಪಲಾಯನ ಮಾಡಬೇಕೆನ್ನುವವರಿಗೆ ಸುರಕ್ಷಿತ ದಾರಿಯೇ ಇಲ್ಲವಾಗಿದೆ.

ಇಸ್ರೇಲ್‌ನ ಹೊರತಾಗಿ ಗಾಝಾದೊಂದಿಗೆ ಗಡಿಯನ್ನು ಹೊಂದಿರುವ ಏಕೈಕ ದೇಶವಾದ ಈಜಿಪ್ಟ್, ಇಸ್ರೇಲ್‌ನಿಂದ ಸ್ಥಳಾಂತರಿಸಲ್ಪಟ್ಟ ಪ್ಯಾಲೆಸ್ತೀನ್‌ ನಿರಾಶ್ರಿತರನ್ನು ಸ್ವೀಕರಿಸುವ ಬಗ್ಗೆ ಒತ್ತಡವನ್ನು ನಿರಾಕರಿಸಿದೆ. ಗಾಝಾದ ನಿರಾಶ್ರಿತರನ್ನು ಸ್ವೀಕರಿಸಲು ಈಜಿಪ್ಟ್‌ನ್ನು ಒತ್ತಾಯಿಸುವಂತೆ ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಲಾಬಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ.

ಆದರೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಸಿನಾಯ್‌ಗೆ ಹೆಚ್ಚಿನ ಸಂಖ್ಯೆಯ ಪ್ಯಾಲೆಸ್ತೀನ್‌ ನಾಗರಿಕರ ಪ್ರವೇಶವನ್ನು ನಿರಾಕರಿಸುವಲ್ಲಿ ಅಚಲವಾಗಿದ್ದಾರೆ. ಅವರು ಅದನ್ನು “ಕೆಂಪು ಗೆರೆ” ಎಂದು ಕರೆದಿದ್ದಾರೆ. UNನ ನಿರಾಶ್ರಿತರ ಶಿಬಿರದ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ, ಈಜಿಪ್ಟ್‌ಗೆ ನಿರಾಶ್ರಿತ ಗಾಝಾದ ಜನರನ್ನು ಸ್ಥಳಾಂತರಿಸುವುದು ಈಜಿಪ್ಟ್ ಮತ್ತು ಪ್ಯಾಲೆಸ್ತೀನಿಯಾದವರಿಗೆ ವಿಪತ್ತು ಎಂದು ಕರೆದಿದ್ದಾರೆ.

ಈಜಿಪ್ಟ್, ಗಾಝಾದ ಹೊರಗೆ ಪ್ಯಾಲೆಸ್ತೀನ್‌ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಬಯಸುವುದಿಲ್ಲ. ಇಸ್ರೇಲ್‌ನ ಗುಪ್ತಚರ ಸಚಿವಾಲಯದ ಸೋರಿಕೆಯಾದ ದಾಖಲೆಯು, ಗಾಝಾದ 2.3 ಮಿಲಿಯನ್ ಜನಸಂಖ್ಯೆಯನ್ನು ಭೂಪ್ರದೇಶದಿಂದ ಮತ್ತು ಈಜಿಪ್ಟ್‌ನ ಸಿನಾಯ್ ಮರುಭೂಮಿಯ ಟೆಂಟ್ ನಗರಗಳಿಗೆ ಬಲವಂತವಾಗಿ ವರ್ಗಾಯಿಸಲು ಶಿಫಾರಸುಗಳನ್ನು ಒಳಗೊಂಡಿದೆ. ಸರ್ಕಾರದ ಮಂತ್ರಿಗಳಾದ ಬೆಜಲೆಲ್ ಸ್ಮೊಟ್ರಿಚ್ ಮತ್ತು ಇಟಮಾರ್ ಬೆನ್-ಗ್ವಿರ್ ಇಬ್ಬರೂ ಸಹ ಗಾಝಾದಿಂದ ಪ್ಯಾಲೆಸ್ತೀನಿಯನ್ನರನ್ನು ಹೊರಹಾಕುವುದನ್ನು ಬಹಿರಂಗವಾಗಿ ಪ್ರತಿಪಾದಿಸಿದ್ದಾರೆ. ಜನವರಿಯಲ್ಲಿ ಈ ಯೋಜನೆಗೆ ಕರೆ ನೀಡುವ ಇಸ್ರೇಲ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕ್ಯಾಬಿನೆಟ್‌ನ 11 ಸದಸ್ಯರು ಮತ್ತು 15 ಹೆಚ್ಚುವರಿ ಸಂಸತ್ತಿನ ಸದಸ್ಯರು ಭಾಗವಹಿಸಿದ್ದರು. ನೆತನ್ಯಾಹು ಕಳೆದ ತಿಂಗಳು ಇಸ್ರೇಲ್‌ಗೆ ಶಾಶ್ವತವಾಗಿ ಗಾಝಾವನ್ನು ಆಕ್ರಮಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದ್ದರೂ, ಈ ಬಗೆಗೆನ ಇಸ್ರೇಲ್‌ ಬಯಕೆ ಗೌಪ್ಯವಾಗಿಲ್ಲ.

ಗಾಝಾ ಗಡಿಯಲ್ಲಿ ಈಜಿಪ್ಟ್‌ನ ವಿಶಾಲವಾದ ಕಡಿಮೆ ಜನಸಂಖ್ಯೆ ಹೊಂದಿರುವ ಸಿನೈ ಪ್ರದೇಶವಿದೆ, ಅಲ್ಲಿ ಭಾರೀ ಭದ್ರತಾ ವ್ಯವಸ್ಥೆ ಇದೆ. ಆದರೆ ಈಜಿಪ್ಟ್ ಗಾಝಾ ನಿರಾಶ್ರಿತರಿಗೆ ಗಡಿ ಪ್ರವೇಶಿಸದಂತೆ ಎಚ್ಚರಿಕೆ ನೀಡಿದೆ. ಇದು ಗಾಝಾಕ್ಕೆ ಮಾನವೀಯ ನೆರವು ನೀಡುತ್ತದೆ, ಆದರೆ ಗಾಝಾದಿಂದ ಈಜಿಪ್ಟ್‌ಗೆ ಪ್ಯಾಲೆಸ್ತೀನಿಯರ ಪಲಾಯನಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದೆ.

ಈಜಿಪ್ಟ್‌ನ ಮತ್ತೊಂದು ಪ್ರಮುಖ ಕಾಳಜಿ ಅದರ ಭದ್ರತೆಯಾಗಿದೆ. ಪ್ಯಾಲೆಸ್ತೀನಿಯನ್ನರಿಗೆ ಸಿನೈನಲ್ಲಿ ಭದ್ರತೆ ಒದಗಿಸಿದರೆ, ಈಜಿಪ್ಟ್ ಪ್ರದೇಶ ಪ್ರತಿರೋಧ ಕಾರ್ಯಾಚರಣೆಗೆ ಕಾರಣವಾಗಬಹುದು. ಇದು ಈಜಿಪ್ಟ್ ಮತ್ತು ಇಸ್ರೇಲ್‌ ನಡುವೆ ಮಿಲಿಟರಿ ಸಂಘರ್ಷಕ್ಕೆ ಕಾರಣವಾಗಬಹುದು. ನೆತನ್ಯಾಹು ಮುಂಬರುವ ವಾರಗಳಲ್ಲಿ ರಫಾದ ಮೇಲೆ ಆಕ್ರಮಣ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅದೇ ಸಮಯದಲ್ಲಿ ಈಜಿಪ್ಟ್ ತನ್ನ ಗಡಿಯನ್ನು ಬಲಪಡಿಸಲು ಮುಂದಾಗಿದೆ.

ಇದನ್ನು ಓದಿ: ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...