Homeಮುಖಪುಟಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

ಪ್ಯಾಲೆಸ್ತೀನ್‌ ನಾಗರಿಕರಿಗೆ ಗಡಿಯನ್ನು ತೆರೆಯಲು ಈಜಿಪ್ಟ್ ನಿರಾಕರಿಸುತ್ತಿರುವುದೇಕೆ?

- Advertisement -
- Advertisement -

ಇಸ್ರೇಲ್‌-ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾ ಪಟ್ಟಿಯಿಂದ ದಕ್ಷಿಣಕ್ಕೆ ನಾಗರಿಕರನ್ನು ಸ್ಥಳಾಂತರಿಸಲು ಬಲವಂತದ ಹಿನ್ನೆಲೆ ಸುಮಾರು 1.5 ಮಿಲಿಯನ್ ಪ್ಯಾಲೆಸ್ತೀನ್‌ ನಾಗರಿಕರು ಪ್ರಸ್ತುತ ದಕ್ಷಿಣ ಗಾಝಾ ನಗರವಾದ ರಫಾದಲ್ಲಿ ನೆಲೆಯೂರಿದ್ದಾರೆ. ಇದೀಗ ರಫಾವನ್ನು ಕೂಡ ಟಾರ್ಗೆಟ್‌ ಮಾಡಿ ಇಸ್ರೇಲ್‌ ಬಾಂಬ್‌ ದಾಳಿ ನಡೆಸುತ್ತಿದ್ದು, ಅಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಜೀವ ರಕ್ಷಣೆಗೆ ತೆರಳಲು ಇರುವ ಎಲ್ಲಾ ದಾರಿಯು ಬಂದ್ ಆಗಿದೆ.

ಮೂಲತಃ 2,50,000 ಜನಸಂಖ್ಯೆಯನ್ನು ಹೊಂದಿದ್ದ ಗಾಝಾ ಪಟ್ಟಣವು ಈಗ ಗಾಝಾದ ಸಂಪೂರ್ಣ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ಯುಎನ್‌ನ ಉನ್ನತ ನೆರವು ಅಧಿಕಾರಿಯು ಅಲ್ಲಿನ ಪರಿಸ್ಥಿತಿ ಹೀನಾಯ ಎಂದು ಕರೆದಿದ್ದು, ಅಲ್ಲಿ ರೋಗ ಹರಡುತ್ತಿದೆ ಮತ್ತು ಕ್ಷಾಮವು ತಲೆದೋರಿದೆ ಎಂದು ಹೇಳಿದ್ದಾರೆ.

ಇಸ್ರೇಲ್ ಗಾಝಾ ಪಟ್ಟಿಯಲ್ಲಿ ಇದುವರೆಗೆ 29,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ. ರಫಾದ ಮೇಲೆ ಇಸ್ರೇಲ್‌ನ ನಿರೀಕ್ಷಿತ ದಾಳಿಯು ನಾಗರಿಕರನ್ನು ಈಜಿಪ್ಟ್‌ನ ಗಡಿ ಸಿನಾಯ್ ಪೆನಿನ್ಸುಲಾಕ್ಕೆ  ತೆರಳುವಂತೆ ಮಾಡಬಹುದು ಎಂಬ ಆತಂಕಗಳು ಹೆಚ್ಚಿವೆ. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ರಫಾಹ್ ಈಗ ಇಸ್ರೇಲ್‌ನ ವೈಮಾನಿಕ ದಾಳಿಗೆ ಗುರಿಯಾಗುತ್ತಿದೆ. ಹಿಂಸಾಚಾರದಿಂದ ಜೀವ ರಕ್ಷಣೆಗೆ ಪಲಾಯನ ಮಾಡಬೇಕೆನ್ನುವವರಿಗೆ ಸುರಕ್ಷಿತ ದಾರಿಯೇ ಇಲ್ಲವಾಗಿದೆ.

ಇಸ್ರೇಲ್‌ನ ಹೊರತಾಗಿ ಗಾಝಾದೊಂದಿಗೆ ಗಡಿಯನ್ನು ಹೊಂದಿರುವ ಏಕೈಕ ದೇಶವಾದ ಈಜಿಪ್ಟ್, ಇಸ್ರೇಲ್‌ನಿಂದ ಸ್ಥಳಾಂತರಿಸಲ್ಪಟ್ಟ ಪ್ಯಾಲೆಸ್ತೀನ್‌ ನಿರಾಶ್ರಿತರನ್ನು ಸ್ವೀಕರಿಸುವ ಬಗ್ಗೆ ಒತ್ತಡವನ್ನು ನಿರಾಕರಿಸಿದೆ. ಗಾಝಾದ ನಿರಾಶ್ರಿತರನ್ನು ಸ್ವೀಕರಿಸಲು ಈಜಿಪ್ಟ್‌ನ್ನು ಒತ್ತಾಯಿಸುವಂತೆ ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಲಾಬಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ.

ಆದರೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಸಿನಾಯ್‌ಗೆ ಹೆಚ್ಚಿನ ಸಂಖ್ಯೆಯ ಪ್ಯಾಲೆಸ್ತೀನ್‌ ನಾಗರಿಕರ ಪ್ರವೇಶವನ್ನು ನಿರಾಕರಿಸುವಲ್ಲಿ ಅಚಲವಾಗಿದ್ದಾರೆ. ಅವರು ಅದನ್ನು “ಕೆಂಪು ಗೆರೆ” ಎಂದು ಕರೆದಿದ್ದಾರೆ. UNನ ನಿರಾಶ್ರಿತರ ಶಿಬಿರದ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ, ಈಜಿಪ್ಟ್‌ಗೆ ನಿರಾಶ್ರಿತ ಗಾಝಾದ ಜನರನ್ನು ಸ್ಥಳಾಂತರಿಸುವುದು ಈಜಿಪ್ಟ್ ಮತ್ತು ಪ್ಯಾಲೆಸ್ತೀನಿಯಾದವರಿಗೆ ವಿಪತ್ತು ಎಂದು ಕರೆದಿದ್ದಾರೆ.

ಈಜಿಪ್ಟ್, ಗಾಝಾದ ಹೊರಗೆ ಪ್ಯಾಲೆಸ್ತೀನ್‌ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಬಯಸುವುದಿಲ್ಲ. ಇಸ್ರೇಲ್‌ನ ಗುಪ್ತಚರ ಸಚಿವಾಲಯದ ಸೋರಿಕೆಯಾದ ದಾಖಲೆಯು, ಗಾಝಾದ 2.3 ಮಿಲಿಯನ್ ಜನಸಂಖ್ಯೆಯನ್ನು ಭೂಪ್ರದೇಶದಿಂದ ಮತ್ತು ಈಜಿಪ್ಟ್‌ನ ಸಿನಾಯ್ ಮರುಭೂಮಿಯ ಟೆಂಟ್ ನಗರಗಳಿಗೆ ಬಲವಂತವಾಗಿ ವರ್ಗಾಯಿಸಲು ಶಿಫಾರಸುಗಳನ್ನು ಒಳಗೊಂಡಿದೆ. ಸರ್ಕಾರದ ಮಂತ್ರಿಗಳಾದ ಬೆಜಲೆಲ್ ಸ್ಮೊಟ್ರಿಚ್ ಮತ್ತು ಇಟಮಾರ್ ಬೆನ್-ಗ್ವಿರ್ ಇಬ್ಬರೂ ಸಹ ಗಾಝಾದಿಂದ ಪ್ಯಾಲೆಸ್ತೀನಿಯನ್ನರನ್ನು ಹೊರಹಾಕುವುದನ್ನು ಬಹಿರಂಗವಾಗಿ ಪ್ರತಿಪಾದಿಸಿದ್ದಾರೆ. ಜನವರಿಯಲ್ಲಿ ಈ ಯೋಜನೆಗೆ ಕರೆ ನೀಡುವ ಇಸ್ರೇಲ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕ್ಯಾಬಿನೆಟ್‌ನ 11 ಸದಸ್ಯರು ಮತ್ತು 15 ಹೆಚ್ಚುವರಿ ಸಂಸತ್ತಿನ ಸದಸ್ಯರು ಭಾಗವಹಿಸಿದ್ದರು. ನೆತನ್ಯಾಹು ಕಳೆದ ತಿಂಗಳು ಇಸ್ರೇಲ್‌ಗೆ ಶಾಶ್ವತವಾಗಿ ಗಾಝಾವನ್ನು ಆಕ್ರಮಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದ್ದರೂ, ಈ ಬಗೆಗೆನ ಇಸ್ರೇಲ್‌ ಬಯಕೆ ಗೌಪ್ಯವಾಗಿಲ್ಲ.

ಗಾಝಾ ಗಡಿಯಲ್ಲಿ ಈಜಿಪ್ಟ್‌ನ ವಿಶಾಲವಾದ ಕಡಿಮೆ ಜನಸಂಖ್ಯೆ ಹೊಂದಿರುವ ಸಿನೈ ಪ್ರದೇಶವಿದೆ, ಅಲ್ಲಿ ಭಾರೀ ಭದ್ರತಾ ವ್ಯವಸ್ಥೆ ಇದೆ. ಆದರೆ ಈಜಿಪ್ಟ್ ಗಾಝಾ ನಿರಾಶ್ರಿತರಿಗೆ ಗಡಿ ಪ್ರವೇಶಿಸದಂತೆ ಎಚ್ಚರಿಕೆ ನೀಡಿದೆ. ಇದು ಗಾಝಾಕ್ಕೆ ಮಾನವೀಯ ನೆರವು ನೀಡುತ್ತದೆ, ಆದರೆ ಗಾಝಾದಿಂದ ಈಜಿಪ್ಟ್‌ಗೆ ಪ್ಯಾಲೆಸ್ತೀನಿಯರ ಪಲಾಯನಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದೆ.

ಈಜಿಪ್ಟ್‌ನ ಮತ್ತೊಂದು ಪ್ರಮುಖ ಕಾಳಜಿ ಅದರ ಭದ್ರತೆಯಾಗಿದೆ. ಪ್ಯಾಲೆಸ್ತೀನಿಯನ್ನರಿಗೆ ಸಿನೈನಲ್ಲಿ ಭದ್ರತೆ ಒದಗಿಸಿದರೆ, ಈಜಿಪ್ಟ್ ಪ್ರದೇಶ ಪ್ರತಿರೋಧ ಕಾರ್ಯಾಚರಣೆಗೆ ಕಾರಣವಾಗಬಹುದು. ಇದು ಈಜಿಪ್ಟ್ ಮತ್ತು ಇಸ್ರೇಲ್‌ ನಡುವೆ ಮಿಲಿಟರಿ ಸಂಘರ್ಷಕ್ಕೆ ಕಾರಣವಾಗಬಹುದು. ನೆತನ್ಯಾಹು ಮುಂಬರುವ ವಾರಗಳಲ್ಲಿ ರಫಾದ ಮೇಲೆ ಆಕ್ರಮಣ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಅದೇ ಸಮಯದಲ್ಲಿ ಈಜಿಪ್ಟ್ ತನ್ನ ಗಡಿಯನ್ನು ಬಲಪಡಿಸಲು ಮುಂದಾಗಿದೆ.

ಇದನ್ನು ಓದಿ: ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...